ಆಸರೆಯಾದ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್
65 ರನ್ ಆಗುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದು ಭಾರತ ತಂಡಕ್ಕೆ ಆಸರೆಯಾಗಿದ್ದು, ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ ಈ ಜೋಡಿ 107 ರನ್ ಜೊತೆಯಾಟ ಆಡುವ ಮೂಲಕ ಭಾರತಕ್ಕೆ ಗೆಲುವಿನ ಭರವಸೆ ಮೂಡಿಸಿದರು.
ಶ್ರೇಯಸ್ ಅಯ್ಯರ್ 102 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್ ನೆರವಿನಿಂದ 82 ರನ್ ಗಳಿಸಿದರೆ, ಅಕ್ಷರ್ ಪಟೇಲ್ 56 ಎಸೆತಗಳಲ್ಲಿ 2 ಬೌಂಡರಿ 3 ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರು. ಆದರೆ ಇವರಿಬ್ಬರು ಔಟಾದ ಬಳಿಕ ಭಾರತ ಮತ್ತೆ ಸಂಕಷ್ಟಕ್ಕೆ ಸಿಲುಕಿತು.
ಮೂರನೇ ಏಕದಿನ ಪಂದ್ಯಕ್ಕೆ ರೋಹಿತ್ ಅಲಭ್ಯ ಸಾಧ್ಯತೆ: ಟೆಸ್ಟ್ ಸರಣಿಗೂ ಅನುಮಾನ!
ಗಾಯದ ನಡುವೆ ರೋಹಿತ್ ಭರ್ಜರಿ ಬ್ಯಾಟಿಂಗ್
ಅಕ್ಷರ್ ಪಟೇಲ್ ಮತ್ತು ಶ್ರೇಯಸ್ ಅಯ್ಯರ್ ಔಟ್ ಆದ ನಂತರ ಶಾರ್ದೂಲ್ ಠಾಕುರ್ ಮತ್ತು ದೀಪಕ್ ಚಹರ್ ಬೇಗನೆ ಔಟ್ ಆದರು. ಗಾಯಗೊಂಡಿದ್ದರೂ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡಲು ಬಂದರು.
28 ಎಸೆತಗಳಲ್ಲಿ 3 ಬೌಂಡರಿ 5 ಸಿಕ್ಸರ್ ಸಹಿತ 51 ರನ್ ಗಳಿಸಿದರೂ ಕೂಡ ತಂಡವನ್ನು ಸೋಲಿನಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. ರೋಹಿತ್ ಶರ್ಮಾಗೆ ಇನ್ನೊಂದು ಬದಿಯಿಂದ ಸರಿಯಾದ ಬೆಂಬಲ ಸಿಗಲಿಲ್ಲ, ಮೊಹಮ್ಮದ್ ಸಿರಾಜ್ 12 ಎಸೆತಗಳಲ್ಲಿ 2 ರನ್ ಗಳಿಸಿದರು. ಕೊನೆಯ ಓವರ್ ನಲ್ಲಿ 20 ರನ್ ಗಳಿಸಿಬೇಕಾದಾಗ ಮುಸ್ತಾಫಿಜುರ್ ರೆಹಮಾನ್ ಉತ್ತಮವಾಗಿ ಬೌಲಿಂಗ್ ಮಾಡಿದರು 14 ರನ್ ಬಿಟ್ಟುಕೊಟ್ಟು ಬಾಂಗ್ಲಾದೇಶಕ್ಕೆ 5 ರನ್ಗಳ ರೋಚಕ ಜಯ ಸಾಧಿಸಿದರು.
ಭರ್ಜರಿ ಶತಕ ಸಿಡಿಸಿದ ಮೆಹಿದಿ ಹಸನ್
ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಬಾಂಗ್ಲಾದೇಶಕ್ಕೆ ಆಸರೆಯಾಗಿದ್ದು ಮಹ್ಮದುಲ್ಲಾ ರಿಯಾದ್ ಮತ್ತು ಮೆಹಿದಿ ಹಸನ್ ಮೀರಜ್. ಮಹ್ಮದುಲ್ಲಾ ರಿಯಾದ್ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡುವ ಮೂಲಕ ಅರ್ಧಶತಕ ಸಿಡಿಸಿದರು. ಅವರು 96 ಎಸೆತಗಳಲ್ಲಿ 7 ಬೌಂಡರಿ ಸಹಿತ 77 ರನ್ ಗಳಿಸಿದರು.
ಕಳೆದ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಬಾಂಗ್ಲಾದೇಶದ ಗೆಲುವಿಗೆ ಕಾರಣವಾಗಿದ್ದ ಮೆಹಿದಿ ಹಸನ್ ಮೀರಜ್, ಎರಡನೇ ಪಂದ್ಯದಲ್ಲಿ ತಮ್ಮ ಅತ್ಯುತ್ತಮ ಫಾರ್ಮ್ ಮುಂದುವರೆಸಿದರು. 83 ಎಸೆತಗಳಲ್ಲಿ 8 ಬೌಂಡರಿ 4 ಭರ್ಜರಿ ಸಿಕ್ಸರ್ ಸಹಿತ, ತಮ್ಮ ಚೊಚ್ಚಲ ಶತಕವನ್ನು ದಾಖಲಿಸಿದರು.
ಉಭಯ ತಂಡಗಳ ಪ್ಲೇಯಿಂಗ್ XI
ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್
ಬಾಂಗ್ಲಾದೇಶ : ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರಹಮಾನ್