ಕಳಪೆ ಫಾರ್ಮ್ನಲ್ಲಿರುವ ಆ ಮೂವರ ಬೆಂಬಲಕ್ಕೆ ನಿಂತ ಕೋಚ್ ಮತ್ತು ನಾಯಕ
ಸದ್ಯ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ತಂಡದ ಪ್ರಮುಖ ಆಟಗಾರರಾದ ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ ಮತ್ತು ಇಶಾಂತ್ ಶರ್ಮಾ ಸಾಲು ಸಾಲು ಕಳಪೆ ಪ್ರದರ್ಶನಗಳನ್ನು ನೀಡುತ್ತಾ ಬಂದಿದ್ದಾರೆ. ಈ ಮೂವರು ಸಹ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂಬ ವಿಶ್ವಾಸದಲ್ಲಿರುವ ವಿರಾಟ್ ಕೊಹ್ಲಿ ಆ ಮೂವರಿಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಮಂಗಳವಾರವೇ ಪ್ರಕಟವಾಗಬೇಕಿತ್ತು ಭಾರತ ತಂಡ
ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಮೊದಲಿಗೆ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಡಿಸೆಂಬರ್ 26ರಂದು ಇತ್ತಂಡಗಳ ನಡುವೆ ಮೊದಲನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಮಂಗಳವಾರವೇ ಭಾರತ ತಂಡ ಪ್ರಕಟವಾಗಬೇಕಿತ್ತು. ಅತ್ತ ದಕ್ಷಿಣ ಆಫ್ರಿಕಾ ಕ್ರಿಕೆಟ್ ಬೋರ್ಡ್ ಮಂಗಳವಾರವೇ ಭಾರತ ವಿರುದ್ಧದ ಟೆಸ್ಟ್ ಸರಣಿಗೆ 21 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿತ್ತು. ಆದರೆ ಭಾರತ ತಂಡದ ಆಟಗಾರರ ಕುರಿತಾಗಿ ಆಯ್ಕೆಗಾರರು ಮತ್ತು ವಿರಾಟ್ ಕೊಹ್ಲಿ ಹಾಗೂ ರಾಹುಲ್ ದ್ರಾವಿಡ್ ನಡುವೆ ಚರ್ಚೆ ನಡೆದಿರುವ ಕಾರಣದಿಂದಾಗಿ ಭಾರತ ತಂಡ ಪ್ರಕಟಿಸುವಲ್ಲಿ ವಿಳಂಬವಾಗಿದೆ ಎನ್ನಲಾಗುತ್ತಿದೆ.
ಭಾರತ vs ದಕ್ಷಿಣ ಆಫ್ರಿಕಾ 3 ಪಂದ್ಯಗಳ ಟೆಸ್ಟ್ ಸರಣಿಯ ವೇಳಾಪಟ್ಟಿ
ಮೊದಲ ಟೆಸ್ಟ್: ಡಿಸೆಂಬರ್ 26-30, ಸೂಪರ್ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್ ಟೌನ್