
ಈ ಮೂವರಲ್ಲಿ ಯಾರಿಗೆ ಸ್ಥಾನ?
ರವೀಂದ್ರ ಜಡೇಜಾ ಟೂರ್ನಿಯಿಂದ ಹೊರಬಿದ್ದಿರುವ ಕಾರಣ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಜಡೇಜಾ ಸ್ಥಾನ ತುಂಬಲು ಅಕ್ಷರ್ ಪಟೇಲ್, ರಿಷಭ್ ಪಂತ್ ಹಾಗೂ ದೀಪಕ್ ಹೂಡಾ ನಡುವೆ ಪೈಪೋಟಿ ಏರ್ಪಟ್ಟಿದೆ. ಅಕ್ಷರ್ ಪಟೇಲ್ ರವೀಂದ್ರ ಜಡೇಜಾ ರೀತಿಯೇ ಎಡಗೈ ಆಲ್ ರೌಂಡರ್ ಆಟಗಾರನಾಗಿದ್ದು ಟಿ ಟ್ವೆಂಟಿಯಲ್ಲಿ ಸ್ಫೋಟಕ ಆಟವನ್ನಾಡುವ ಆಟಗಾರನಾಗಿರುವ ಕಾರಣ ಜಡೇಜಾ ಬದಲಿ ಆಟಗಾರನಾಗಿ ಕಣಕ್ಕಿಳಿಯಲು ಸರಿಯಾದ ಆಯ್ಕೆ ಎನಿಸಿಕೊಂಡಿದ್ದರೆ, ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ಈ ರೇಸ್ನಲ್ಲಿದ್ದಾರೆ. ಇನ್ನು ಈ ಇಬ್ಬರು ಮಾತ್ರವಲ್ಲದೇ ಇತ್ತೀಚಿನ ದಿನಗಳಲ್ಲಿ ನಡೆದ ಪಂದ್ಯಗಳಲ್ಲಿ ಉತ್ತಮ ಆಲ್ ರೌಂಡರ್ ಪ್ರದರ್ಶನ ನೀಡಿರುವ ದೀಪಕ್ ಹೂಡಾ ಕೂಡ ಜಡೇಜಾ ಸ್ಥಾನ ತುಂಬಲು ಸಿದ್ಧರಿದ್ದಾರೆ. ಹೀಗೆ ಲಭ್ಯವಿರುವ ಈ ಮೂವರಲ್ಲಿ ಯಾರಿಗೆ ಜಡೇಜಾ ಬದಲಿ ಆಟಗಾರನಾಗಿ ತಂಡದ ಆಡುವ ಬಳಗದಲ್ಲಿ ಸ್ಥಾನ ಸಿಗಲಿದೆ ಎಂಬುದು ಇದೀಗ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.

ಜಡೇಜಾ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಿಂದಲೂ ಔಟ್
ಇನ್ನು ಸದ್ಯ ಗಾಯದ ಸಮಸ್ಯೆಯಿಂದಾಗಿ ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯಿಂದ ಹೊರಬಿದ್ದಿರುವ ರವೀಂದ್ರ ಜಡೇಜಾ ಮುಂಬರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಸಹ ಅಲಭ್ಯರಾಗಲಿದ್ದಾರೆ ಎಂಬ ಬೇಸರದ ಸುದ್ದಿ ಇದೀಗ ಹೊರಬಿದ್ದಿದೆ. ಹೀಗಾಗಿ ಟೀಮ್ ಇಂಡಿಯಾ ರವೀಂದ್ರ ಜಡೇಜಾ ಬದಲಾಗಿ ಈ ಬೃಹತ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಆಸರೆಯಾಗಬಲ್ಲ ಆಲ್ ರೌಂಡರ್ ಆಟಗಾರನನ್ನು ಸಿದ್ಧಪಡಿಸಬೇಕಿದೆ.

ಭಾರತ ಮತ್ತು ಪಾಕಿಸ್ತಾನ ಸ್ಕ್ವಾಡ್
ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್.
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹಾರ್.
ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಏಷ್ಯಾಕಪ್ನಿಂದ ಹೊರಬಿದ್ದಿದ್ದು ಅಕ್ಷರ್ ಪಟೇಲ್ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದಾರೆ.
ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಶಹನವಾಜ್ ದಹಾನಿ, ಉಸ್ಮಾನ್ ಖಾದಿರ್, ಮೊಹಮ್ಮದ್ ಹಸನೈನ್, ಹಸನ್ ಅಲಿ.


Click it and Unblock the Notifications
