ನವದೆಹಲಿ, ಮಾರ್ಚ್. 09 : ಪ್ರವಾಸಿ ಆಸ್ಟ್ರೇಲಿಯಾ ವಿರುದ್ದದ ಕೊನೆ ಎರಡು ಟೆಸ್ಟ್ ಪಂದ್ಯಗಳಿಗೆ 15 ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲೆರೆಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದ ಹಾರ್ದಿಕ್ ಪಾಂಡ್ಯ ಕೊನೆಯ 2 ಪಂದ್ಯಗಳಿಂದ ಕೈಬಿಡಲಾಗಿದೆ.
ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಗುರುವಾರ ತಂಡವನ್ನು ಪ್ರಕಟಿಸಿದ್ದು ಮೊದಲೆರೆಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆ ಮಾಡಿಲಾಗಿದ್ದ ತಂಡವನ್ನೇ ಕೊನೆ ಎರಡು ಪಂದ್ಯಗಳಿಗೆ ಆಯ್ಕೆ ಮಾಡಿದೆ.

ಮೂರನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ಮಾರ್ಚ್ 16 ರಿಂದ 20ರ ವರೆಗೆ ಹಾಗೂ ಕೊನೆಯ ನಾಲ್ಕನೇ ಟೆಸ್ಟ್ ಪಂದ್ಯ ಮಾರ್ಚ್ 25 ರಿಂದ 29ರ ವರೆಗೆ ಧರ್ಮಾಶಾಲಾದಲ್ಲಿ ನಡೆಯಲಿದೆ.
ಈಗಾಗಲೇ 2 ಟೆಸ್ಟ್ ಪಂದ್ಯಗಳು ಮುಗಿದಿದ್ದು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ತಲಾ ಒಂದರಲ್ಲಿ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿವೆ.
ಕೊನೆ 2 ಟೆಸ್ಟ್ ಪಂದ್ಯದ ಭಾರತ ತಂಡ: ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ, ಕರುಣ್ ನಾಯರ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಆರ್ ಅಶ್ವಿನ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜ, ಜಯಂತ್ ಯಾದವ್, ಉಮೇಶ್ ಯಾದವ್, ಇಶಾಂತ್ ಶರ್ಮ, ಭುವನೇಶ್ವರ್ ಕುಮಾರ್, ಕುಲದೀಪ್, ಅಭಿನವ್ ಮುಕುಂದ್.