
ಕೇಕ್ ಕಟ್ ಮಾಡಲಾರೆ
ಭಾರತಕ್ಕೆ ವಾಪಸ್ ಆಗಿದ್ದ ರಹಾನೆ ಬಳಗವನ್ನು ಆದರದಿಂದ ಬರ ಮಾಡಿಕೊಳ್ಳಲಾಗಿತ್ತು. ಜೊತೆಗೆ, ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಖುಷಿಗೆ ಕೇಕ್ ಕಟ್ ಮಾಡಿಕೊಳ್ಳುವಂತೆ ಕೇಳಿಕೊಳ್ಳಲಾಯ್ತು. ಆದರೆ ಅಜಿಂಕ್ಯ ರಹಾನೆ ಕೇಕ್ ಕಟ್ ಮಾಡಲು ಒಪ್ಪಲಿಲ್ಲ. ಅದಕ್ಕೊಂದು ಕಾರಣವಿತ್ತು.

ರಹಾನೆ ನಿಲುವಿಗೆ ಕಾರಣ
ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ಕೇಕ್ ಕಟ್ ಮಾಡಲು ರಹಾನೆ ಒಲ್ಲೆಯೆಂದಿದ್ದಕ್ಕೆ ಕಾರಣವಿದೆ. ಸಂಭ್ರಮಾಚರಿಸಲು ತಯಾರಿಸಲಾಗಿದ್ದ ಕೇಕ್ನ ಮೇಲೆ ಕಾಂಗರೂ ಚಿತ್ರವಿತ್ತು. ಹೀಗಾಗಿ ಸದಾ ಕ್ರೀಡಾಸ್ಫೂರ್ತಿ ಮೆರೆಯುವ ರಹಾನೆ, ಬೇರೊಂದು ದೇಶದ ರಾಷ್ಟ್ರೀಯ ಪ್ರಾಣಿಯ ಚಿತ್ರವಿರುವ ಕೇಕ್ ಕಟ್ ಮಾಡಲಾರೆ ಎಂದಿದ್ದಾರೆ.
ಬೋಗ್ಲೆಗೆ ರಹಾನೆ ವಿವರಣೆ
'ಕಾಂಗರೂ ಕೇಕ್' ಕಟ್ ಮಾಡಲು ಹಿಂದೆ ಸರಿದ ರಹಾನೆ ನಿಲುವಿನ ಬಗ್ಗೆ ಕ್ರೀಡಾ ಪತ್ರಕರ್ತ, ಕಾಮೆಂಟೇಟರ್ ಹರ್ಷ ಭೋಗ್ಲೆ ಅವರು ರಹಾನೆಯವರಲ್ಲಿ ಸಂವಾದವೊಂದರಲ್ಲಿ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ರಹಾನೆ, 'ಕಾಂಗರೂ ಆಸ್ಟ್ರೇಲಿಯಾದವರ ರಾಷ್ಟ್ರೀಯ ಪ್ರಾಣಿ. ಹಾಗಾಗಿ ನಾನು ಕೇಕ್ ಕಟ್ ಮಾಡಲಿಲ್ಲ. ನಿಮ್ಮ ಎದುರಾಳಿಗೂ ನೀವು ಗೌರವ ನೀಡಬೇಕು. ನೀವು ಗೆಲ್ಲಿ ಅಥವಾ ಇತಿಹಾಸ ನಿರ್ಮಿಸಿ; ನೀವು ನಿಮ್ಮ ಎದುರಾಳಿಯನ್ನೂ ಒಳ್ಳೆಯ ರೀತಿಯಲ್ಲಿ ಕಾಣಬೇಕು. ನೀವು ನಿಮ್ಮ ಎದುರಾಳಿ ವ್ಯಕ್ತಿ ಮತ್ತು ಬೇರೆ ದೇಶಗಳನ್ನೂ ಗೌರವದಿಂದ ಕಾಣಬೇಕು. ಹೀಗಾಗಿಯೇ ನಾನು ಕಾಂಗರೂ ಚಿತ್ರವಿದ್ದ ಕೇಕ್ ಕಟ್ ಮಾಡಲು ಒಪ್ಪಲಿಲ್ಲ,' ಎಂದು ವಿವರಿಸಿದ್ದಾರೆ.


Click it and Unblock the Notifications
