ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ- ಅನುಷ್ಕಾ ಬೆನ್ನಿಗೆ ನಿಂತ ಯುವರಾಜ್ ಸಿಂಗ್

By Mahesh

ನವದೆಹಲಿ, ಮಾ.30: ಪ್ರತಿ ಬಾರಿ ಪ್ರಮುಖ ಟೂರ್ನಿಯಿಂದ ಟೀಂ ಇಂಡಿಯಾ ಔಟ್ ಆದಾಗಲೆಲ್ಲಾ ಒಬ್ಬ ಆಟಗಾರನನ್ನು ಬಲಿಪಶು ಮಾಡಿಕೊಂಡು ಮಜಾ ತೆಗೆದುಕೊಳ್ಳುವುದು ನಡೆಯುತ್ತಾ ಬಂದಿದೆ. ಇಶಾಂತ್ ಶರ್ಮ ಇರಬಹುದು ಅಥವಾ ಈಗ ವಿರಾಟ್ ಕೊಹ್ಲಿ ಇರಬಹುದು. ಅದರೆ, ಕೊಹ್ಲಿ ಸಾಧನೆ ಹಾಗೂ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡುವ ಮುನ್ನ ಎಚ್ಚರ ಎಂದು 'ವಿಶ್ವಕಪ್ ಹೀರೋ' ಯುವರಾಜ್ ಸಿಂಗ್ ಗುಡುಗಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮ ನಡುವಿನ ಸಂಬಂಧದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ, ಸೋಲು ಅಥವಾ ಗೆಲುವು ಎರಡನ್ನು ಸಮವಾಗಿ ಸ್ವೀಕರಿಸುವ ರಿಯಲ್ ಇಂಡಿಯನ್ ಅಭಿಮಾನಿಗಳಿಗೆ ನಾನು ಕೇಳಿಕೊಳ್ಳುತ್ತಿದ್ದೇನೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾರ ಖಾಸಗಿ ಲೈಫ್ ಅನ್ನು ಗೌರವಿಸಿ ಎಂದು ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ. [ಕೊಹ್ಲಿ- ಅನುಷ್ಕಾ ತೆಗಳುವುದನ್ನು ನಿಲ್ಲಿಸ್ರಪ್ಪ ಸಾಕು!]

World Cup Loss: Indians lash out at Anushka Sharma, Virat Kohli; now, Yuvraj Singh breaks silence

ಐಸಿಸಿ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಔಟಾಗಿದ್ದರ ಬಗ್ಗೆ ಚರ್ಚೆ ಇನ್ನೂ ಮುಂದುವರೆದಿದೆ. ಸಿಡ್ನಿಯಲ್ಲಿ ನಡೆದ ಪಂದ್ಯ ವೀಕ್ಷಿಸಲು ಕೊಹ್ಲಿ ಅವರ ಗೆಳತಿ ಬಾಲಿವುಡ್ ನಟಿ, ಬೆಂಗಳೂರಿನ ಹುಡುಗಿ ಅನುಷ್ಕಾ ಶರ್ಮ ಬಂದಿದ್ದು ಅನೇಕರ ಕಣ್ಣುಕುಕ್ಕಿಸಿತು.[ಕೊಹ್ಲಿ ಸಿಟ್ಟಿಗೆದ್ದು ಪತ್ರಕರ್ತನಿಗೆ ಉಗಿದಿದ್ದೇಕೆ?]

ಟೂರ್ನಿಯಿಂದ ಭಾರತ ಹೊರ ಬಿದ್ದ ಮೇಲೆ ಭಾರತಕ್ಕೆ ಹಿಂತಿರುಗುವಾಗ ಇಬ್ಬರು ಜೊತೆಯಲ್ಲೇ ಬಂದಿದ್ದು ಜಗತ್ತಿನ ಅದ್ಭುತ ಎಂಬಂತೆ ಕೆಲವರು ಪ್ರತಿಕ್ರಿಯಿಸಿದ್ದಕ್ಕೆ ಯುವರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.



ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಶತಕ ಬಾರಿಸುವ ಮೂಲಕ ಭರ್ಜರಿಯಾಗಿ ವಿಶ್ವಕಪ್ ಅಭಿಯಾನ ಆರಂಭಿಸಿದ ವಿರಾಟ್ ಕೊಹ್ಲಿ ನಂತರ ಸಾಧಾರಣ ಮಟ್ಟದ ಪ್ರದರ್ಶನ ನೀಡಿದರು. [ಸಚಿನ್ ಕಂಡ ಕನಸು ಈಡೇರಿಸಿದ ಕೊಹ್ಲಿ]

ಅದರೆ, ಅರ್ಧಶತಕ, 40ಪ್ಲಸ್ ರನ್ ಗಳಿಸಿ ಜೊತೆಯಾಟಗಳಲ್ಲಿ ಭಾಗಿಯಾಗಿದ್ದರು. ಸೆಮಿಫೈನಲ್ ನಲ್ಲಿ ಕೊಹ್ಲಿ ಮಿಂಚುವ ನಿರೀಕ್ಷೆ ಎಲ್ಲರಲ್ಲೂ ಇತ್ತು. ಅದರೆ, ಸಾವಿರಾರು ಬಾರಿ ಬೌಂಡರಿ ತಂದು ಕೊಡುತ್ತಿದ್ದ ಶಾಟ್ ಈ ಬಾರಿ ಕೈ ಕೊಟ್ಟಿತು. ಇದು ಅಭಿಮಾನಿಗಳನ್ನು ಕೆರಳಿಸಿತ್ತು. [ಕೊಹ್ಲಿ ಬದುಕಲ್ಲಿ ಎಂದೂ ಮರೆಯದ ದಿನ]

ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ ಸೇರಿದಂತೆ ಅನೇಕ ಕ್ರಿಕೆಟರ್ ಗಳು ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಬೆನ್ನು ತಟ್ಟಿದ್ದರು, ಯಾವ ಆಟಗಾರನನ್ನು ಟಾರ್ಗೆಟ್ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.

ಈಗ ಯುವರಾಜ್ ಸಿಂಗ್ ಇದೇ ಕೆಲಸ ಮಾಡಿದ್ದಾರೆ. ನೋವುಂಟವರಿಗೆ ಮಾತ್ರ ನೋವಿನ ಅರಿವಾಗುತ್ತದೆ ಎಂಬುದನ್ನು ವಿವರಿಸಿ ಹೇಳಬೇಕಾಗಿಲ್ಲ.(ಒನ್ ಇಂಡಿಯಾ ಸುದ್ದಿ)

Story first published: Wednesday, January 3, 2018, 10:02 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X