ಕೊರೊನಾವೈರಸ್ ಕಾರಣದಿಂದಾಗಿ ಭಾರತದಲ್ಲಿ ನಡೆಯಬೇಕಿದ್ದ ಹಲವಾರು ಟೂರ್ನಿಗಳು ಮುಂದೂಡಲ್ಪಡುತ್ತಿವೆ. ಇತ್ತೀಚೆಗಷ್ಟೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಮುಂದೂಡಲ್ಪಟ್ಟು ತದನಂತರ ಯುಎಇಯಲ್ಲಿ ನಡೆಸಲು ತೀರ್ಮಾನ ಮಾಡಿರುವ ವಿಷಯ ನಿಮಗೆಲ್ಲರಿಗೂ ತಿಳಿದೇ ಇದೆ.
ಯಾರಾಗ್ತಾರೆ ಧೋನಿ ಬಳಿಕ ಚೆನ್ನೈ ತಂಡದ ನಾಯಕ? ಈ 5 ಆಟಗಾರರ ಮೇಲೆ ಸಿಎಸ್ಕೆ ಕಣ್ಣು!
ಐಪಿಎಲ್ ಬೆನ್ನಲ್ಲೇ ಇದೀಗ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನೂ ಸಹ ಮುಂದೂಡಲ್ಪಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಭಾರತ ನೆಲದಲ್ಲಿ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳುಗಳಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾವೈರಸ್ ಭಾರತದಲ್ಲಿ ತಗ್ಗುವ ಲಕ್ಷಣಗಳು ಕಾಣದೇ ಇರುವುದರಿಂದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಸಹ ಮುಂದೂಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
WTC Final: ಆ ಆಟಗಾರ ತಂಡದಲ್ಲಿ ಇಲ್ಲದಿರುವುದು ಭಾರತಕ್ಕೆ ಸಮಸ್ಯೆಯಾಗಬಹುದು ಎಂದ ಮಾಜಿ ಕ್ರಿಕೆಟಿಗ
ಬಿಸಿಸಿಐನ ಇತ್ತೀಚಿನ ನಡೆ ಇದೀಗ ಟಿ ಟ್ವೆಂಟಿ ವಿಶ್ವಕಪ್ ಮುಂದೂಡಿಕೆಯ ಸುದ್ದಿಗೆ ಪುಷ್ಟಿ ನೀಡುವಂತಿದೆ. ಹೌದು ಜೂನ್ 1ರಂದು ಐಸಿಸಿ ಮಂಡಳಿ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಭಾರತದಲ್ಲಿ ಟಿ ಟ್ವೆಂಟಿ ವಿಶ್ವಕಪ್ ನಡೆಸುವುದರ ಕುರಿತು ಅಂತಿಮ ತೀರ್ಮಾನವನ್ನು ಕೈಗೊಳ್ಳಲು ಒಂದು ತಿಂಗಳ ಕಾಲಾವಕಾಶ ನೀಡಬೇಕೆಂದು ಐಸಿಸಿಗೆ ಮನವಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಬಿಸಿಸಿಐ ಮಾಡಲಿರುವ ಈ ಮನವಿಯನ್ನು ಐಸಿಸಿ ಒಪ್ಪುತ್ತಾ ಅಥವಾ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸುತ್ತಾ ಎಂಬುದನ್ನು ಕಾದು ನೋಡಬೇಕು.