2019ರ ನಂತರ ಕೊಹ್ಲಿ ಶತಕ ಬಾರಿಸಿಲ್ಲ
ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಮುಂಬರುವ ಏಷ್ಯಾಕಪ್ ಆವೃತ್ತಿಯಲ್ಲಿ ಬ್ಯಾಟಿಂಗ್ ಫಾರ್ಮ್ ಕಂಡುಕೊಳ್ಳಲು ವಿರಾಟ್ ಕೊಹ್ಲಿಯನ್ನು ಬೆಂಬಲಿಸಿದ್ದಾರೆ. ವಿರಾಟ್ ಕೊಹ್ಲಿ ಬಹುದಿನಗಳಿಂದ ಕಳಪೆ ಫಾರ್ಮ್ನಲ್ಲಿ ಸಾಗುತ್ತಿದ್ದಾರೆ. ಯಾವುದೇ ಮಟ್ಟದಲ್ಲಿ ರನ್ ಗಳಿಸಲು ಸಾಧ್ಯವಾಗುತ್ತಿಲ್ಲ. ನವೆಂಬರ್ 2019ರಲ್ಲಿ ಬಾಂಗ್ಲಾದೇಶ ವಿರುದ್ಧದ ಡೇ-ನೈಟ್ ಟೆಸ್ಟ್ ನಂತರ ಅವರು ಒಂದೇ ಒಂದು ಶತಕವನ್ನು ಗಳಿಸಿಲ್ಲ ಎಂಬ ಅಂಶವು ವಿರಾಟ್ ಕೊಹ್ಲಿಯನ್ನು ಇನ್ನಷ್ಟು ಒತ್ತಡಕ್ಕೆ ಸಿಲುಕಿಸಿದೆ.
ಭಾರತದ ಇಂಗ್ಲೆಂಡ್ ಪ್ರವಾಸದ ನಂತರ ವಿರಾಟ್ ಕೊಹ್ಲಿ ಯಾವುದೇ ಕ್ರಿಕೆಟ್ ಆಡಿಲ್ಲ. ವೆಸ್ಟ್ ಇಂಡೀಸ್ನಲ್ಲಿನ ದ್ವಿಪಕ್ಷೀಯ ಸರಣಿಯಲ್ಲಿ ಅನುಭವಿ ಆಡಲಿಲ್ಲ ಮತ್ತು ಜಿಂಬಾಬ್ವೆಯಲ್ಲಿ ಮುಂಬರುವ ಏಕದಿನ ಪಂದ್ಯಗಳ ಭಾಗವಾಗುವುದಿಲ್ಲ. ಭಾರತದ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಸೌರವ್ ಗಂಗೂಲಿ, ವಿರಾಟ್ ಕೊಹ್ಲಿ ದೊಡ್ಡ ಆಟಗಾರನಾಗಿರುವುದರಿಂದ ತಮ್ಮ ಲಯವನ್ನು ಕಂಡುಕೊಳ್ಳುವ ಮೊದಲು ಇದು ಅಭ್ಯಾಸ ಸಮಯದ ವಿಷಯವಾಗಿದೆ ಎಂದು ಹೇಳಿದರು.
ಪುನರಾಗಮನ ಮಾಡುತ್ತಾರೆ ಎಂಬ ಭರವಸೆ ನನಗಿದೆ
"ವಿರಾಟ್ ಕೊಹ್ಲಿ ಅಭ್ಯಾಸ ಮಾಡಲಿ, ಹೆಚ್ಚು ಪಂದ್ಯಗಳನ್ನು ಆಡಲಿ. ಅವರು ದೊಡ್ಡ ಆಟಗಾರ ಮತ್ತು ಸಾಕಷ್ಟು ರನ್ ಗಳಿಸಿದ್ದಾರೆ. ಅವರು ಪುನರಾಗಮನ ಮಾಡುತ್ತಾರೆ ಎಂಬ ಭರವಸೆ ನನಗಿದೆ. ಅವರು ಕೇವಲ ಶತಕ ಗಳಿಸಲು ಸಾಧ್ಯವಾಗುತ್ತಿಲ್ಲ. ಅದರೆ ಇದೇ ವೇಳೆ, ಅವರು ಏಷ್ಯಾ ಕಪ್ನಲ್ಲಿ ತಮ್ಮ ಫಾರ್ಮ್ ಅನ್ನು ಕಂಡುಕೊಳ್ಳುತ್ತಾರೆ ಎಂದು ನಾನು ನಂಬುತ್ತೇನೆ," ಎಂದು ಬಿಸಿಸಿಐ ಅಧ್ಯಕ್ಚರೂ ಆಗಿರುವ ಸೌರವ್ ಗಂಗೂಲಿ ತಿಳಿಸಿದ್ದಾರೆ.
ಇನ್ನು ಏಷ್ಯಾ ಕಪ್ನಲ್ಲಿ ವಿರಾಟ್ ಕೊಹ್ಲಿ 60ಕ್ಕಿಂತ ಹೆಚ್ಚು ಸರಾಸರಿ ಹೊಂದಿದ್ದು, ಪಂದ್ಯಾವಳಿಯ ಇತಿಹಾಸದಲ್ಲಿ ಅವರ ಬೆಲ್ಟ್ ಅಡಿಯಲ್ಲಿ ಇದುವರೆಗಿನ ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿದೆ. ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡದ ವಿರುದ್ಧ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಗಸ್ಟ್ 28ರಂದು ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.
ಐಸಿಸಿ ಅಧ್ಯಕ್ಷರಾಗುವ ಊಹಾಪೋಹಗಳಿಗೆ ತೆರೆ ಎಳೆದ ಗಂಗೂಲಿ
ಪ್ರಸ್ತುತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಮುಂದಿನ ಅಧ್ಯಕ್ಷರಾಗುವ ತಮ್ಮ ಉಮೇದುವಾರಿಕೆಯ ಬಗ್ಗೆ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
"ನೋಡಿ, ಇವೆಲ್ಲಾ ಊಹಾಪೋಹಗಳು. ಇವು ಸರಿಯಲ್ಲ. ಇದು ಅಷ್ಟು ಬೇಗ ಆಗುವುದಿಲ್ಲ. ಇವೆಲ್ಲವೂ ಬಿಸಿಸಿಐ ಮತ್ತು ಸರ್ಕಾರದ ಕೈಯಲ್ಲಿವೆ," ಎಂದು ಸೌರವ್ ಗಂಗೂಲಿ ಹೇಳಿದರು.
ಏಷ್ಯಾಕಪ್ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.
ಸ್ಟ್ಯಾಂಡ್ಬೈ ಆಟಗಾರರು; ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಮತ್ತು ದೀಪಕ್ ಚಹಾರ್.