ಸಂಘಟಿತ ಪ್ರದರ್ಶನ ನೀಡಿದ ಭಾರತ
ಅಡಿಲೇಡ್ನಲ್ಲಿ ಎರಡನೇ ಇನ್ನಿಂಗ್ಸ್ನಲ್ಲಿ 36 ರನ್ಗಳಿಗೆ ಸಂಪೂರ್ಣವಾಗಿ ಕುಸಿಯುವ ಮೂಲಕ ಟೀಮ್ ಇಂಡಿಯಾ ಆಘಾತಕಾರಿಯಾಗಿ ಎರಡನೇ ಇನ್ನಿಂಗ್ಸ್ ಮುಗಿಸಿತ್ತು. ಇದರ ಪರಿಣಾಮವಾಗಿ ಹೀನಾಯ ಸೋಲು ಕಂಡಿದ್ದ ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಅದ್ಭುತವಾಗಿ ಪುಟಿದೇಳುವಲ್ಲಿ ಯಶಸ್ವಿಯಾಘಿತ್ತು. ತಂಡದ ಸಂಘಟಿತ ಪ್ರದರ್ಶನದ ಕಾರಣದಿಂದಾಗಿ ಭಾರತ ಆಸ್ಟ್ರೇಲಿಯಾವನ್ನು 8 ವಿಕೆಟ್ ಗಳಿಂದ ಮಣಿಸಿತ್ತು. ಹೀಗಾಗಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಈಗ 1-1 ರಿಂದ ಸಮಬಲಗೊಂಡಿದೆ.
ನಿನ್ನದು ದೊಡ್ಡ ನಿರೀಕ್ಷೆ
"ನಾನು ಡಲ್ಲಿಯಲ್ಲಿರುವ ನನ್ನ ಗೆಳೆಯರಲ್ಲಿ ಭಾರತ ಆಸ್ಟ್ರೇಲಿಯಾವನ್ನು ಟೆಸ್ಟ್ ಸರಣಿಯಲ್ಲಿ ಸೋಲಿಸಲಿದೆ ಎಂದು ಹೇಳಿದ್ದೇನೆ. ನಾನು ಅವರಲ್ಲಿ ಭಾರತದ ಬ್ಯಾಟಿಂಗ್ ಉತ್ತಮ ಪ್ರದರ್ಶನ ನೀಡಿದರೆ, ಮಧ್ಯಮ ಕ್ರಮಾಂಕ ಉತ್ತಮ ಪ್ರದರ್ಶನ ನೀಡಿದರೆ ಭಾರತ ಸರಣಿಯನ್ನು ಗೆಲ್ಲಲು ಹೆಚ್ಚಿನ ಸಾಧ್ಯತೆಯಿದೆ ಎಂದಿದ್ದೆ. ಆದರೆ ಅವರು ನೀನು ದೊಡ್ಡ ನಿರೀಕ್ಷೆಯನ್ನು ವ್ಯಕ್ತಪಡಿಸುತ್ತಿರುವೆ ಎಂದು ಪ್ರತಿಕ್ರಿಯಿಸಿದ್ದರು" ಎಂದು ಶೋಯೆಬ್ ಅಖ್ತರ್ ಹೇಳಿದ್ದಾರೆ.
ಸ್ಕೋರ್ ಬೋರ್ಡ್ ನೋಡಿ ಗೊಂದಲಕ್ಕೀಡಾಗಿದ್ದೆ
ಇನ್ನು ಇದೇ ಸಂದರ್ಭದಲ್ಲಿ ಶೋಯೆಬ್ ಅಖ್ತರ್ ಅಡಿಲೇಡ್ ಟೆಸ್ಟ್ನಲ್ಲಿ ಭಾರತ 39/9 ವಿಕೆಟ್ ಕಳೆದುಕೊಂಡಿದ್ದ ಬಗ್ಗೆಯೂ ಪ್ರತಿಕ್ರಿಯಿಸಿದರು. ಅಂದು ಸ್ಕೋರ್ ಬೋರ್ಡ್ ನೋಡಿ ಗೊಂದಲಕ್ಕೀಡಾಗಿದ್ದೆ ಎಂದು ಶೋಯೆಬ್ ಅಖ್ತರ್ ವಿವರಿಸಿದ್ದಾರೆ.