
ಜಯ್ ಶಾ ತ್ರಿವರ್ಣ ಧ್ವಜ ತಿರಸ್ಕರಿಸಿದ್ದು ಈ ಕಾರಣಕ್ಕೆ!
ಬಿಸಿಸಿಐ ಕಾರ್ಯದರ್ಶಿಯಾಗಿರುವ ಜಯ್ ಶಾ ಏಷ್ಯಾ ಕ್ರಿಕೆಟ್ ಕೌನ್ಸಿಲ್ ( ಎಸಿಸಿ ) ಅಧ್ಯಕ್ಷ ಕೂಡ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಏಷ್ಯಾ ಕ್ರಿಕೆಟ್ ಕೌನ್ಸಿಲ್ ನಿಯಮದ ಪ್ರಕಾರ ಕೌನ್ಸಿಲ್ನ ಅಧ್ಯಕ್ಷ ಹುದ್ದೆಯಲ್ಲಿರುವವರು ಎಲ್ಲಾ ತಂಡಗಳನ್ನು ಸಮನಾಗಿ ಕಾಣಬೇಕು ಹಾಗೂ ತಂಡವೊಂದಕ್ಕೆ ಪ್ರತ್ಯೇಕ ಬೆಂಬಲವನ್ನು ನೀಡುವಂತಿಲ್ಲ. ಹೀಗಾಗಿಯೇ ಜಯ್ ಶಾ ಭಾರತದ ಧ್ವಜವನ್ನು ಪಂದ್ಯದ ನಂತರ ತಿರಸ್ಕರಿಸಿದ್ದರು.

ಅಬ್ಬರಿಸಿದ ಹಾರ್ದಿಕ್ ಪಾಂಡ್ಯ
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಿದ ಹಾರ್ದಿಕ್ ಪಾಂಡ್ಯ ಹಲವು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿದ್ದರು. ಆದರೆ ಪಾಕಿಸ್ತಾನ ವಿರುದ್ಧದ ಈ ಪಂದ್ಯದಲ್ಲಿ ಸಂಪೂರ್ಣ ಆಲ್ ರೌಂಡರ್ ಆಟವನ್ನಾಡಿದ ಹಾರ್ದಿಕ್ ಪಾಂಡ್ಯಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 3 ವಿಕೆಟ್ ಪಡೆಯುವುದರ ಜತೆಗೆ ಅಜೇಯ 33 ರನ್ಗಳನ್ನು ಚಚ್ಚಿದ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದ ಗೆಲುವಿನ ರೂವಾರಿಯಾದರು.

ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ?
ಸದ್ಯ ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿ ಮುಂದಿನ ಸುತ್ತಿನ ಹಾದಿಯನ್ನು ಸುಲಭ ಮಾಡಿಕೊಂಡಿರುವ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಹಾಂಗ್ ಕಾಂಗ್ ತಂಡದ ವಿರುದ್ಧ ಆಗಸ್ಟ್ 31ರ ಗುರುವಾರದಂದು ಸಂಜೆ 7.30ಕ್ಕೆ ಸೆಣಸಾಟ ನಡೆಸಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಮುಂದಿನ ಸುತ್ತನ್ನು ಪ್ರವೇಶಿಸಲಿದೆ.


Click it and Unblock the Notifications












