
ಕಳಪೆ ಫಾರ್ಮ್ ಮತ್ತು ಟೀಕೆ
ಇನ್ನು ಸತತವಾಗಿ ಫಾರ್ಮ್ ಕೊರತೆಯಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಬಗ್ಗೆ ಇತ್ತೀಚೆಗೆ ಸಾಕಷ್ಟು ಟೀಕೆಗಳು ಎದುರಾಗಿದೆ. ಅದರಲ್ಲೂ ಟಿ20 ತಂಡದಲ್ಲಿ ವಿರಾಟ್ ಕೊಹ್ಲಿಯ ಸ್ಥಾನದ ಬಗ್ಗೆಯೂ ಪ್ರಶ್ನೆಗಳು ಎದುರಾಗಿತ್ತು. ಆದರೆ ಬಿಸಿಸಿಐನ ಆಯ್ಕೆ ಸಮಿತಿ ಅನುಭವಿ ಆಟಗಾರನ ಮೇಲೆ ಭರವಸೆ ಇಟ್ಟಿದ್ದು ಏಷ್ಯಾ ಕಪ್ಗೆ ಆಯ್ಕೆ ಮಾಡಿರುವ 15 ಸದಸ್ಯರ ಬಳಗದಲ್ಲಿ ಅವಕಾಶ ನೀಡಲಾಗಿದೆ. ಶ್ರೇಯಸ್ ಐಯ್ಯರ್, ಅಕ್ಷರ್ ಪಟೇಲ್ ಹಾಗೂ ದೀಪಕ್ ಚಾಹರ್ ಅವರನ್ನು ಮೀಸಲು ಆಟಗಾರರನ್ನಾಗಿ ಹೆಸರಿಸಲಾಗಿದೆ.

ಏಷ್ಯಾ ಕಪ್ ಹಾಗೂ ವಿಶ್ವಕಪ್ ಗೆಲ್ಲುವುದೇ ಗುರಿ
ಇನ್ನು ಈ ವರ್ಷಾರಂಭದಲ್ಲಿ ನಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಗುರಿಯನ್ನು ಹೇಳಿಕೊಂಡಿದ್ದರು. ಏಷ್ಯಾ ಕಪ್ ಹಾಗೂ ವಿಶ್ವಕಪ್ನಲ್ಲಿ ಭಾರತ ತಂಡಕ್ಕೆ ಗೆಲ್ಲಲು ಸಹಾಯ ಮಾಡುವುದೇ ನನ್ನ ಪ್ರಮುಖ ಗುರಿ ಎಂದಿದ್ದರು ಮಾಜಿ ನಾಯಕ ಕೊಹ್ಲಿ. ತಂಡದ ಗೆಲುವಿಗಾಗಿ ತಾನು ಏನು ಮಾಡಲು ಕೂಡ ಸಿದ್ಧ ಎಂದಿದ್ದರು ವಿರಾಟ್ ಕೊಹ್ಲಿ. ಪ್ರಸ್ತುತ ವಿರಾಟ್ ಕೊಹ್ಲಿ ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದರೂ ಏಷ್ಯಾ ಕಪ್ನ ತಂಡದಲ್ಲಿ ಕೊಹ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪ್ರತಿಷ್ಠಿತ ಟೂರ್ನಿಯಲ್ಲಿ ಕೊಹ್ಲಿ ಫಾರ್ಮ್ಗೆ ಮರಳುವ ವಿಶ್ವಾಸದಲ್ಲಿದ್ದಾರೆ.

ಗಾಯದಿಂದ ಹೊರಗುಳಿದಿದ್ದಾರೆ ಇಬ್ಬರು ಆಟಗಾರರು
ಯುಎಇನಲ್ಲಿ ಆಗಸ್ಟ್ 28ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಟೂರ್ನಿಗೆ ಆಯ್ಕೆ ಮಾಡಿರುವ ಭಾರತೀಯ ಆಟಗಾರರ ತಂಡದಲ್ಲಿ ಇಬ್ಬರು ಆಟಗಾರರು ಗಾಯದ ಕಾರಣದಿಂದಾಗಿ ಹೊರಗುಳಿಯುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಜಸ್ಪ್ರೀತ್ ಬೂಮ್ರಾ ಹಾಗೂ ಮತ್ತೋರ್ವ ವೇಗಿ ಹರ್ಷಲ್ ಪಟೇಲ್ ಗಾಯಗೊಂಡಿದ್ದು ಬೆಂಗಳೂರಿನ ಎನ್ಸಿಎನಲ್ಲಿ ರಿಹ್ಯಾಹ್ಯಾಬ್ನಲ್ಲಿ ಭಾಗಿಯಾಗಿದ್ದಾರೆ ಎಂದು ಸ್ವತಃ ಬಿಸಿಸಿಐ ಸ್ಪಷ್ಟಪಡಿಸಿದೆ. ಹೀಗಾಗಿ ಭುವನೇಶ್ವರ್ ಕುಮಾರ್ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದು ಅರ್ಷ್ದೀಪ್ ಸಿಂಗ್ ಹಾಗೂ ಅವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಏಷ್ಯಾಕಪ್ಗೆ ಆಯ್ಕೆಯಾಗಿರುವ ಭಾರತ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್


Click it and Unblock the Notifications
