
ಜಿಂಬಾಬ್ವೆ ಪ್ರವಾಸದಲ್ಲಿ ದ್ರಾವಿಡ್ ಭಾರತದ ತಂಡದ ಭಾಗವಾಗಿರಲಿಲ್ಲ
ಜಿಂಬಾಬ್ವೆ ಪ್ರವಾಸದಲ್ಲಿ ರಾಹುಲ್ ದ್ರಾವಿಡ್ ಭಾರತದ ತಂಡದ ಭಾಗವಾಗಿರಲಿಲ್ಲ, ಇದೀಗ ರಾಹುಲ್ ದ್ರಾವಿಡ್ ಅವರು ಕೊರೊನಾ ಸೋಂಕಿಗೆ ತುತ್ತಾಗಿರುವ ಸುದ್ದಿ ಹೊರಬಂದ ಬಳಿಕ, ವಿವಿಎಸ್ ಲಕ್ಷ್ಮಣ್ ಏಷ್ಯಾ ಕಪ್ನಲ್ಲಿಯೂ ಕೋಚ್ ಪಾತ್ರವನ್ನು ಮುಂದುವರಿಸುವ ಸಾಧ್ಯತೆಯಿದೆ.
ಮತ್ತೊಂದೆಡೆ, ದುರದೃಷ್ಟಕರ ಗಾಯಗಳಿಂದಾಗಿ ಏಷ್ಯಾ ಕಪ್ ಪಂದ್ಯಾವಳಿಯಿಂದ ಹೊರಗುಳಿದಿರುವ ಪ್ರಮುಖ ಬೌಲಿಂಗ್ ಜೋಡಿ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಅವರ ಸೇವೆಯನ್ನು ಭಾರತ ತಂಡ ಈಗಾಗಲೇ ಹೊಂದಿಲ್ಲ. ರಾಹುಲ್ ದ್ರಾವಿಡ್ ಅವರನ್ನು ಕೈಬಿಡುವುದರಿಂದ ಭಾರತ ತಂಡವು ಏಷ್ಯಾ ಕಪ್ ಟೂರ್ನಮೆಂಟ್ಗೆ ತಂಡದಲ್ಲಿ ಅವರ ಕೆಲವು ಪ್ರಭಾವಿ ಸಿಬ್ಬಂದಿಗಳಿಲ್ಲದೆ ಮುನ್ನಡೆಯುತ್ತದೆ.

ಮೂರನೇ ಏಕದಿನ ಪಂದ್ಯದಲ್ಲಿ ನಿಧಾನವಾಗಿ ಆಡಿದ ರಾಹುಲ್
ಕೆಎಲ್ ರಾಹುಲ್ ಅವರು ಕೊರೊನಾ ವೈರಸ್ನಿಂದ ಚೇತರಿಸಿಕೊಂಡ ನಂತರ ತಂಡಕ್ಕೆ ಮರಳಿದರೂ, ಅವರು ಈ ಹಿಂದಿನಂತೆ ಬ್ಯಾಟ್ ಬೀಸಲಿಲ್ಲ ಮತ್ತು ಜಿಂಬಾಬ್ವೆ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ನಿಧಾನವಾಗಿ ಆಡಿದರು. ಕೆಎಲ್ ರಾಹುಲ್ ಅವರು ಭಾರತ ತಂಡಕ್ಕೆ ಹಿಂದಿರುಗುವ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ತೆರೆಯುವ ಸಾಧ್ಯತೆಯಿದೆ.

ಏಷ್ಯಾ ಕಪ್ಗೆ ವಿವಿಎಸ್ ಲಕ್ಷ್ಮಣ್ ಕೋಚ್ ಸಾಧ್ಯತೆ
ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರು ಏಷ್ಯಾ ಕಪ್ಗೆ ಹೋಗುವ ಹಿರಿಯ ತಂಡದೊಂದಿಗೆ ತಮ್ಮ ಕೋಚಿಂಗ್ ಅವಧಿಯನ್ನು ಮುಂದುವರೆಸುವ ಸಾಧ್ಯತೆಯಿದೆ.
ರಾಷ್ಟ್ರೀಯ ತಂಡದಲ್ಲಿ ಸ್ಥಾನಗಳಿಗಾಗಿ ತೀವ್ರ ಪೈಪೋಟಿಯ ನಡುವೆ ಡ್ರೆಸ್ಸಿಂಗ್ ರೂಮ್ನಲ್ಲಿ ವಿಷಯಗಳನ್ನು ಶಾಂತವಾಗಿಡುವ ಮತ್ತು ಆರೋಗ್ಯಕರ ವಾತಾವರಣವನ್ನು ಕಾಪಾಡಿಕೊಳ್ಳುವ ಕೋಚ್ ಪಾತ್ರದಲ್ಲಿ ರಾಹುಲ್ ದ್ರಾವಿಡ್ ಸಾಕಷ್ಟು ಪ್ರಭಾವಶಾಲಿಯಾಗಿರುವುದರಿಂದ, ಭಾರತದ ಮುಖ್ಯ ಕೋಚ್ ಅವರನ್ನು ಕೈಬಿಡುತ್ತಿರುವು ತಂಡದ ಮ್ಯಾನೇಜ್ಮೆಂಟ್ ಕಳವಳಕ್ಕೆ ಕಾರಣವಾಗಿದೆ.

ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಪಂದ್ಯ
ಆದರೆ, ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಅವರ ಮಾರ್ಗದರ್ಶನದಲ್ಲಿ ಭಾರತ ತಂಡವು ಉತ್ತಮ ಪ್ರದರ್ಶನ ನೀಡಿದೆ. ಅವರು ಆತಿಥೇಯ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪ್ರಭಾವಿ ಕ್ಲೀನ್ ಸ್ವೀಪ್ ಮಾಡಲು ಉತ್ತಮವಾಗಿ ಯುವ ಭಾರತೀಯ ತಂಡಕ್ಕೆ ಮಾರ್ಗದರ್ಶನ ನೀಡಿದರು.
ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಈ ವರ್ಷದ ಐರ್ಲೆಂಡ್ ಪ್ರವಾಸದಲ್ಲಿ ರಾಷ್ಟ್ರೀಯ ತಂಡದ ಉಸ್ತುವಾರಿ ವಹಿಸಿದ್ದರು ಮತ್ತು ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಏಷ್ಯಾ ಕಪ್ ಆರಂಭಿಕ ಪಂದ್ಯದಲ್ಲಿ ತಂಡದೊಂದಿಗೆ ತಮ್ಮ ಗೆಲುವಿನ ಓಟವನ್ನು ವಿಸ್ತರಿಸಲು ಎದುರು ನೋಡುತ್ತಾರೆ.


Click it and Unblock the Notifications
