
ಕಳೆದೆರಡು ವರ್ಷಗಳಲ್ಲಿ ರವೀಂದ್ರ ಜಡೇಜಾ ಅತ್ಯುತ್ತಮ ಪ್ರದರ್ಶನ
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ರವೀಂದ್ರ ಜಡೇಜಾ ಕುರಿತಾಗಿ ವಿಶೇಷವಾಗಿ ಮಾತನಾಡಿರುವ ಆಶಿಶ್ ನೆಹ್ರಾ ಕಳೆದೆರಡು ವರ್ಷಗಳಲ್ಲಿ ರವೀಂದ್ರ ಜಡೇಜಾ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದಾರೆ ಎಂದು ಹೊಗಳಿದ್ದಾರೆ. 'ಇತ್ತೀಚೆಗಷ್ಟೇ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ರವೀಂದ್ರ ಜಡೇಜಾ ಬೌಲಿಂಗ್ನಲ್ಲಿ 4 ಓವರ್ ಮಾಡಿ ಕೇವಲ 21 ರನ್ ನೀಡಿ ಪ್ರಮುಖವಾದ ಒಂದು ವಿಕೆಟ್ ಪಡೆದರು. ಬ್ಯಾಟಿಂಗ್ನಲ್ಲೂ ಅಬ್ಬರದ ಆಟವನ್ನು ಆಡಿ ಮಿಂಚಿದ ರವೀಂದ್ರ ಜಡೇಜಾ ಕಳೆದೆರಡು ವರ್ಷಗಳಿಂದ ತಮ್ಮ ತಂಡಕ್ಕೆ ಇದೇ ರೀತಿಯಾಗಿ ಆಸರೆಯಾಗುತ್ತಿದ್ದಾರೆ' ಎಂದು ಆಶೀಶ್ ನೆಹ್ರಾ ರವೀಂದ್ರ ಜಡೇಜಾ ಪ್ರದರ್ಶನವನ್ನು ಕೊಂಡಾಡಿದ್ದಾರೆ.

ಕೊಹ್ಲಿ, ಧೋನಿ ಮತ್ತು ರವಿಶಾಸ್ತ್ರಿ ತಲೆಯಲ್ಲಿ ಮೊದಲು ಬರುವ ಹೆಸರೇ ಜಡೇಜಾ ಅವರದ್ದು
ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ವರುಣ್ ಚಕ್ರವರ್ತಿ, ರವಿಚಂದ್ರನ್ ಅಶ್ವಿನ್ ಮತ್ತು ರಾಹುಲ್ ಚಹರ್ ರೀತಿಯ ಸ್ಪಿನ್ ಬೌಲರ್ಗಳು ಇದ್ದರೂ ಸಹ ತಂಡದ ನಾಯಕ ವಿರಾಟ್ ಕೊಹ್ಲಿ, ಮಾರ್ಗದರ್ಶಕ ಮಹೇಂದ್ರ ಸಿಂಗ್ ಧೋನಿ ಮತ್ತು ತರಬೇತುದಾರ ರವಿಶಾಸ್ತ್ರಿ ತಲೆಯಲ್ಲಿ ಅವರೆಲ್ಲರಿಗಿಂತ ಮೊದಲು ಬರುವ ಹೆಸರೇ ರವೀಂದ್ರ ಜಡೇಜಾ ಅವರದ್ದು ಎಂದು ಆಶಿಶ್ ನೆಹ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡ
ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ


Click it and Unblock the Notifications












