ಆರ್ ಸಿಬಿ vs ಹೈದರಾಬಾದ್ ಕದನಕ್ಕೆ ಸೌರಶಕ್ತಿ
ಬೆಂಗಳೂರು, ಏ.10 : ಸೋಮವಾರ ಏ.13ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ನಡೆಯಲಿರುವ ಟಿ20 ಕದನಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಪಂದ್ಯಕ್ಕೂ ಮುನ್ನ ಬೇಕಾದ ವ್ಯವಸ್ಥೆಯನ್ನು ಚಿನ್ನಸ್ವಾಮಿ ಕ್ರೀಡಾಂಗಣ ಸಂಪೂರ್ಣಗೊಳಿಸಿದ್ದು, ಸೌರಶಕ್ತಿಯನ್ನು ಬಳಸುತ್ತಿರುವುದು ಈ ಬಾರಿಯ ವಿಶೇಷ.
ಚಿನ್ನಸ್ವಾಮಿ ಕ್ರೀಡಾಂಗಣದ ರೂಫ್ ಟಾಪ್ ನಲ್ಲಿ 400 kW ಸಾಮರ್ಥ್ಯದ ಸೌರಶಕ್ತಿ ಫಲಕಗಳನ್ನು ಅಳವಡಿಸಲಾಗಿದೆ. ಇದನ್ನು 11 ಕೆವಿ ಸಬ್ ಸ್ಟೇಷನ್ ಗೆ ಕನೆಕ್ಟ್ ಮಾಡಲಾಗಿದ್ದು, ಇನ್ಮುಂದೆ ಸೌರಶಕ್ತಿ ಬಲದಿಂದ ವಿದ್ಯುತ್ ದೀಪಗಳು ಪ್ರಜ್ವಲಿಸಲಿವೆ. ಜೊತೆಗೆ 600 ಟನ್ ಗಳಷ್ಟು ಇಂಗಾಲದ ಡೈ ಆಕ್ಸೈಡ್ ಹೊರಹಾಕುವುದನ್ನು ತಡೆಗಟ್ಟಬಹುದು ಎಂದು ಕೆಎಸ್ ಸಿಎ ಹೇಳಿದೆ.
[47 ದಿನ, 60 ಪಂದ್ಯ, ಫುಲ್ ಟೈಂ ಟೇಬಲ್] | [8 ತಂಡಗಳ ನೂರೆಂಟು ಆಟಗಾರರು] | [ಐಪಿಎಲ್ 2015: ಫ್ಯಾನ್ಸಿಗೆ ಗೈಡ್]
ಟ್ರಾಫಿಕ್ ಪೊಲೀಸರು ವಾಹನ ಸಂಚಾರ ನಿರ್ಬಂಧ, ಬದಲಿ ಮಾರ್ಗ, ವಾಹನ ನಿಲುಗಡೆ ನಿಷೇಧ ಎಲ್ಲೆಲ್ಲಿ ಎಂಬುದರ ಬಗ್ಗೆ ಮಾಹಿತಿ ಪ್ರಕಟಿಸಿದ್ದಾರೆ. ಜೊತೆಗೆ ಬಿಎಂಟಿಸಿ ಬಸ್ ಗಳನ್ನೇ ಬಳಸಿ ಎಂದು ಕೋರಿದ್ದಾರೆ. [ಮುಂಬೈ ತಂಡದಲ್ಲೇ ಕರ್ನಾಟಕ ಪ್ಲೇಯರ್ಸ್ ಜಾಸ್ತಿ!]
2012ರ ಐಪಿಎಲ್ ಪಂದ್ಯಾವಳಿ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಈ ಬಾರಿಯ ಪಂದ್ಯಗಳಿಗೆ ಕಟ್ಟುನಿಟ್ಟಿನ ಬಿಗಿಬಂದೋಬಸ್ತ್ ಕ್ರಮಗಳನ್ನು ಕೈಗೊಳ್ಳಲಾಗಿದೆ. [ಐಪಿಎಲ್ 8 ಆನ್ಲೈನ್ ಟಿಕೆಟ್ ಖರೀದಿ ಎಲ್ಲಿ? ಹೇಗೆ?]
ಈ ಬಾರಿಯ ಪಂದ್ಯ ವೀಕ್ಷಣೆಗೆ ಕ್ರೀಡಾಂಗಣಕ್ಕೆ ಆಗಮಿಸುವ ಪ್ರತಿ ವೀಕ್ಷಕರ ಫೋಟೋಗಳನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭರ್ತಿ 38 ಸಾವಿರ ವೀಕ್ಷಕರು ಪಂದ್ಯ ವೀಕ್ಷಿಸಲು ಆಸನಗಳಿವೆ.

ಭದ್ರತಾ ದೃಷ್ಟಿಯಿಂದ ಈ ವಸ್ತುಗಳು ನಿಷೇಧ
ಭದ್ರತಾ ದೃಷ್ಟಿಯಿಂದ ಕ್ರೀಡಾಂಗಣದ ಒಳಗೆ ಸಿಗರೇಟ್, ಕ್ಯಾಮೆರಾ, ಬೈನಾಕ್ಯುಲರ್, ಮ್ಯಾಚ್ ಬಾಕ್ಸ್, ಲೈಟರ್, ಹೊರಗಿನ ತಿಂಡಿ-ತಿನಿಸು, ಊಟದ ಡಬ್ಬಿ, ಲ್ಯಾಪ್ ಟಾಪ್, ಟಾಬ್ಲೆಟ್, ಹರಿತವಾದ ಆಯುಧ, ನೀರಿನ ಬಾಟಲ್ ಮತ್ತು ಕ್ಯಾನ್ ಗಳು, ಶಸ್ತ್ರಾಸ್ತ್ರ, ಹೆಲ್ಮೆಟ್, ಹ್ಯಾಂಡ್ ಬ್ಯಾಗ್, ಬಾವುಟ/ಕಡ್ಡಿ, ಮದ್ಯದ ಬಾಟಲ್, ಮಾದಕ ವಸ್ತು, ಪಟಾಕಿ, ಬಣ್ಣದ ಪುಡಿ, ಔಷಧಿ ಬಾಟಲ್ , ಸುಗಂಧ ದ್ರವ್ಯ ಬಾಟಲ್, ಸೌಂದರ್ಯ ವರ್ಧಕ, ಛತ್ರಿ,ಟಾರ್ಚ್ ಹಾಗೂ ಬೊಂಬೆಗಳನ್ನು ನಿಷೇಧಿಸಲಾಗಿದೆ.

ಕ್ರೀಡಾಂಗಣದ ಭದ್ರತೆಗಾಗಿ1300 ಪೊಲೀಸರು
ಕ್ರೀಡಾಂಗಣದ ಭದ್ರತೆಗಾಗಿ 3 ಡಿಸಿಪಿಗಳು, 14 ಎಸಿಪಿಗಳು, 44 ಇನ್ಸ್ ಪೆಕ್ಟರ್ ಗಳು, 83 ಸಬ್ ಇನ್ಸ್ ಪೆಕ್ಟರ್ ಗಳು, 70 ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳು, 140 ಹೆಡ್ ಕಾನ್ಸ್ ಟೇಬರ್ ಗಳು, 281 ಪೊಲೀಸ್ ಕಾನ್ಸ್ ಟೇಬಲ್ ಗಳು ಹಾಗೂ ಸಾದಾ ಉಡುಪಿನ 46 ಸಿಬ್ಬಂದಿಗಳು ಸೇರಿದಂತೆ 1300 ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಕಣ್ಗಾವಲಿಗಾಗಿ 86 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ 6 ಕೆಎಸ್ಆರ್ ಪಿ ತುಕಡಿ ಹಾಗೂ 2 ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ವಾಹನ ನಿಲುಗಡೆ, ನಿಷೇಧ ಎಲ್ಲೆಲ್ಲಿ?
1. ಕ್ವೀನ್ಸ್ ರಸ್ತೆಯಲ್ಲಿ ಸಿ.ಟಿ.ಓ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
2. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
3. ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆಯ ವರೆಗೆ.
4. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ.
5. ಕ್ರಿಕೆಟ್ ಮೈದಾನದ ಕಾಂಪೈಂಡಿಗೆ ಹೊಂದಿಕೊಂಡಂತೆ ರಸ್ತೆಯ ಎರಡೂ ಕಡೆ.
6. ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ.

ವಾಹನ ನಿಲುಗಡೆ ನಿಷೇಧ
7. ಕಬ್ಬನ್ ರಸ್ತೆಯಲ್ಲಿ- ಬಿ.ಆರ್. ವಿ ವೃತ್ತದಿಂದ ಡಿಕೆನ್ಸ್ ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್ ನಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿಸಿ. ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
8. ಮದ್ರಾಸ್ ಬ್ಯಾಂಕ್ ರಸ್ತೆಯಲ್ಲಿ ಎಸ್.ಬಿ.ಐ ವೃತ್ತದಿಂದ ಆಶೀರ್ವಾದಂ ವೃತ್ತದ ವರೆಗೆ.
9. ಮದ್ರಾಸ್ ಬ್ಯಾಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಮದ್ರಾಸ್ ಬ್ಯಾಂಕ್ ರಸ್ತೆ ವರೆಗೆ ಹಾಗೂ ರೆಸಿಡೆನ್ಸಿ ರಸ್ತೆ ವರೆಗೆ.
10. ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಮದ್ರಾಸ್ ಬ್ಯಾಂಕ್ ರಸ್ತೆ ವರೆಗೆ ಹಾಗೂ ರೆಸಿಡೆನ್ಸಿ ರಸ್ತೆವರೆಗೆ.
11. ಕಸ್ತೂರಬಾ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಗ್ರ್ಯಾಂಡ್ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ವೃತ್ತದ ವರೆಗೆ.

ಪಾರ್ಕಿಂಗ್ ನಿಷೇಧಿಸಲಾಗಿದೆ
ಕಬ್ಬನ್ ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಪೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.
* ಕ್ವೀನ್ಸ್ವೃತ್ತದಿಂದ ಲ್ಯಾವೆಲ್ಲಿ ರಸ್ತೆಯಲ್ಲಿ ಗ್ರಾಂಟ್ ಜಂಕ್ಷನ್ ವರೆಗೆ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.
* ಸಿದ್ದಲಿಂಗಯ್ಯ ವೃತ್ತದಿಂದ ವಿಠಲ್ ಮಲ್ಯ ರಸ್ತೆಯಲ್ಲಿ ಬಿಷಪ್ ಕಾಟನ್ ಬಾಲಕಿಯ ಶಾಲೆಯವರೆಗೆ ರಸ್ತೆಗಳಲ್ಲಿ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ.

ವಾಹನಗಳ ನಿಲುಗಡೆಗೆ ವ್ಯವಸ್ಥೆ ಎಲ್ಲಿ?
ಈ ಕೆಳಕಂಡ ರಸ್ತೆಗಳಲ್ಲಿ ರಸ್ತೆಗಳಲ್ಲಿ ಬೆಳಗ್ಗೆ 10-00 ಗಂಟೆಯಿಂದ ರಾತ್ರಿ 11-00 ಗಂಟೆಯ ವರೆಗೆ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿರುತ್ತದೆ.
1. ಸದಸ್ಯರು ಹಾಗೂ ಪಂದ್ಯ ವೀಕ್ಷಣೆ ಮಾಡಲು ಬರುವವರು ತಮ್ಮ ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮತ್ತು ಕಂಠೀರವ ಕ್ರೀಡಾಂಗಣದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
2. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
3. ಬಿ.ಆರ್.ವಿ. ಮೈದಾನದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ವಾಹನ ನಿಲುಗಡೆಗೆ ಸ್ಥಳಾವಕಾಶ ಕಡಿಮೆ ಇರುವುದರಿಂದ ಹಾಗೂ ಎಂ.ಜಿ ರಸ್ತೆ ಸಿಟಿಒ ವೃತ್ತದ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾರ್ವಜನಿಕ ಸಾರಿಗೆ (ಬಿಎಂಟಿಸಿ) ವಾಹನಗಳನ್ನು ಬಳಸಲು ಕೋರಲಾಗಿದೆ.

ಬಿಎಂಟಿಸಿ ಬಸ್ ವ್ಯವಸ್ಥೆ
ಪಂದ್ಯ ಮುಗಿದ ನಂತರ ಬಿಎಂಟಿಸಿ ವತಿಯಿಂದ ನಗರದ ಎಲ್ಲಾ ಭಾಗಗಳಿಗೂ ಬಿಗ್-10 ಬಸ್ ವ್ಯವಸ್ಥೆ ಮಾಡಲಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಒಳ ಮತ್ತು ಹೊರ ಹೋಗಲು ಪ್ರೇಕ್ಷಕರುಗಳಿಗೆ (ಪಾದಚಾರಿಗಳಿಗೆ) ಅನುವು ಮಾಡಿರುವ ಬಗ್ಗೆ:
1. ಗೇಟ್ ನಂ-1ರಿಂದ ಗೇಟ್ ನಂ-8 ಕ್ವೀನ್ಸ್ ರಸ್ತೆಯಲ್ಲಿ ಪಾದಚಾರಿಗಳಿಗೆ/ವೀಕ್ಷಕರುಗಳಿಗೆ ಹೋಗಲು ಅವಕಾಶ ಕಲ್ಪಿಸಿದೆ.
2. ಗೇಟ್ ನಂ.17 ಮತ್ತು ಗೇಟ್ ನಂ.20ರ ವರೆಗೆ ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತದಿಂದ ಬರುವ ಪ್ರೇಕ್ಷಕರುಗಳು/ಪಾದಚಾರಿಗಳೂ ಹೋಗಬಹುದಾಗಿರುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications