1. ಕುಲದೀಪ್ ಯಾದವ್
ಕಳೆದ ಕೆಲ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮಂಕಾಗಿರುವ ಕುಲದೀಪ್ ಯಾದವ್ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲರಾಗುವ ಲಕ್ಷಣಗಳು ಹೆಚ್ಚಾಗಿ ಕಾಣಿಸುತ್ತಿವೆ. ಇತ್ತೀಚೆಗಷ್ಟೇ ಶ್ರೀಲಂಕಾ ಪ್ರವಾಸದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದ ಕುಲದೀಪ್ ಯಾದವ್ ಏಕದಿನ ಪಂದ್ಯವೊಂದರಲ್ಲಿ 2 ವಿಕೆಟ್ ಪಡೆದರು ಹಾಗೂ ಇನ್ನುಳಿದ ಪಂದ್ಯಗಳಲ್ಲಿಯೂ ಸಾಧಾರಣ ಮಟ್ಟದಲ್ಲಿ ವಿಕೆಟ್ ಪಡೆದ ಕುಲದೀಪ್ ಯಾದವ್ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತನ್ನನ್ನು ಆಯ್ಕೆಗಾರರು ಆಯ್ಕೆ ಮಾಡುವಂತಹ ಉತ್ತಮ ಪ್ರದರ್ಶನವನ್ನೇನೂ ನೀಡಲಿಲ್ಲ. ಹೀಗಾಗಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಕುಲದೀಪ್ ಯಾದವ್ ಮಿಸ್ ಮಾಡಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.
2. ಮನೀಷ್ ಪಾಂಡೆ
ತನ್ನನ್ನು ತಾನು ಸಾಬೀತುಪಡಿಸಿಕೊಳ್ಳಲು ಸಾಲು ಸಾಲು ಅವಕಾಶಗಳು ಸಿಕ್ಕರೂ ಸಹ ಸದುಪಯೋಗಪಡಿಸಿಕೊಳ್ಳದ ಕನ್ನಡಿಗ ಮನೀಷ್ ಪಾಂಡೆ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತನ್ನನ್ನು ಆಯ್ಕೆ ಮಾಡುವಂತೆ ಆಯ್ಕೆಗಾರರನ್ನು ತನ್ನ ಆಟದ ಮೂಲಕ ಮನವೊಲಿಸುವಲ್ಲಿ ವಿಫಲರಾಗಿದ್ದಾರೆ. ಇತ್ತೀಚೆಗಷ್ಟೇ ಶ್ರೀಲಂಕಾ ಪ್ರವಾಸದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡ ಮನೀಷ್ ಪಾಂಡೆ ಆಡಿದ 3 ಏಕದಿನ ಪಂದ್ಯಗಳಲ್ಲಿ 26,37 ಮತ್ತು 11 ರನ್ಗಳನ್ನು ಕಲೆ ಹಾಕುವುದರ ಮೂಲಕ ನೀರಸ ಪ್ರದರ್ಶನವನ್ನು ನೀಡಿದರು. ಹೀಗಾಗಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಮನೀಷ್ ಪಾಂಡೆಗೆ ಅವಕಾಶ ನೀಡುವುದು ದೂರದ ಮಾತು.
3. ಶ್ರೇಯಸ್ ಐಯ್ಯರ್
ಕಳೆದ ಇಂಗ್ಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ 67 ಮತ್ತು 37 ರನ್ ಬಾರಿಸಿ ಉತ್ತಮ ಪ್ರದರ್ಶನವನ್ನು ನೀಡಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅವಕಾಶ ಪಡೆದುಕೊಳ್ಳುವುದು ಖಚಿತ ಎಂಬ ಭರವಸೆಯನ್ನು ಮೂಡಿಸಿದ್ದ ಶ್ರೇಯಸ್ ಐಯ್ಯರ್ ಸದ್ಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಅವಕಾಶ ಪಡೆದುಕೊಳ್ಳುವುದು ಅನುಮಾನ ಮೂಡಿಸಿದೆ. ಹೌದು ಐಪಿಎಲ್ ಆರಂಭಕ್ಕೂ ಮುನ್ನವೇ ಗಾಯಕ್ಕೊಳಗಾಗಿರುವ ಶ್ರೇಯಸ್ ಐಯ್ಯರ್ ಇನ್ನೂ ಸಹ ಸಂಪೂರ್ಣವಾದ ಚೇತರಿಕೆಯನ್ನು ಕಂಡಿಲ್ಲ. ಹೀಗಾಗಿ ಮುಂದುವರಿಯಲಿರುವ ಐಪಿಎಲ್ ಟೂರ್ನಿಯ ಪೂರ್ತಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವವನ್ನು ರಿಷಭ್ ಪಂತ್ ಅವರೇ ನಿರ್ವಹಿಸಲಿದ್ದು, ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಸಹ ಶ್ರೇಯಸ್ ಐಯ್ಯರ್ ಅಲಭ್ಯರಾಗುವ ಸಾಧ್ಯತೆಗಳು ಹೆಚ್ಚಿವೆ.