ಬೆಂಗಳೂರು, ಜನವರಿ 03: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೇಲೆ ನಿಗಾ ವಹಿಸಲು ರಚಿಸಲಾಗುವ ಸಮಿತಿಯನ್ನು ಸೇರದಿರಲು ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅವರು ನಿರ್ಧರಿಸಿದ್ದಾರೆ.
ಸುಪ್ರೀಂಕೋರ್ಟಿನಿಂದ ಫಾಲಿ ಎಸ್ ನಾರಿಮನ್ ಹಾಗೂ ಗೋಪಾಲ್ ಸುಬ್ರಮಣಿಯನ್ ಅವರನ್ನು ಅಮಿಕ್ಯೂಸ್ ಕ್ಯೂರಿಯಾಗಿ ಸೋಮವಾರ ನೇಮಿಸಲಾಗಿತ್ತು. ಬಿಸಿಸಿಐ ಕಾರ್ಯನಿರ್ವಹಣೆ ಮೇಲೆ ನಿಗಾ ಇಡಲು ಸೂಚಿಸಲಾಗಿತ್ತು.[ಠಾಕೂರ್ ಅಮಾನತು, ಟ್ವಿಟ್ಟರ್ ನಲಿ ಮಿಶ್ರ ಪ್ರತಿಕ್ರಿಯೆ]
ನ್ಯಾ. ಲೋಧಾ ಸಮಿತಿ ಶಿಫಾರಸುಗಳನ್ನು ಅನುಷ್ಠಾನಗಳನ್ನು ವಿಫಲವಾದ ಹಿನ್ನಲೆಯಲ್ಲಿ ಅನುರಾಗ್ ಠಾಕೂರ್ ಹಾಗೂ ಅಜಯ್ ಶಿರ್ಕೆ ಅವರನ್ನು ಅವರ ಸ್ಥಾನದಿಂದ ಕೆಳಗಿಳಿಸಲಾಗಿದ್ದು, ಇಬ್ಬರಿಗೂ ನೋಟಿಸ್ ಜಾರಿಗೊಳಿಸಲಾಗಿದೆ. ಹಾಲಿ ಉಪಾಧ್ಯಕ್ಷ ಸ್ಥಾನದಲ್ಲಿರುವ ಹಿರಿಯರೊಬ್ಬರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.(ಒನ್ಇಂಡಿಯಾ ಸುದ್ದಿ)