ಕೊಲಂಬೋ, ಆಗಸ್ಟ್ 09 : ಐಸಿಸಿ ಆಲ್ ರೌಂಡರ್, ಬೌಲರ್ ಕ್ರಮಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಭಾರತದ ರವೀಂದ್ರ ಜಡೇಜ ಅವರು ಶ್ರೀಲಂಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಶ್ರೀಲಂಕಾ ವಿರುದ್ಧ 3ನೇ ಟೆಸ್ಟ್ ಆಡದಂತೆ ಜಡೇಜಗೆ ನಿರ್ಬಂಧ
ಎರಡನೇ ಟೆಸ್ಟ್ ಪಂದ್ಯದ ವೇಳೆ ಐಸಿಸಿ ನಿಯಮ ಉಲ್ಲಂಘನೆ ಆರೋಪಕ್ಕೆ ಗುರಿಯಾಗಿದ್ದು, ಒಂದು ಪಂದ್ಯ ನಿಷೇಧಗೊಳಗಾಗಿದ್ದಾರೆ.
ರವೀಂದ್ರ ಜಡೇಜ ಅವರ ಬದಲಿಗೆ ಮೂರನೇ ಟೆಸ್ಟ್ ಪಂದ್ಯಕ್ಕೆ ಚೈನಾಮನ್ ಬೌಲರ್ ಕುಲದೀಪ್ ಯಾದವ್ ಆಯ್ಕೆ ಬಹುತೇಕ ಖಚಿತವಾಗಿದೆ. ಆದರೂ, ಜಡೇಜ ಅವರ ಬದಲಿಗೆ ಸ್ಪಿನ್ನರ್ ಅಕ್ಷರ್ ಪಟೇಲ್ ಅವರು ತಂಡವನ್ನು ಸೇರುತ್ತಿದ್ದಾರೆ.
ಟೆಸ್ಟ್ ಕ್ರಿಕೆಟ್ ನಂ.1 ಆಲ್ ರೌಂಡರ್ ಪಟ್ಟಕ್ಕೇರಿದ ಜಡೇಜ
ಹೆರಾತ್ ಗೆ ವಿಶ್ರಾಂತಿ: ಬೆನ್ನುನೋವಿಗೆ ತುತ್ತಾಗಿರುವ ಸ್ಪಿನ್ನರ್ ರಂಗಣ ಹೆರಾತ್ ಅವರಿಗೆ ವಿಶ್ರಾಂತಿ ನೀಡಲು ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ನಿರ್ಧರಿಸಿದೆ. ಹೆರಾತ್ ಅನುಪಸ್ಥಿತಿಯಲ್ಲಿ ಆತಿಥೇಯರ ಸ್ಪಿನ್ ವಿಭಾಗದ ಜವಾಬ್ದಾರಿ ಮಲಿಂದಾ ಪುಷ್ಪಕುಮಾರ ಅವರು ಹೊರ ಬೇಕಾಗುತ್ತದೆ.
ಆಲ್ರೌಂಡರ್ ಅಸೆಲಾ ಗುಣರತ್ನೆ, ವೇಗಿ ಸುರಂಗ ಲಕ್ಮಲ್ ಮತ್ತು ನುವಾನ್ ಪ್ರದೀಪ ಅವರು ಕೂಡಾ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. (ಒನ್ಇಂಡಿಯಾ ಸುದ್ದಿ)