For Quick Alerts
ALLOW NOTIFICATIONS  
For Daily Alerts
 

ಬಿಸಿಸಿಐಗೆ ಬಿಸಿ ಮುಟ್ಟಿಸಿದ ವಿಶ್ವಕಪ್ ವೀರ ಯುವರಾಜ

By Mahesh

ಪುಣೆ, ಡಿ.22: ವಿಶ್ವಕಪ್ ಸಂಭಾವ್ಯ ತಂಡಕ್ಕೆ ಆಯ್ಕೆ ಮಾಡದೆ ಕಡೆಗಣಿಸಿದ ಬಿಸಿಸಿಐಗೆ ಎಡಗೈ ಬ್ಯಾಟ್ಸ್ ಮನ್, ವಿಶ್ವಕಪ್ ವೀರ ಯುವರಾಜ್ ಸಿಂಗ್ ತಕ್ಕ ಉತ್ತರ ನೀಡಿದ್ದಾರೆ. ಸತತ ಶತಕ ಸಿಡಿಸಿರುವ ಯುವರಾಜ್ ಸಿಂಗ್ ತಮ್ಮ ಆಟ ಇನ್ನೂ ಕಳೆಗುಂದಿಲ್ಲ ಎಂದು ಸಾಬೀತು ಮಾಡಿದ್ದಾರೆ.

ರಣಜಿ ಟೂರ್ನಿಯಲ್ಲಿ ಪಂಜಾಬ್ ಪರ ಆಡುವ ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅವರು ಹರ್ಯಾಣ ವಿರುದ್ಧದ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ 59 ರನ್ ಗಳಿಸಿ ನಂತರ ಎರಡನೇ ಇನ್ನಿಂಗ್ಸ್ ನಲ್ಲಿ 130 ರನ್ (160 ಎಸೆತ, 14X4, 5X6) ಬಾರಿಸಿ ತಂಡಕ್ಕೆ ಜಯ ತಂದು ಕೊಟ್ಟರು.

ಮಹಾರಾಷ್ಟ್ರ ವಿರುದ್ಧ ಪುಣೆಯ ಎಂಸಿಎ ಮೈದಾನದಲ್ಲಿ ನಡೆದಿರುವ ಎರಡನೇ ಪಂದ್ಯದಲ್ಲಿ ಸೋಮವಾರ ಮತ್ತೊಮ್ಮೆ ಯುವರಾಜ್ ಸಿಂಗ್ ಶತಕ ಸಿಡಿಸಿದ್ದಾರೆ. [30 ಮಂದಿ ಟೀಂ ಇಂಡಿಯಾ ಪ್ರಕಟ]

Yuvraj Singh hits 2nd consecutive century


ಚಹಾ ವಿರಾಮದ ವೇಳೆಗೆ ಯುವರಾಜ್ ಸಿಂಗ್ 114ರನ್ ಚೆಚ್ಚಿದ್ದರು. 139 ಎಸೆತಗಳಲ್ಲಿ 21 ಬೌಂಡರಿ, 1 ಸಿಕ್ಸ್ ಸಿಡಿಸಿದ್ದರು. ಮೊದಲ ಇನ್ನಿಂಗ್ಸ್ ನಲ್ಲಿ ಮಹಾರಾಷ್ಟ್ರ 210ರನ್ ಗಳಿಗೆ ಆಲೌಟ್ ಆಗಿದ್ದು, ಯುವರಾಜ್ ಸಿಂಗ್ ಶತಕದ ನೆರವಿನಿಂದ ಪಂಜಾಬ್ 262/4(ಚಹಾ ವಿರಾಮ, ಎರಡನೇ ದಿನ) ಸ್ಕೋರ್ ಮಾಡಿ ಇನ್ನಿಂಗ್ಸ್ ಮುನ್ನಡೆ ಪಡೆದುಕೊಂಡಿದೆ. [ಸರ್ವಶ್ರೇಷ್ಠ ವಿಶ್ವಕಪ್ ತಂಡ ಆಯ್ಕೆ ಮಾಡಿ]

ಟೀಂ ಇಂಡಿಯಾ ಪರ ಡಿಸೆಂಬರ್ 11, 2013ರಂದು ಯುವರಾಜ್ ಸಿಂಗ್ ಕೊನೆ ಏಕದಿನ ಕ್ರಿಕೆಟ್ ಪಂದ್ಯವಾಡಿದ್ದರು. ಇದಾದ ಮೇಲೆ ಕಳೆದ ಏಪ್ರಿಲ್ ನಲ್ಲಿ ಶ್ರೀಲಂಕಾ ವಿರುದ್ಧ ಟಿ20 ಪಂದ್ಯದಲ್ಲಿ ಭಾರತದ ಜರ್ಸಿ ಧರಿಸಿದ್ದರು. ಅದರೆ, ವಿಶ್ವಕಪ್ 30 ಜನ ಸದಸ್ಯರ ಸಂಭಾವ್ಯ ಪಟ್ಟಿಯಿಂದ ಯುವರಾಜ್ ಸಿಂಗ್ ಅವರನ್ನು ಹೊರಹಾಕಲಾಗಿದ್ದು, ಬಿಸಿಸಿಐ ಆಯ್ಕೆಯನ್ನು ಸಮರ್ಥಿಸಿಕೊಂಡಿತ್ತು.

Story first published: Wednesday, January 3, 2018, 10:12 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+