For Quick Alerts
ALLOW NOTIFICATIONS  
For Daily Alerts
 

ದ.ಆಫ್ರಿಕಾ ವಿರುದ್ಧ ಟಿ20 ಸರಣಿ: ಟೀಂ ಇಂಡಿಯಾ ಸೆಲೆಕ್ಷನ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಆಕಾಶ್ ಚೋಪ್ರಾ

Team india

ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಿರುವ ಕುರಿತಾಗಿ ಮಾಜಿ ಟೀಂ ಇಂಡಿಯಾ ಆಟಗಾರ ಆಕಾಶ್ ಚೋಪ್ರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 18 ಆಟಗಾರರ ಆಯ್ಕೆ ಮಾಡುವ ಅಗತ್ಯತೆ ಮತ್ತು ಎಲ್ಲಾ ಆಟಗಾರರಿಗೆ ನಿಜವಾಗಿಯೂ ಅವಕಾಶ ಸಿಗುತ್ತಾ ಎಂದು ಪ್ರಶ್ನಿಸಿದ್ದಾರೆ.

ಜೂನ್ 9 ರಿಂದ ಆರಂಭಗೊಳ್ಳುವ ಮೊದಲ ಟಿ20 ಪಂದ್ಯವು ದೆಹಲಿಯಲ್ಲಿ ನಡೆಯಲಿದ್ದು, ಜೂನ್ 12 ಎರಡನೇ ಟಿ20 ಕಟಕ್, ಜೂನ್ 14 ಮೂರನೇ ಟಿ20 ವಿಶಾಖಪಟ್ಟಣಂ, ಜೂನ್ 17 ನಾಲ್ಕನೇ ಟಿ20 ರಾಜ್‌ಕೋಟ್‌, ಜೂನ್ 19 ಐದನೇ ಟಿ20 ಬೆಂಗಳೂರಿನಲ್ಲಿ ನಡೆಯಲಿದೆ. ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಭಾರತ ಮುನ್ನಡೆಯಲಿದ್ದು, ರೋಹಿತ್ ಶರ್ಮಾ, ಕೊಹ್ಲಿ ಮತ್ತು ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.

18 ಆಟಗಾರರಲ್ಲಿ ಎಲ್ಲರಿಗೂ ಅವಕಾಶ ನೀಡಲು ಸಾಧ್ಯವೇ ಇಲ್ಲ

18 ಆಟಗಾರರಲ್ಲಿ ಎಲ್ಲರಿಗೂ ಅವಕಾಶ ನೀಡಲು ಸಾಧ್ಯವೇ ಇಲ್ಲ

ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಆಕಾಶ್ ಚೋಪ್ರಾ ಅಂತಹ ದೊಡ್ಡದಾದ ತಂಡದ ಆಯ್ಕೆಯು ಪ್ರತಿಕೂಲತೆಯನ್ನು ಸಾಬೀತುಪಡಿಸಬಹುದು ಎಂದು ಲೆಕ್ಕಾಚಾರ ಮಾಡಿದ್ದಾರೆ.

"18 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ ಮತ್ತು ಅದರಲ್ಲಿ ಐವರು ವೇಗದ ಬೌಲರ್‌ಗಳು ಮತ್ತು ನಾಲ್ವರು ಸ್ಪಿನ್ನರ್‌ಗಳನ್ನು ಸೇರಿಸಲಾಗಿದೆ. ನೀವು 18 ಆಟಗಾರರನ್ನು ಆಯ್ಕೆ ಮಾಡಿದಾಗ, ನೀವು ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಾಗುವುದಿಲ್ಲ, ಮತ್ತು ನಂತರ ಮಾಡಿದ ನಿರ್ಧಾರಕ್ಕೆ ನೀವು ವಿಷಾದಿಸುತ್ತೀರಿ, ನೀವು ಏನು ಮಾಡಿದ್ದೀರಿ, ನಿಮಗೆ ಆಯ್ಕೆಗಳಿದ್ದರೂ ಸಹ ಎಲ್ಲರಿಗೂ ನಿಜವಾಗಿಯೂ ಅವಕಾಶ ನೀಡಲು ಸಾಧ್ಯವೇ?'' ಎಂದು ಆಕಾಶ್ ಚೋಪ್ರಾ ಪ್ರಶ್ನಿಸಿದ್ದಾರೆ.

ಏಷ್ಯಾ ಕಪ್ ಹಾಕಿ: ಇಂದು ಭಾರತ vs ಪಾಕಿಸ್ತಾನ ಕಾಳಗ; ಪಂದ್ಯದ ಸಮಯ, ಎಲ್ಲಿ ಲೈವ್ ವೀಕ್ಷಿಸಬಹುದು?

ಕೋವಿಡ್ ಕಾರಣದಿಂದ ದೊಡ್ಡ ಸ್ಕ್ವಾಡ್‌ ರಚಿಸಲಾಗಿದೆಯೇ?

ಕೋವಿಡ್ ಕಾರಣದಿಂದ ದೊಡ್ಡ ಸ್ಕ್ವಾಡ್‌ ರಚಿಸಲಾಗಿದೆಯೇ?

ಕೋವಿಡ್-19 ಕೇಸ್‌ಗಳು ಮತ್ತೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಹಿರಿಯ ಆಟಗಾರರ ಆಯ್ಕೆ ಸಮಿತಿ 18 ಸದಸ್ಯರನ್ನೊಳಗೊಂಡ ತಂಡವನ್ನ ರಚಿಸಿರಬಹುದು. ಆದ್ರೂ ನನಗೆ ತಂಡದ ಆಯ್ಕೆ ಕುರಿತು ಅಸಮಾಧಾನವಿದೆ ಎಂದು ಚೋಪ್ರಾ ಹೇಳಿದ್ದಾರೆ.

"ನೀವು ಕೋವಿಡ್ ಕಾಲದಲ್ಲಿ ದೊಡ್ಡ ತಂಡವನ್ನು ಆಯ್ಕೆ ಮಾಡುತ್ತಿದ್ದೀರಿ. ಕೋವಿಡ್ ಬಿಟ್ಟಿದೆ ಎಂದು ನಾನು ಹೇಳುತ್ತಿಲ್ಲ, ಆದರೆ ನಾವು ಸಾಮಾನ್ಯತೆಯ ಹೋಲಿಕೆಗೆ ಹಿಂತಿರುಗಬಹುದು. ಇದು ಕಳೆದ ಎರಡರಿಂದ ಎರಡೂವರೆ ವರ್ಷಗಳಿಂದ ನಡೆಯುತ್ತಿದೆ, ಇನ್ನೂ ತಂಡದ ಬಲದಲ್ಲಿ ಯಾವುದೇ ಬದಲಾವಣೆಯಾಗಿಲ್ಲ; ಇದು ಸ್ವಲ್ಪ ನಿರಾಶೆಯನ್ನು ಅನುಭವಿಸುತ್ತದೆ'' ಎಂದು ಚೋಪ್ರಾ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹಾಗೂ ತಂಡದ ಒಟ್ಟಾರೆ ಆಯ್ಕೆ ಕುರಿತು ಮಾತನಾಡಿದ್ದಾರೆ.

ಆಯ್ಕೆದಾರರು 18 ಸದಸ್ಯರ ತಂಡವನ್ನು ಆಯ್ಕೆ ಮಾಡಬಾರದಿತ್ತು. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮುಂಚಿತವಾಗಿ ಕೆಎಲ್ ರಾಹುಲ್, ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಕೊನೆಯ ಎರಡು ಅಥವಾ ಮೂರು ಪಂದ್ಯಗಳಿಗೆ ವಿಶ್ರಾಂತಿ ಪಡೆಯಬಹುದು.

GT vs RR ಕ್ವಾಲಿಫೈಯರ್ 1: ಪಂದ್ಯದ ಸಂಭಾವ್ಯ ಆಡುವ ಬಳಗ ಮತ್ತು ಪಿಚ್ ವರದಿ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತದ ಸ್ಕ್ವಾಡ್‌

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತದ ಸ್ಕ್ವಾಡ್‌

ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

Story first published: Tuesday, May 24, 2022, 9:21 [IST]
Other articles published on May 24, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+