ದೀಪಕ್ ಹೂಡಾ ಕಣಕ್ಕಿಳಿದರೆ ಕಾರ್ತಿಕ್ ಬೆಂಚ್ ಕಾಯಲೇಬೇಕು!
ಪಾಕ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಭಾರತದ ಆಡುವ ಬಳಗದಲ್ಲಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದು, ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕ, ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕ ಮತ್ತು ಐದನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಕಣಕ್ಕಿಳಿಯುವುದು ಖಚಿತ. ಇನ್ನು ರವೀಂದ್ರ ಜಡೇಜಾ ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿದ್ದು, ಆರನೇ ಕ್ರಮಾಂಕ ಮಾತ್ರ ಸದ್ಯ ಖಾಲಿ ಇದೆ ಎನ್ನಬಹುದು. ಹೀಗಾಗಿ ಈ ಸ್ಥಾನಕ್ಕೆ ದೀಪಕ್ ಹೂಡಾ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿದ್ದು, ದಿನೇಶ್ ಕಾರ್ತಿಕ್ ಬೆಂಚ್ ಕಾಯುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.
ಕಾರ್ತಿಕ್ ಬದಲು ದೀಪಕ್ ಹೂಡಾ ಆಯ್ಕೆ ಏಕೆ?
ಇನ್ನು ದಿನೇಶ್ ಕಾರ್ತಿಕ್ ಬದಲು ದೀಪಕ್ ಹೂಡಾಗೆ ಆಡುವ ಅವಕಾಶ ನೀಡುವ ಸಾಧ್ಯತೆಗಳು ಇರುವುದಕ್ಕೆ ಕಾರಣ ಬೌಲಿಂಗ್. ಹೌದು, ದೀಪಕ್ ಹೂಡಾ ಬೌಲಿಂಗ್ ಮಾಡುವ ಕಾರಣ ಅವರನ್ನು ತಂಡದ ಆರನೇ ಬೌಲರ್ ಆಗಿ ಉಪಯೋಗಿಸಲು ಸಾಧ್ಯವಿದೆ. ಒಂದುವೇಳೆ ದೀಪಕ್ ಹೂಡಾ ಅವರ ಬದಲು ದಿನೇಶ್ ಕಾರ್ತಿಕ್ ಅವರಿಗೆ ಸ್ಥಾನ ನೀಡಿದರೆ ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ಸೇರಿ ತಂಡದ ಎಲ್ಲಾ ಆಲ್ ರೌಂಡರ್ ಮತ್ತು ಬೌಲರ್ಗಳು ತಮ್ಮ ಪಾಲಿನ ಸಂಪೂರ್ಣ 4 ಓವರ್ಗಳನ್ನು ಬೌಲಿಂಗ್ ಮಾಡಲೇಬೇಕಾಗುತ್ತದೆ. ದೀಪಕ್ ಹೂಡಾಗೆ ಅವಕಾಶ ನೀಡಿದರೆ ಒತ್ತಡದ ಸಂದರ್ಭಗಳಲ್ಲಿ ಬೌಲಿಂಗ್ ಬದಲಾವಣೆ ಮಾಡಬೇಕಾದಾಗ ಒಂದೆರಡು ಓವರ್ ಬೌಲಿಂಗ್ ಮಾಡಲಿದ್ದಾರೆ. ಹೀಗಾಗಿಯೇ ದಿನೇಶ್ ಕಾರ್ತಿಕ್ ಬದಲು ದೀಪಕ್ ಹೂಡಾಗೆ ಆಡುವ ಬಳಗದಲ್ಲಿ ಅವಕಾಶ ಲಭಿಸುವ ಸಾಧ್ಯತೆಗಳು ಹೆಚ್ಚಿವೆ.
ಟೀಮ್ ಇಂಡಿಯಾ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್.
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹಾರ್, ಅಕ್ಷರ್ ಪಟೇಲ್