
ರವೀಂದ್ರ ಜಡೇಜಾಗೆ ಬ್ಯಾಕ್ಅಪ್ ಆಗಿ ಅಕ್ಷರ್ ಪಟೇಲ್ ಆಯ್ಕೆಯಾಗಬೇಕಿತ್ತು
"ಕಳೆದ ವಿಶ್ವಕಪ್ನಲ್ಲಿ ಭಾರತ ತಂಡದ ಮ್ಯಾನೇಜ್ಮೆಂಟ್ ರವಿಚಂದ್ರನ್ ಅಶ್ವಿನ್ ಅವರನ್ನು ಪ್ರಯತ್ನಿಸಿದ್ದರು. ಆದರೆ, ಆಸ್ಟ್ರೇಲಿಯಾದ ಟಿ20 ವಿಶ್ವಕಪ್ನಲ್ಲಿ ಅವರಿಗೆ ಆಫ್ ಸ್ಪಿನ್ ಅಗತ್ಯವಿದ್ದರೆ ತಂಡ ದೀಪಕ್ ಹೂಡಾ ಅವರನ್ನು ಬಳಸಿಕೊಳ್ಳಬೇಕು ಎಂದು ನಾನು ಭಾವಿಸುತ್ತೇನೆ. ಹಾಗಾಗಿ, ರವೀಂದ್ರ ಜಡೇಜಾಗೆ ಬ್ಯಾಕ್ಅಪ್ ಆಗಿ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಬೇಕಿತ್ತು," ಎಂದು ಪಾರ್ಥಿವ್ ಪಟೇಲ್ ಅಭಿಪ್ರಾಯಪಟ್ಟರು.
ಯುಎಇನಲ್ಲಿ ನಡೆಯುವ ಏಷ್ಯಾ ಕಪ್ಗಾಗಿ ತಂಡದ ಆಯ್ಕೆಯ ಕುರಿತು ಮಾತನಾಡಿದ ಪಾರ್ಥಿವ್ ಪಟೇಲ್, ಭಾರತ ತಂಡದಲ್ಲಿ ಒಬ್ಬ ಕಡಿಮೆ ವೇಗಿಯನ್ನು ಆಯ್ಕೆ ಮಾಡಿದೆ ಎಂಬ ಸಾಮಾನ್ಯ ಅಭಿಪ್ರಾಯವನ್ನು ಒಪ್ಪಿಕೊಂಡರು.

ಮೂವರು ಸ್ಪಿನ್ನರ್ಗಳು ಮತ್ತು ನಾಲ್ವರು ವೇಗಿಗಳು ಬೇಕಿತ್ತು
"ಭಾರತವು ನಾಲ್ಕು ಸ್ಪಿನ್ನರ್ಗಳೊಂದಿಗೆ ಹೋಗಿದೆ, ಇದು ಯುಎಇಯಲ್ಲಿನ ಪರಿಸ್ಥಿತಿಗಳನ್ನು ಗಮನಿಸಿದರೆ ಸ್ವಲ್ಪ ಆಶ್ಚರ್ಯಕರವಾಗಿದೆ. ಅವರು ಕೇವಲ ಮೂರು ಸೀಮರ್ಗಳನ್ನು ಆಯ್ಕೆ ಮಾಡಿದ್ದಾರೆ, ಇದು ಒಂದು ಕಡಿಮೆಯಾಗಿದೆ ಎಂದು ನಾನು ಭಾವಿಸುತ್ತೇನೆ. ಅಲ್ಲಿ ಐಪಿಎಲ್ ಆಡಿದಾಗ ವೇಗಿಗಳಿಗೆ ಸ್ವಲ್ಪ ಸಹಾಯ ಸಿಕ್ಕಿರುವುದನ್ನು ನಾವು ನೋಡಿದರೆ, ಭಾರತ ತಂಡ ಮೂವರು ಸ್ಪಿನ್ನರ್ಗಳು ಮತ್ತು ನಾಲ್ವರು ವೇಗಿಗಳೊಂದಿಗೆ ಹೋಗಬೇಕಿತ್ತು," ಎಂದು ಪಾರ್ಥಿವ್ ಹೇಳಿದರು.

ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಮೇಲೆ ಎಲ್ಲರ ಕಣ್ಣು
ಟಿ20 ವಿಶ್ವಕಪ್ನ ತಯಾರಿಗಾಗಿ ಭಾರತವು ಏಷ್ಯಾ ಕಪ್ನಲ್ಲಿ ಪೂರ್ಣ ಸಾಮರ್ಥ್ಯದ ತಂಡವನ್ನು ಆಡುವ ನಿರೀಕ್ಷೆಯಿದೆ. ನಂತರ ಆಸ್ಟ್ರೇಲಿಯಾದಲ್ಲಿ ಇದೇ ತಂಡವನ್ನು ಆಯ್ಕೆ ಮಾಡಲಿದೆ. ಆದಾಗ್ಯೂ, ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಗಾಯಗೊಂಡಿರುವುದು ಬೌಲಿಂಗ್ನಲ್ಲಿ ತಂಡಕ್ಕೆ ಹಿನ್ನಡೆಯಾಗಬಹುದು ಎಂದರು.
2021ರ ಟಿ20 ವಿಶ್ವಕಪ್ನಲ್ಲಿ ಅವರು ಮಾಡಿದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಭಾರತ ತಂಡವು ನೋಡುತ್ತಿರುವ ಕಾರಣ, ತಂಡಕ್ಕೆ ಮರಳಿರುವ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರ ಮೇಲೆ ಎಲ್ಲರ ಕಣ್ಣುಗಳು ಇರುತ್ತವೆ ಎಂದು ಮಾಜಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಹೇಳಿದ್ದಾರೆ.

ಏಷ್ಯಾ ಕಪ್ 2022ಗೆ ಭಾರತದ ಪೂರ್ಣ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.
ಬ್ಯಾಕ್ ಅಪ್: ಶ್ರೇಯಸ್ ಅಯ್ಯರ್, ದೀಪಕ್ ಚಾಹರ್, ಅಕ್ಷರ್ ಪಟೇಲ್.


Click it and Unblock the Notifications












