ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದರು
ದುಬೈನಲ್ಲಿ ಅರ್ಜುನ್ ಕಪೂರ್ ಅವರ ಕಸಿನ್ ಮೋಹಿತ್ ಮರ್ವಾಹ್ ಅವರ ವಿವಾಹ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಶ್ರೀದೇವಿ ಅವರು ತೀವ್ರ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದರು. ಮಾಜಿ ಕ್ರಿಕೆಟರ್ಸ್, ಕಾಮೆಂಟೆಟರ್ಸ್, ಹಾಲಿ ಕ್ರಿಕೆಟರ್ಸ್ ಗಳು ಶ್ರೀದೇವಿ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
|
ಅನಿಲ್ ಕುಂಬ್ಳೆ ಟ್ವೀಟ್
ಶ್ರೀದೇವಿ ಸಾವಿನಿಂದ ತುಂಬಾ ನೋವುಂಟಾಗಿದೆ ಎಂದು ಅಕಾಲಿಕ ನಿಧನಕ್ಕೆ ಕ್ರಿಕೆಟ್ ದಿಗ್ಗಜ, ಮಾಜಿ ಕೋಚ್ ಅನಿಲ್ ಕುಂಬ್ಳೆ ಅವರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.
|
ವಿವಿಎಸ್ ಲಕ್ಷ್ಮಣ್
ಮಾಜಿ ಕ್ರಿಕೆಟರ್ ವಿವಿಎಸ್ ಲಕ್ಷ್ಮಣ್ ಅವರು ಶ್ರೀದೇವಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
|
ಮೊಹಮ್ಮದ್ ಕೈಫ್
ಮಾಜಿ ಕ್ರಿಕೆಟರ್ ಮೊಹಮ್ಮದ್ ಕೈಫ್ ಅವರು ಶ್ರೀದೇವಿ ನಿಧನದಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
|
ಸ್ಪಿನ್ನರ್ ಪ್ರಗ್ಯಾನ್ ಓಜಾ
ಭಾರತೀಯ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅಪಾರ. ನಿಮ್ಮ ಸಾವಿನ ದುಃಖ ಭರಿಸುವ ಶಕ್ತಿಯನ್ನು ಎಲ್ಲರಿಗೂ ನೀಡಲಿ ಎಂದು ಸ್ಪಿನ್ನರ್ ಪ್ರಗ್ಯಾನ್ ಓಝಾ ಟ್ವೀಟ್ ಮಾಡಿದ್ದಾರೆ.