ವಿಶ್ವಾದ್ಯಂತ ಕೊರೊನಾ ವೈರಸ್ನ ವ್ಯಾಪ್ತಿ ಹೆಚ್ಚಾಗುತ್ತಲೇ ಇದೆ. ದೇಶದಲ್ಲೂ ಕೊರೊನಾ ತನ್ನ ಪ್ರಭಾವವನ್ನು ದಿನದಿಂದ ದಿನಕ್ಕೆ ಹೆಚ್ಚಿಸಿಕೊಳ್ಳುತ್ತಿದೆ. ಮತ್ತೊಂದೆಡೆ ಕೇಂದ್ರ ಸರ್ಕಾರ ದೇಶಾದ್ಯಂತ ಏಪ್ರಿಲ್ 14ರ ವರೆಗೆ ಲಾಕ್ಡೌನ್ ಘೋಷಿಸಿ ಈ ವೈರಸ್ ವಿರುದ್ಧ ಹೋರಾಟಕ್ಕೆ ಇಳಿದಿದೆ.
ದೇಶಕ್ಕೆ ದೇಶವೇ ಸ್ಥಬ್ಧಗೊಂಡ ಈ ಸಂದರ್ಭದಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಾಕಷ್ಟು ಆರ್ಥಿಕ ನೆರವಿನ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕೇಂದ್ರ ಸರ್ಕಾರಕ್ಕೆ ದೊಡ್ಡ ಮೊತ್ತದ ನೆರವನ್ನು ಘೋಷಿಸಿದೆ.
ಲಾಕ್ಡೌನ್: ಈ ಹೋರಾಟ ಸುಲಭದ್ದಲ್ಲ, ಸಹಕರಿಸಲು ಜನತೆಗೆ ಕೊಹ್ಲಿ ಮನವಿ
ಬಿಸಿಸಿಐ ಪ್ರಧಾನಮಂತ್ರಿ ನಾಗರಿಕ ಸಹಾಯ ಮತ್ತು ತುರ್ತುಪರಿಸ್ಥಿತಿಗಳ ಪರಿಹಾರ ನಿಧಿಗೆ 51 ಕೋಟಿ ರೂಪಾಯಿಗಳ ಪರಿಹಾರವನ್ನು ಘೋಷಿಸಿದೆ. ಈ ಮೂಲಕ ಸಾಂಕ್ರಾಮಿಕವಾಗಿ ಹಬ್ಬುತ್ತಿರುವ ವೈರಸ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಹಾಗೂ ಕಾರ್ಯದರ್ಶಿ ಜೈ ಶಾ ಈ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.
NEWS : BCCI to contribute INR 51 crores to Prime Minister @narendramodi ji's Citizen Assistance and Relief in Emergency Situations Fund
— BCCI (@BCCI) March 28, 2020
More details here - https://t.co/kw1yVhOO5o pic.twitter.com/RJO2br2BAo
ದೇಶಾದ್ಯಂತ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳು ಮನವಿಯನ್ನೂ ಮಾಡಲಾಗುತ್ತಿದೆ. ಸಾರ್ವಜನಿಕರು ಯಾರೂ ಹೊರಗಡೆ ಬಾರದಂತೆ ಎಚ್ಚರಿಕೆಯನ್ನು ನೀಡಲಾಗುತ್ತಿದೆ.
ಕೊರೊನಾ: ಆಗ ಕ್ರಿಕೆಟರ್, ಬಾಕ್ಸರ್, ಕಬಡ್ಡಿ ಪ್ಲೇಯರ್-ಈಗ ಪೊಲೀಸ್ ಆಫೀಸರ್!
ಬಿಸಿಸಿಐ ತೆಗೆದುಕೊಂಡಿರುವ ಈ ನಿಲುವಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕ್ರಿಕೆಟ್ ಪ್ರೇಮಿಗಳು ಟ್ವಿಟ್ಟರ್ನಲ್ಲಿ ಬಿಸಿಸಿಐನ ನಿರ್ಧಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ.