ಟೀಮ್ ಇಂಡಿಯಾದ ಭರವಸೆಯ ಆಟಗಾರ ಅಭಿಷೇಕ್ ಶರ್ಮಾ, ಇತ್ತೀಚಿಗೆ ನಡೆದ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಇವರ ಕ್ಲಾಸಿಕ್ ಪ್ರದರ್ಶನದ ಫಲವಾಗಿ ಇವರಿಗೆ ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿಯೂ ಲಭಿಸಿದೆ. ಈಗ ಈ ಸ್ಟಾರ್ ಪ್ಲೇಯರ್ ಹಾಗೂ ಟೀಮ್ ಇಂಡಿಯಾ ಇನ್ನೋರ್ವ ಆಟಗಾರ ಕುಲ್ ದೀಪ್ ಯಾದವ್ ಐಸಿಸಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ. ಈ ಪ್ರಶಸ್ತಿ ಯಾವುದು ? ಮತ್ತೆ ಈ ಪ್ರಶಸ್ತಿ ರೇಸ್ನಲ್ಲಿ ಯಾರೆಲ್ಲಾ ಇದ್ದಾರೆ? ಎಂಬ ವರದಿ ಇಲ್ಲಿದೆ.
ಪ್ರತಿ ತಿಂಗಳು ಐಸಿಸಿ ನೀಡುವ ತಿಂಗಳ ಆಟಗಾರ ಪ್ರಶಸ್ತಿಗೆ ಅಭಿಷೇಕ್ ಶರ್ಮಾ, ಕುಲ್ದೀಪ್ ಯಾದವ ಸೇರಿಂದತೆ ಜಿಂಬಾಬ್ವೆಯ ಬ್ರಿಯಾನ್ ಬೆನೆಟ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಸೆಪ್ಟಂಬರ್ನಲ್ಲಿ ಈ ಆಟಗಾರರು ನೀಡಿದ ಪ್ರದರ್ಶನದ ಆಧಾರದ ಮೇಲೆ ಈ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದೆ.

ದುಬೈನಲ್ಲಿ ನಡೆದ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಅಬ್ಬರಿಸಿದ್ದರು. ಇವರು ಈ ಟೂರ್ನಿಯಲ್ಲಿ ಆಡಿದ 7 ಪದ್ಯಗಳಲ್ಲಿ 314 ರನ್ ಸಿಡಿಸಿದ್ದಾರೆ. ಅಲ್ಲದೆ ಸೂಪರ್ 4 ಹಂತದ ಮೂರು ಪಂದ್ಯಗಳಲ್ಲಿ ಇವರು 200ಕ್ಕೂ ಹೆಚ್ಚಿನ ಸ್ಟ್ರೈಕ್ ರೇಟ್ನಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಇವರ ಅಮೋಘ ಬ್ಯಾಟಿಂಗ್ ಬಲದಿಂದ ಇವರು ಐಸಿಸಿ ಟಿ20 ಬ್ಯಾಟರ್ಗಳ ಪಟ್ಟಿಯಲ್ಲಿ ನಂಬರ್ 1 ಸ್ಥಾನವನ್ನು ಪಡೆದಿದ್ದಾರೆ. ವರು 931 ರೇಟಿಂಗ್ ಪಾಯಿಂಟ್ಗಳ್ನು ಹೊಂದಿದ್ದು, ಯಾರು ಮಾಡದ ಸಾಧನೆಯನ್ನು ಮಾಡಿ ಬೀಗಿದ್ದಾರೆ. ಅಭಿಷೇಕ್ ತಮ್ಮ ರೇಟಿಂಗ್ ಅನ್ನು ಇನ್ನಷ್ಟು ಹೆಚ್ಚಿಸಿಕೊಳ್ಳವ ಸಾಧ್ಯತೆ ಇದೆ. ಈ ತಿಂಗಳ ಅಂತ್ಯದಲ್ಲಿ ಟೀಮ್ ಇಂಡಿಯಾ ಆಸೀಸ್ ವಿರುದ್ಧ ಟಿ20 ಪಂದ್ಯಗಳನ್ನು ಆಡಲಿದೆ.
ಈ ಪ್ರಶ್ತಗೆ ನಾಮ ನಿರ್ದೇಶನಗೊಂಡ ಎರಡನೇ ಆಟಗಾರ ರಿಸ್ಟ್ ಸ್ಪಿನ್ ಬೌಲರ್ ಕುಲ್ದೀಪ್ ಯಾದವ್. ಇವರು ಏಷ್ಯಾಕಪ್ನಲ್ಲಿ ಬೆಂಕಿಯ ಪ್ರದರ್ಶನ ನೀಡಿದ್ದಾರೆ. ಇವರು 7 ಪಂದ್ಯಗಳಲ್ಲಿ 17 ವಿಕೆಟ್ ಪಡೆದಿದ್ದು, ಒಂದೇ ಆವೃತ್ತಿಯ ಏಷ್ಯಾ ಕಪ್ನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದ ಬೌಲರ್ ಎಂಬ ಹಿರಿಮೆಯನ್ನು ತನ್ನದಾಗಿಸಿಕೊಂಡಿದ್ದಾರೆ. ಇವರು ಫೈನಲ್ ಪಂದ್ಯದಲ್ಲೂ ಪಾಕ್ ವಿರುದ್ಧ ಸ್ಥಿರ ಪ್ರದರ್ಶನ ನೀಡಿ 4 ವಿಕೆಟ್ ಕಬಳಿಸಿ ತಂಡದ ಗೆಲುವಿನಲ್ಲಿ ಮಿಂಚಿದ್ದರು.

ಈ ಪ್ರಶಸ್ತಿಯ ರೇಸ್ನಲ್ಲಿ ಜಿಂಬಾಬ್ವೆಯ ಬ್ರಿಯಾನ್ ಬೆನೆಟ್ ಅವರನ್ನು ಸಹ ಇದ್ದಾರೆ. ಇವರು ಸೆಪ್ಟಂಬರ್ ತಿಂಗಳಿನಲ್ಲಿ 165.66 ಸ್ಟ್ರೈಕ್ ರೇಟ್ ನಲ್ಲಿ 497 ರನ್ ಕಲೆ ಹಾಕಿದ್ದಾರೆ. ಅಂತಿಮ ವಿಜೇತರನ್ನು ಐಸಿಸಿ ಶೀಘ್ರದಲ್ಲೇ ಘೋಷಿಸಲಿದೆ.
ಟೀಮ್ ಇಂಡಿಯಾ ಆಟಗಾರರಿಗೆ ಈ ಪ್ರಶಸ್ತಿ ಲಭಿಸಿದ್ದೇ ಆದಲ್ಲಿ ಈ ತಿಂಗಳು ಈ ಆಟಗಾರರಿಗೆ ಸ್ಮರಣೀಯವಾಗಲಿದೆ. ಹೀಗಾಗಿ ಈ ಪ್ರಶಸ್ತಿ ಯಾರ ಪಾಲಾಗುತ್ತದೆ ಎಂಬ ಕುತೂಹಲ ಮೂಡಿದೆ.