7 ವರ್ಷಕ್ಕೆ ಶಿಕ್ಷೆ ಇಳಿಕೆ
ಐಪಿಎಲ್ನಲ್ಲಿ ಅಂಕಿತ್, ಶ್ರೀಶಾಂತ್ ಮತ್ತು ಅಜಿತ್ ಮೂವರೂ 2008ರ ಚಾಂಪಿಯನ್ಸ್ ತಂಡ ರಾಜಸ್ಥಾನ್ ರಾಯಲ್ಸ್ (ಆರ್ಆರ್) ತಂಡದಲ್ಲಿದ್ದರು. ಸ್ಪಿನ್ನರ್ ಅಂಕಿತ್ ಮೇಲಿನ ಆಜೀವ ನಿಷೇಧವನ್ನು 7 ವರ್ಷಕ್ಕೆ ಇಳಿಸಲಾಗಿದೆ ಎಂದು ಜೂನ್ 15ರ ಮಂಗಳವಾರ ಬಿಸಿಸಿಐ ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂಗ್ ಅಮಿನ್ ಮಾಹಿತಿ ನೀಡಿದ್ದಾರೆ.
ಮೈದಾನಕ್ಕೆ ಮರಳುತ್ತೇನೆ
'ನನಗೆ ಈಗ ಎಷ್ಟರಮಟ್ಟಿಗೆ ನಿರಾಳ ಅನ್ನಿಸುತ್ತಿದೆ ಅನ್ನೋದನ್ನು ಹೇಳಲಾಗುತ್ತಿಲ್ಲ. ಮತ್ತೆ ಮೈದಾನಕ್ಕೆ ಮರಳಲು ನಾನು ಕಾತರನಾಗಿದ್ದೇನೆ. ಸಹಾಯ ನೀಡಿದ್ದಕ್ಕಾಗಿ ನಾನು ಬಿಸಿಸಿಐ ಮತ್ತು ಮುಂಬೈ ಕ್ರಿಕೆಟ್ ಅಸೋಸಿಯೇಶನ್ಗೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ,' ಎಂದು ಕ್ರಿಕ್ಬಝ್ ಜೊತೆ ಅಂಕಿತ್ ಹೇಳಿಕೊಂಡಿದ್ದಾರೆ.
ರಣಜಿಯಲ್ಲಿ ಆಡಿದ್ದ ಶ್ರೀಶಾಂತ್
ಅಂಕಿತ್ 7 ವರ್ಷ ನಿಷೇಧ ಮಾತ್ರ ಅನುಭವಿಸಬೇಕಾಗುತ್ತದೆ ಅಂದರೆ ಕಳೆದ ವರ್ಷ ಸೆಪ್ಟೆಂಬರ್ಗೆ ಅಂಕಿತ್ ನಿಷೇಧ ಮುಗಿದಂತಾಗುತ್ತದೆ. ಅಂದರೆ 2013ರಿಂದ 2020ಕ್ಕೆ 7 ವರ್ಷ ಅಗುತ್ತದೆ. ಇನ್ನು ಅಂಕಿತ್, ಶ್ರೀಶಾಂತ್ ಮತ್ತು ಚಾಂಡಿಲಾ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಪಾಲ್ಗೊಳ್ಳಬಹುದು. ಶ್ರೀಶಾಂತ್ ಈಗಾಗಲೇ ರಣಜಿಯಲ್ಲಿ ಕೇರಳ ಪರ ಆಡಿದ್ದರು.