ಆತ ನಮಗೆ ಮುಖ್ಯ ಎಂದ ರೋಹಿತ್ ಶರ್ಮಾ
ಪಂದ್ಯದಲ್ಲಿ ಟಾಸ್ ಸೋತ ನಂತರ ಮಾತನಾಡಿದ ರೋಹಿತ್ ಶರ್ಮಾ ತಾವೂ ಸಹ ಬೌಲಿಂಗ್ ಆಯ್ದುಕೊಳ್ಳುವ ಯೋಜನೆಯಲ್ಲಿದ್ದೆವು ಎಂದು ಮಾತನಾಡಲಾರಂಭಿಸಿದರು. ನಂತರ ತಂಡದ ಆಡುವ ಬಳಗದ ಕುರಿತಾಗಿ ಮಾತನಾಡಿದ ರೋಹಿತ್ ಶರ್ಮಾ ಆಡುವ ಬಳಗದಲ್ಲಿ ಕೇವಲ ಒಂದು ಬದಲಾವಣೆಯಿದ್ದು, ಹಾರ್ದಿಕ್ ಪಾಂಡ್ಯ ಬದಲಾಗಿ ರಿಷಭ್ ಪಂತ್ ಕಣಕ್ಕಿಳಿಯುತ್ತಿದ್ದಾರೆ ಎಂದರು. ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾಗೆ ಅತಿಮುಖ್ಯವಾದ ಆಟಗಾರ ಎಂಬುದನ್ನು ಗಮನದಲ್ಲಿಟ್ಟುಕೊಂಡು ಈ ಪಂದ್ಯದಿಂದ ವಿಶ್ರಾಂತಿ ನೀಡಿರುವುದಾಗಿ ರೋಹಿತ್ ಶರ್ಮಾ ತಿಳಿಸಿದರು. ಈ ಮೂಲಕ ಮುಂದಿನ ಮುಖ್ಯ ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯಲಿದ್ದಾರೆ ಎಂಬ ವಿಷಯವನ್ನು ರೋಹಿತ್ ಶರ್ಮಾ ತಿಳಿಸಿದರು.
ಸೂಪರ್ 4 ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಆಡಿಸುವ ಯೋಜನೆ
ರೋಹಿತ್ ಶರ್ಮಾ ಹೇಳಿಕೆಯ ಪ್ರಕಾರ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬರುವ ಸೂಪರ್ 4 ಸುತ್ತಿನ ಪಂದ್ಯಗಳಲ್ಲಿ ಕಣಕ್ಕಿಳಿಸಲಾಗುತ್ತದೆ. ಆ ಸುತ್ತಿನಲ್ಲಿ ಹೆಚ್ಚು ಗೆಲ್ಲಲಿರುವ ತಂಡ ಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವ ಕಾರಣ ಪಂದ್ಯಗಳು ಮಹತ್ವದ್ದಾಗಿರಲಿದ್ದು, ಆ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಸುವುದು ರೋಹಿತ್ ಯೋಜನೆಯಾಗಿದೆ.
ಆಡುವ ಬಳಗಗಳು
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್ ಮತ್ತು ಅರ್ಷದೀಪ್ ಸಿಂಗ್
ಬೆಂಚ್ ದೀಪಕ್ ಹೂಡಾ, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಹಾರ್ದಿಕ್ ಪಾಂಡ್ಯ
ಹಾಂಗ್ ಕಾಂಗ್ ಆಡುವ ಬಳಗ: ನಿಜಾಕತ್ ಖಾನ್ ( ನಾಯಕ ) ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಷಾ, ಐಜಾಜ್ ಖಾನ್, ಸ್ಕಾಟ್ ಮೆಕೆಚ್ನಿ (ವಿಕೆಟ್ ಕೀಪರ್), ಜೀಶನ್ ಅಲಿ, ಹರೂನ್ ಅರ್ಷದ್, ಎಹ್ಸಾನ್ ಖಾನ್, ಆಯುಷ್ ಶುಕ್ಲಾ, ಮೊಹಮ್ಮದ್ ಘಜನ್ಫರ್
ಬೆಂಚ್ ಅತೀಕ್ ಇಕ್ಬಾಲ್, ಮೊಹಮ್ಮದ್ ಹುಹ್ಸಾಯ್ ಅಫ್ತಾನಾ ವಹೀದ್, ರಾವ್, ಅಹಾನ್ ತ್ರಿವೇದಿ