
ನವದೆಹಲಿ, ಮಾರ್ಚ್ 29: ನವದೆಹಲಿಯ ಕೆಡಿ ಜಾಧವ್ ಇಂಡೋರ್ ಹಾಲ್ನಲ್ಲಿ ನಡೆಯುತ್ತಿರುವ ಯೋನೆಕ್ಸ್ ಸನ್ರೈಸ್ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಪಿವಿ ಸಿಂಧು ಮತ್ತು ಕಿದಂಬಿ ಶ್ರೀಕಾಂತ್ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದ್ದಾರೆ.
ಮಹಿಳಾ ವಿಭಾಗದ ಸಿಂಗಲ್ಸ್ ಸ್ಪರ್ಧೆಯಲ್ಲಿ 2017ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಸಿಂಧು, ಹಾಂಕಾಂಗ್ನ ಡೆಂಗ್ ಜಾಯ್ ಕ್ಸುವಾನ್ ವಿರುದ್ಧ 21-11, 21-13ರ ಜಯ ದಾಖಲಿಸುವ ಮೂಲಕ ಮುನ್ನಡೆ ಗಿಟ್ಟಿಸಿಕೊಂಡಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದ ಸ್ಪರ್ಧೆಯಲ್ಲಿ ಶ್ರೀಕಾಂತ್ ಅವರು ಚೀನಾದ ಲು ಗುವಾಂಗ್ಜು ವಿರುದ್ಧ 21-11, 21-16 ನೇರ ಸೇಟ್ ಜಯದೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಪುರುಷರ ಸಿಂಗಲ್ಸ್ನಲ್ಲಿ ಭಾರತದ ಬಿ ಸಾಯ್ ಪ್ರಣೀತ್ ಮತ್ತು ಪಾರುಪಳ್ಳಿ ಕಶ್ಯಪ್ ಕೂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.