ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅದ್ಭುತ ಪ್ರದರ್ಶನ ನೀಡಿದ್ರೂ ಆತನಿಗಿಲ್ಲ ಸ್ಥಾನ: ಅನುಭವಿ ಆಟಗಾರನನ್ನು ಹೊರಗಿಟ್ಟ ಬಗ್ಗೆ ಚೋಪ್ರ ಕಿಡಿ

Asia cup squad: Aakash Chopra disappointed for Mohammad Shami omission from squad

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡದ ಆಟಗಾರರ ಬಳಗವನ್ನು ಬಿಸಿಸಿಐ ಪ್ರಕಟಿಸಿದೆ. ಸಾಕಷ್ಟು ಪೈಪೋಟಿಗಳು ಕಂಡು ಬಂದ ಕಾರಣ ಕೆಲ ಪ್ರತಿಭಾವಂತ ಆಟಗಾರರಿಗೆ ಕೂಡ ಈ ತಂಡದಲ್ಲಿ ಅವಕಾಶ ದೊರೆತಿಲ್ಲ. ಹೀಗಾಗಿ ಏಷ್ಯಾ ಕಪ್‌ಗೆ ಭಾರತ ತಂಡವನ್ನು ಪ್ರಕಟಿಸಿದ ನಂತರ ಆಟಗಾರರ ಆಯ್ಕೆ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ.

ಬಿಸಿಸಿಐ ಮಂಗಳವಾರ ಏಷ್ಯಾ ಕಪ್‌ನಲ್ಲಿ ಭಾಗವಹಿಸುವ 15 ಆಟಗಾರರ ಬಳಗವನ್ನು ಪ್ರಕಟಿಸಿದೆ. ಭಾರತದ ಬೌಲಿಂಗ್ ವಿಭಾಗದಲ್ಲಿ ಅನುಭವಿ ಆಟಗಾರ ಜಸ್ಪ್ರೀತ್ ಬೂಮ್ರಾ ಹಾಗೂ ಹರ್ಷಲ್ ಪಟೇಲ್ ಗಾಯದ ಕಾರಣದಿಂದಾಗಿ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಹಾಗೂ ಆವೇಶ್ ಖಾನ್ ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಆಡಲು ಸಮರ್ಥನಾಗಿದ್ದೂ ಕಳೆದ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿರುವ ಭಾರತದ ಅನುಭವಿ ಆಟಗಾರನನ್ನು ಈ ತಂಡದಿಂದ ಹೊರಗಿಟ್ಟ ಕಾರಣಕ್ಕೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಮೊಹಮ್ಮದ್ ಶಮಿಗಿಲ್ಲ ಸ್ಥಾನ

ಮೊಹಮ್ಮದ್ ಶಮಿಗಿಲ್ಲ ಸ್ಥಾನ

ಏಷ್ಯಾ ಕಪ್‌ನಲ್ಲಿ ಭಾರತದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಸ್ಥಾನವನ್ನು ಕಳೆದುಕೊಂಡಿದ್ದರೂ ಕೂಡ ಮತ್ತೋರ್ವ ಅನುಭವಿ ಮೊಹಮ್ಮದ್ ಶಮಿಗೆ ಸ್ಥಾನ ದೊರೆತಿಲ್ಲ. ಇತ್ತೀಚಿನ ಸರಣಿಗಳಲ್ಲಿ ಮೊಹಮ್ಮದ್ ಶಮಿ ಭಾರತದ ಟಿ20 ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳದೆ ಇದ್ದಾಗಲೇ ಈ ಬಗ್ಗೆ ಬಹುತೇಕ ಸ್ಪಷ್ಟತೆ ದೊರೆತಿತ್ತು. ಆದರೆ ಯುವ ಆಟಗಾರ ಆವೇಶ್ ಖಾನ್ ಪ್ರದರ್ಶನ ನೀರಸವಾಗಿದ್ದ ಕಾರಣ ಶಮಿಗೆ ಅವಕಾಶ ನೀಡಲೂ ಬಹುದು ಎಂಬ ಲೆಕ್ಕಾಚಾರಗಳು ನಡೆದಿದ್ದವು. ಆದರೆ ಅಂತಿಮವಾಗಿ ಯುವ ವೇಗೊ ಆವೇಶ್ ಖಾನ್ ಅವರೇ ತಂಡದಲ್ಲಿ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಈ ಆಯ್ಕೆ ಬಗ್ಗೆ ಆಕಾಶ್ ಚೋಪ್ರ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊಹಮ್ಮದ್ ಶಮಿಯನ್ನು ಮರೆತಿದ್ದೇಕೆ?

ಮೊಹಮ್ಮದ್ ಶಮಿಯನ್ನು ಮರೆತಿದ್ದೇಕೆ?

ಭಾರತ ತಂಡದಲ್ಲಿ ಮೊಹಮ್ಮದ್ ಶಮಿಯನ್ನು ಕಡೆಗಣಿಸಿದ್ದಕ್ಕೆ ಆಕಾಶ್ ಚೋಪ್ರ ಬೇಸರ ವ್ಯಕ್ತಪಡಿಸಿದ್ದಾರೆ. ಉತ್ತಮ ಪ್ರದರ್ಶನ ನಿಡಿಕೊಂಡು ಬರುತ್ತಿದ್ದರೂ ಐಪಿಎಲ್‌ನಲ್ಲಿಯೂ ಶ್ರೇಷ್ಠ ಪ್ರದರ್ಶನ ನಿಡಿದ ಬಳಿಕವೂ ಅವರನ್ನು ಯಾವ ಕಾರಣಕ್ಕಾಗಿ ತಂಡದಿಂದ ಕೈಬಿಡಲಾಗಿದೆ ಎಂದು ಆಕಾಶ್ ಚೋಪ್ರ ಪ್ರಶ್ನಿಸಿದ್ದಾರೆ. "ಎಲ್ಲರೂ ಮೊಹಮ್ಮದ್ ಶಮಿಯನ್ನು ಕಡೆಗಣಿಸಿದ್ದೇಕೆ?. ಅವರು ಉತ್ತಮವಾಗಿ ಆಡುತ್ತಿದ್ದರು. ಅವರ ಐಪಿಎಲ್ ಅಂಕಿಅಂಶಗಳು ಕೂಡ ಅದ್ಭುತವಾಗಿದೆ" ಎಂದು ಆಕಾಶ್ ಚೋಪ್ರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಆವೇಶ್‌ಗಿಂತ ಶಮಿ ಮುಂದೆ

ಆವೇಶ್‌ಗಿಂತ ಶಮಿ ಮುಂದೆ

ಮುಂದುವರಿದು ಮಾತನಾಡಿದ ಆಕಾಶ್ ಚೋಪ್ರ "ಈ ಸ್ಥಾನಕ್ಕಾಗಿ ಆವೇಶ್ ಖಾನ್ ಹಾಗೂ ಮೊಹಮ್ಮದ್ ಶಮಿ ಮಧ್ಯೆ ಸ್ಪರ್ಧೆಯನ್ನುಟ್ಟು ನನ್ನಲ್ಲಿ ಕೇಳಿದರೆ ನಾನು ಕಣ್ಮುಚ್ಚಿಕೊಂಡು ಮೊಹಮ್ಮದ್ ಶಮಿಯನ್ನು ಆಯ್ಕೆ ಮಾಡಿರುತ್ತಿದ್ದೆ. ಇದರಲ್ಲಿ ಆವೇಶ್ ಖಾನ್‌ಗೆ ವಿರುದ್ಧವಾಗಿ ಏನೂ ಇಲ್ಲ. ಆದರೆ ಜಸ್ಪ್ರೀತ್ ಬೂಮ್ರಾ ಅಲಭ್ಯತೆಯಲ್ಲಿ ಹೊಸ ಚೆಂಡು ಮೊಹಮ್ಮದ್ ಶಮಿಗೆ ನೀಡುವುದು ಹೆಚ್ಚು ಸೂಕ್ತ" ಎಂದಿದ್ದಾರೆ ಆಕಾಶ್ ಚೋಪ್ರ.

T20 ಆಡೋದನ್ನೆ ಮರೆತುಬಿಟ್ಟಿದ್ದಾರೆ ರಿಷಬ್ ಪಂತ್ !! | Oneindia Kannada
ಕಳೆದ ವಿಶ್ವಕಪ್‌ ಬಳಿಕ ತಂಡದಿಂದ ಹೊರಬಿದ್ದಿರುವ ಶಮಿ

ಕಳೆದ ವಿಶ್ವಕಪ್‌ ಬಳಿಕ ತಂಡದಿಂದ ಹೊರಬಿದ್ದಿರುವ ಶಮಿ

ಇನ್ನು ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಕಳೆದ ಬಹುತೇಕ ಹತ್ತು ತಿಂಗಳಿನಿಂದ ಭಾರತ ತಂಡದಿಂದ ಹೊರಬಿದ್ದಿದ್ದಾರೆ. ಕಳೆದ ವರ್ಷಾಂತ್ಯದಲ್ಲಿ ದುಬೈನಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನ್ಲಲಿ ಭಾಗವಹಿಸಿದ್ದ ಮೊಹಮ್ಮದ್ ಶಮಿ ನಂತರ ಭಾರತ ತಂಡದಿಂದ ಹೊರಬಿದ್ದಿದ್ದರು. ನಮೀಬಿಯಾ ವಿರುದ್ಧ ಆಡಿದ ಬಳಿಕ ಭಾರತ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರಲಿಲ್ಲ. ಆದರೆ ಇತ್ತೀಚೆಗೆ ಮುಕ್ತಾಯವಾಗಿ ಐಪಿಎಲ್‌ನಲ್ಲಿ ಶಮಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಟಿ20 ಮಾದರಿಯಲ್ಲಿ ತನ್ನ ಸಾಮರ್ಥ್ಯವನ್ನು ಮತ್ತೆ ಸಾಬೀತುಪಡಿಸಿದ್ದರು. ಆದರೆ ಭಾರತದ ಏಕದಿನ ಹಾಗೂ ಟೆಸ್ಟ್ ತಂಡದ ಭಾಗವಾಗಿದ್ದಾರೆ ಮೊಹಮ್ಮದ್ ಶಮಿ.

Story first published: Tuesday, August 9, 2022, 10:25 [IST]
Other articles published on Aug 9, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X