ಆಜೀವ ನಿಷೇಧ ಮರು ಪರಿಶೀಲಿಸುವಂತೆ ಬಿಸಿಸಿಐ ಕೋರಿದ ಅಂಕಿತ್ ಚವಾಣ್

ನವದೆಹಲಿ, ಜುಲೈ 4: ಮುಂಬೈ ಮತ್ತು ರಾಜಸ್ಥಾನ ರಾಯಲ್ಸ್ ತಂಡದ ಮಾಜಿ ಆಟಗಾರ ಅಂಕಿತ್ ಚವಾಣ್, ತನ್ನ ಮೇಲಿರುವ ಆಜೀವ ನಿಷೇಧ ಶಿಕ್ಷೆಯನ್ನು ಮರು ಪರಿಶೀಲಿಸುವಂತೆ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಮತ್ತು ಮುಂಬೈ ಕ್ರಿಕೆಟ್ ಅಸೋಸಿಯೇಶನ್ (ಎಂಸಿಎ) ಅನ್ನು ವಿನಂತಿಸಿಕೊಂಡಿದ್ದಾರೆ.
2013ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ ತಂಡದಲ್ಲಿದ್ದ ಎಸ್ ಶ್ರೀಶಾಂತ್, ಅಂಕಿತ್ ಚವಾಣ್ ಮತ್ತು ಅಜಿತ್ ಚಾಂಡಿಲ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಬಿಸಿಸಿಐನಿಂದ ಆಜೀವ ನಿಷೇಧ ಶಿಕ್ಷೆಗೆ ಗುರಿಯಾಗಿದ್ದರು. ಆದರೆ 2015ರಲ್ಲಿ ಸಾಕ್ಷ್ಯಾಧಾರದ ಕೊರತೆಯಿಂದಾಗಿ ದೆಹಲಿ ನ್ಯಾಯಾಲಯ ಮೂವರೂ ಆಟಗಾರ ಮೇಲಿನ ಎಲ್ಲಾ ಆರೋಪಗಳನ್ನು ಕೈಬಿಟ್ಟಿತ್ತು.
ಈ ಮೂವರು ಆಟಗಾರರಲ್ಲಿ ಶ್ರೀಶಾಂತ್ ಆಜೀವ ನಿಷೇಧವನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್ ಮೆಟ್ಟಿಲೇರಿದ್ದರು. ಆ ಬಳಿಕ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು 7 ವರ್ಷಗಳಿಗೆ ಕಡಿತಗೊಳಿಸಲಾಗಿತ್ತು. ಶ್ರೀಶಾಂತ್ ನಿಷೇಧ ಇದೇ ಸೆಪ್ಟೆಂಬರ್ಗೆ ಕೊನೆಗೊಳ್ಳಲಿದೆ. ಹೀಗಾಗಿ ಅವರ ಹೆಸರನ್ನು ಕೇರಳ ರಣಜಿಯ ಸಂಭಾವ್ಯ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.
ಈಗ ಅಂಕಿತ್ ಕೂಡ ಆಜೀವ ನಿಷೇಧ ಕಡಿಮೆಗೊಳಿಸುವಂತೆ ಬಿಸಿಸಿಐ ಮತ್ತು ಮುಂಬೈ ಅಸೋಸಿಯೇಶನ್ ಅನ್ನು ಕೋರಿಕೊಂಡಿದ್ದಾರೆ. ಆಜೀವ ನಿಷೇಧ ಮರುಪರಿಶೀಲಿಸುವಂತೆ ಚವಾಣ್ ಎಂಸಿಎಯನ್ನು ಕೋರಿಕೊಳ್ಳುತ್ತಿರುವುದು ಇದು ಎರಡನೇ ಬಾರಿ. 2015ರಲ್ಲೂ ಚವಾಣ್ ಆಜೀವ ನಿಷೇಧ ಕಡಿಮೆಗೊಳಿಸಲು ಪ್ರಯತ್ನಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications