Asia Cup 2023: ಜಯ್ ಶಾ ಹೇಳಿಕೆಗೆ ಬೆಚ್ಚಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ತುರ್ತು ಸಭೆ ಕರೆಯುವಂತೆ ಮನವಿ

ಅಕ್ಟೋಬರ್ 18 ರಂದು ನಡೆದ ಬಿಸಿಸಿಐ ಎಜಿಎಂ ಸಭೆಯಲ್ಲಿ ಎಸಿಸಿ ಅಧ್ಯಕ್ಷ ಜಯ್ ಶಾ ಹೇಳಿಕೆಯ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತುರ್ತು ಸಭೆಯನ್ನು ಕರೆಯುವಂತೆ ಮನವಿ ಮಾಡಿದೆ.
"ಭಾರತವು ಏಷ್ಯಾ ಕಪ್ 2023 ಆಡಲು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ, ತಟಸ್ಥ ಸ್ಥಳದಲ್ಲಿ ಟೂರ್ನಿ ಆಯೋಜನೆ ಮಾಡಬೇಕು" ಎಂದು ಎಸಿಸಿ ಅಧ್ಯಕ್ಷರಾಗಿರುವ ಜಯ್ ಶಾ ಹೇಳಿದ್ದರು. ಜಯ್ ಶಾ ಹೇಳಿಕೆಯ ನಂತರ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಚ್ಚರಿ ವ್ಯಕ್ತಪಡಿಸಿದೆ. ಏಷ್ಯಾಕಪ್ ಆತಿಥ್ಯ ವಹಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಜೊತೆ ಸಮಾಲೋಚನೆಯನ್ನೇ ನಡೆಸದೆ ಜಯ್ ಶಾ ಈ ನಿರ್ಧಾರ ತೆಗೆದುಕೊಂಡಿರುವ ಕ್ರಮಕ್ಕೆ ಅದು ವಿರೋಧ ವ್ಯಕ್ತಪಡಿಸಿದೆ.
"ಮುಂದಿನ ವರ್ಷದ ಏಷ್ಯಾ ಕಪ್ ಅನ್ನು ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸುವ ಕುರಿತು ಎಸಿಸಿ ಅಧ್ಯಕ್ಷ ಜಯ್ ಶಾ ಅವರು ನಿನ್ನೆ ನೀಡಿದ ಹೇಳಿಕೆಗೆ ಪಿಸಿಬಿ ಆಶ್ಚರ್ಯ ಮತ್ತು ನಿರಾಶೆಯಿಂದ ಪ್ರತಿಕ್ರಿಯೆ ನೀಡಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಂಡಳಿ ಅಥವಾ ಆತಿಥ್ಯ ವಹಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯೊಂದಿಗೆ ಯಾವುದೇ ಚರ್ಚೆ ಅಥವಾ ಸಮಾಲೋಚನೆಯಿಲ್ಲದೆ ಮತ್ತು ಅವುಗಳ ದೀರ್ಘಕಾಲೀನ ಪರಿಣಾಮಗಳು ಮತ್ತು ಪರಿಣಾಮಗಳ ಬಗ್ಗೆ ಯಾವುದೇ ಆಲೋಚನೆಗಳಿಲ್ಲದೆ ಹೇಳಿಕೆಗಳನ್ನು ನೀಡಿದ್ದಾರೆ" ಎಂದು ಅದು ಹೇಳಿದೆ.

ಭಾರತದಲ್ಲಿ ಮುಂದಿನ ವರ್ಷ ಏಕದಿನ ವಿಶ್ವಕಪ್
ಏಷ್ಯಾ ಖಂಡದ ರಾಷ್ಟ್ರಗಳಲ್ಲಿ ಕ್ರಿಕೆಟ್ಗೆ ಉತ್ತೇಜನ ನೀಡಲು 1983ರಲ್ಲಿ ಏಷ್ಯಾ ಕ್ರಿಕೆಟ್ ಕೌನ್ಸಿಲ್ (ACC) ರಚನೆ ಮಾಡಲಾಯಿತು. ಮುಂದಿನ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಪಾಕಿಸ್ತಾನ ಭಾರತಕ್ಕೆ ಭೇಟಿ ನೀಡಲು ನಿರಾಕರಿಸುವ ಸಾಧ್ಯತೆ ಇದೆ. 2025 ರಲ್ಲಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಅನ್ನು ಒಳಗೊಂಡಿರುವ ಭಾರತದಲ್ಲಿ ಮೂರಕ್ಕೂ ಹೆಚ್ಚು ಐಸಿಸಿ ಟೂರ್ನಿಗಳು ನಡೆಯಲಿವೆ.
ಜಯ್ ಶಾ ಹೇಳಿಕೆಯ ನಂತರ ಎಸಿಸಿಯಿಂದ ಯಾವುದೇ ಅಧಿಕೃತ ಪತ್ರವನ್ನು ಸ್ವೀಕರಿಸಿಲ್ಲ ಎಂದು ಪಿಸಿಬಿ ಹೇಳಿದೆ. ಎಸಿಸಿ ಅಧ್ಯಕ್ಷರ ಹೇಳಿಕೆ ಕುರಿತು ಎಸಿಸಿಯಿಂದ ಯಾವುದೇ ಅಧಿಕೃತ ಸಂವಹನವನ್ನು ಪಿಸಿಬಿ ಇಲ್ಲಿಯವರೆಗೆ ಸ್ವೀಕರಿಸಿಲ್ಲ. ಅದರಂತೆ, ಈ ಪ್ರಮುಖ ಮತ್ತು ಸೂಕ್ಷ್ಮ ವಿಷಯದ ಬಗ್ಗೆ ಪ್ರಾಯೋಗಿಕವಾಗಿ ಸಾಧ್ಯವಾದಷ್ಟು ಬೇಗ ತನ್ನ ಮಂಡಳಿಯ ತುರ್ತು ಸಭೆಯನ್ನು ಕರೆಯುವಂತೆ ಪಿಸಿಬಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ಗೆ ಪತ್ರ ಬರೆದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications