ಸರಿಯಾದ ಅವಕಾಶ ನೀಡದಿದ್ದರೂ ಡಿಕೆ ಡ್ರಾಪ್!
ದಿನೇಶ್ ಕಾರ್ತಿಕ್ ಅವರಿಗೆ ಪಾಕಿಸ್ತಾನ ವಿರುದ್ಧದ ಆಡುವ ಬಳಗದಲ್ಲಿ ಹಾಗೂ ಹಾಂಕಾಂಗ್ ವಿರುದ್ಧದ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಈ ಎರಡೂ ಪಂದ್ಯಗಳ ಪೈಕಿ ದಿನೇಶ್ ಕಾರ್ತಿಕ್ ಎದುರಿಸಿದ್ದು ಕೇವಲ ಒಂದೇ ಒಂದು ಎಸೆತವನ್ನು ಮಾತ್ರ. ಹೀಗೆ ಕಣಕ್ಕಿಳಿದು ಆಡುವ ಅವಕಾಶ ಸಿಗದಂತಹ ದಿನೇಶ್ ಕಾರ್ತಿಕ್ ಅವರನ್ನು ದಿಢೀರನೆ ಆಡುವ ಬಳಗದಿಂದ ಕೈಬಿಡುವ ಅಗತ್ಯವೇನಿತ್ತು,ಇದರಂತ ಅನ್ಯಾಯ ಮತ್ತೊಂದಿಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
ಹೀಗಾದರೆ ಸಾಮರ್ಥ್ಯ ಹೇಗೆ ತಿಳಿಯಲಿದೆ?
ಇನ್ನು ದಿನೇಶ್ ಕಾರ್ತಿಕ್ ಬದಲು ರಿಷಬ್ ಪಂತ್ ಅವರಿಗೆ ಸ್ಥಾನ ನೀಡಿರುವುದರ ಕುರಿತು ಪ್ರತಿಕ್ರಿಯಿಸಿರುವ ಕೆಲ ನೆಟ್ಟಿಗರು ಈ ಆಯ್ಕೆ ಹಲವು ಗೊಂದಲಗಳಿಂದ ಕೂಡಿದೆ ಎಂದಿದ್ದಾರೆ. ಪಾಕ್ ವಿರುದ್ಧದ ಪ್ರಥಮ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಬದಲಾಗಿ ಪಂತ್ ಅವರಿಗೆ ಸ್ಥಾನ ನೀಡಲಾಗಿತ್ತು ಹಾಗೂ ಇದೀಗ ದಿನೇಶ್ ಕಾರ್ತಿಕ್ ಅವರಿಗೆ ಹೆಚ್ಚು ಆಡುವ ಅವಕಾಶವನ್ನು ನೀಡದೇ ಇಷ್ಟು ಬೇಗ ತಂಡದಿಂದ ಹೊರಗಿಡಲಾಗಿದೆ. ಹೀಗಿದ್ದರೆ ಯಾವ ಆಟಗಾರನ ಸಾಮರ್ಥ್ಯ ತಾನೇ ಸರಿಯಾಗಿ ತಿಳಿಯಲಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
ಆಡುವ ಬಳಗಗಳು
ಭಾರತ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್
ಬೆಂಚ್: ದಿನೇಶ್ ಕಾರ್ತಿಕ್, ಅವೇಶ್ ಖಾನ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್
ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಶ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ಮೊಹಮ್ಮದ್ ಹಸ್ನೇನ್, ನಸೀಮ್ ಶಾ
ಬೆಂಚ್: ಉಸ್ಮಾನ್ ಖಾದಿರ್, ಹೈದರ್ ಅಲಿ, ಹಸನ್ ಅಲಿ