
ರೋಹಿತ್ ಶರ್ಮಾ ಬದಲು ಕೆಎಲ್ ರಾಹುಲ್ ಅವರಿಂದ ಪತ್ರಿಕಾಗೋಷ್ಠಿ
ಸದ್ಯ ಹೊರಬಿದ್ದಿರುವ ಮಾಹಿತಿ ಪ್ರಕಾರ ನಾಯಕ ರೋಹಿತ್ ಶರ್ಮಾ ಬದಲಾಗಿ ಉಪನಾಯಕ ಕೆಎಲ್ ರಾಹುಲ್ ಅವರು ಇಂದು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರಿಕಾಗೋಷ್ಠಿಯಲ್ಲಿ ಕೆಎಲ್ ರಾಹುಲ್ ಟೀಮ್ ಇಂಡಿಯಾದ ಕೆಲ ಯೋಜನೆಗಳು ಹಾಗೂ ಆಡುವ ಬಳಗದ ಕುರಿತಾಗಿ ಮಾಹಿತಿ ನೀಡುವ ನಿರೀಕ್ಷೆಯಿದೆ. ರಾಹುಲ್ ಈ ಪತ್ರಿಕಾಗೋಷ್ಠಿಯನ್ನು ಮುಗಿಸಿದ ನಂತರ ಟೀಮ್ ಇಂಡಿಯಾ ಆಟಗಾರರು ಐಸಿಸಿ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸಗಳನ್ನು ಮುಂದುವರಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಟೀಮ್ ಇಂಡಿಯಾ ಆಡುವ ಬಳಗ ರಚಿಸುವುದೇ ದೊಡ್ಡ ತಲೆನೋವು
ಇನ್ನು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಯಾವ ಆಟಗಾರರಿಗೆ ಸ್ಥಾನ ನೀಡಬೇಕು ಎಂಬುದು ಇದೀಗ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತಂಡದಲ್ಲಿ ರಿಷಭ್ ಪಂತ್, ದಿನೇಶ್ ಕಾರ್ತಿಕ್ ಹಾಗೂ ದೀಪಕ್ ಹೂಡಾ ಈ ಮೂವರಲ್ಲಿ ಇಬ್ಬರಿಗೆ ಮಾತ್ರ ಆಡುವ ಅವಕಾಶ ನೀಡಲು ಸಾಧ್ಯವಿದ್ದು, ಈ ಮೂವರ ಪೈಕಿ ಯಾರಿಗೆ ರೋಹಿತ್ ಶರ್ಮಾ ಬಳಗದಲ್ಲಿ ಸ್ಥಾನ ಲಭಿಸಲಿದೆ ಎಂಬುದು ಇದೀಗ ಪ್ರಶ್ನಾರ್ಥಕವಾಗಿದೆ ಹಾಗೂ ಈ ಆಯ್ಕೆಯನ್ನು ಮಾಡುವುದು ತಂಡದ ನಾಯಕ ಮತ್ತು ಕೋಚ್ಗೆ ತಲೆನೋವಾಗಿ ಪರಿಣಮಿಸಿದೆ.

ಟೀಮ್ ಇಂಡಿಯಾ ಸ್ಕ್ವಾಡ್
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯುಜ್ವೇಂದ್ರ ಚಹಾಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್.
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹಾರ್, ಅಕ್ಷರ್ ಪಟೇಲ್


Click it and Unblock the Notifications
