
ವಿರಾಟ್ ಕೊಹ್ಲಿ ಇದನ್ನು ಚಿಕ್ಕ ವಿಷಯವೆಂದು ಪರಿಗಣಿಸಿಲ್ಲ
ಭಾರತ ಏಕದಿನ ತಂಡದ ನಾಯಕತ್ವವನ್ನು ಕಳೆದುಕೊಂಡಿರುವುದನ್ನು ವಿರಾಟ್ ಕೊಹ್ಲಿ ಸಣ್ಣ ವಿಚಾರ ಎಂದು ಪರಿಗಣಿಸಿಲ್ಲ ಎಂಬುದು ತಿಳಿದಿದೆ ಎಂದಿರುವ ಬಿಸಿಸಿಐ ಅಧಿಕಾರಿಯೋರ್ವರು ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳನ್ನು ನೀಡಿ ಏಕದಿನ ಸರಣಿಯಿಂದ ದೂರ ಉಳಿದಿದ್ದಾರೆ ಆದರೆ ನಡೆಯುತ್ತಿರುವ ಯಾವುದನ್ನು ಕೂಡ ಸುಲಭವಾಗಿ ಸ್ವೀಕರಿಸುವುದು ಅಸಾಧ್ಯ ಎಂದಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸ ಮುಗಿದ ನಂತರ ಎಲ್ಲವನ್ನೂ ಸರಿಪಡಿಸಲಿದ್ದೇವೆ
ಇನ್ನೂ ಮುಂದುವರಿದು ಮಾತನಾಡಿರುವ ಆ ಬಿಸಿಸಿಐ ಅಧಿಕಾರಿ ದಕ್ಷಿಣ ಆಫ್ರಿಕಾ ಪ್ರವಾಸ ಮುಗಿದ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರನ್ನು ಕೂರಿಸಿ ಚರ್ಚೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ. ಹಾಗೂ ವಿರಾಟ್ ಕೊಹ್ಲಿಯನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ತೆಗೆದು ಹಾಕಿದ್ದು ತಂಡದ ಸ್ವಂತ ನಿರ್ಧಾರವಾಗಿತ್ತು ಮತ್ತು ಇದಕ್ಕೆ ವಿರಾಟ್ ಕೊಹ್ಲಿ ಸ್ವಾರ್ಥಿಯಾಗಿ ನಡೆದುಕೊಳ್ಳಬಾರದಿತ್ತು ಎಂದಿದ್ದಾರೆ. ಅಷ್ಟೇ ಅಲ್ಲದೆ ಸದ್ಯ ನಡೆಯುತ್ತಿರುವ ಬೆಳವಣಿಗೆಗಳು ತಂಡಕ್ಕೆ ಮಾರಕವಾಗಿದ್ದು ದಕ್ಷಿಣ ಆಫ್ರಿಕಾ ಸರಣಿ ಮುಗಿದ ನಂತರ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಆ ಬಿಸಿಸಿಐ ಅಧಿಕಾರಿ ಭರವಸೆ ನೀಡಿದ್ದಾರೆ. ಈ ಮೂಲಕ ಬಿಸಿಸಿಐ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೊತೆ ಚರ್ಚೆ ನಡೆಸಲಿದ್ದು ಸದ್ಯಕ್ಕೆ ಉಂಟಾಗಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಯತ್ನ ಮಾಡಲಿದೆ. ಈ ಮೂಲಕ ಸದ್ಯ ಹುಟ್ಟಿಕೊಂಡಿರುವ ಸಮಸ್ಯೆಗಳಿಗೆ ಹೊಸ ಪರಿಹಾರವಂತೂ ಲಭಿಸಲಿದ್ದು ಪುನಃ ನಾಯಕತ್ವ ಬದಲಾವಣೆಯೇನಾದರೂ ನಡೆಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಗಳ ವೇಳಾಪಟ್ಟಿ
ಮೊದಲಿಗೆ ಇತ್ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯಲಿದ್ದು ಇದರ ವೇಳಾ ಪಟ್ಟಿ ಈ ಕೆಳಕಂಡಂತಿದೆ
ಮೊದಲ ಟೆಸ್ಟ್: ಡಿಸೆಂಬರ್ 26-30, ಸೂಪರ್ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್ ಟೌನ್
ಹೀಗೆ 3 ಪಂದ್ಯಗಳ ಟೆಸ್ಟ್ ಸರಣಿ ಮುಗಿದ ನಂತರ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು ಅದರ ವೇಳಾಪಟ್ಟಿ ಹೀಗಿದೆ
ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್ ಟೌನ್, ಸಮಯ - 2.00 PM


Click it and Unblock the Notifications
