
15 ಲಕ್ಷ ಬಹುಮಾನ ನೀಡಿದ ಕರ್ನಾಟಕ ಸರ್ಕಾರ
ಭಾರತ ವನಿತೆಯರ ತಂಡದಲ್ಲಿ ಭಾಗಿಯಾಗಿದ್ದ ಕರ್ನಾಟಕದ ಕ್ರಿಕೆಟರ್ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದು 15 ಲಕ್ಷ ರೂಪಾಯಿಗಳ ನಗದು ಪುರಸ್ಕಾರವನ್ನು ಘೋಷಿಸಿದ್ದಾರೆ. ಇನ್ನು ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಳ್ಳದ ರಾಜೇಶ್ವರಿ ಗಾಯಕ್ವಾಡ್ ಉಳಿದ ಪಂದ್ಯಗಳಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನವನ್ನು ತೋರಿದ್ದರು.

ಚಿನ್ನದ ಪದಕ ಕೈ ತಪ್ಪಿಸಿಕೊಂಡ ಭಾರತ
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ವನಿತೆಯರ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 161 ರನ್ ಕಲೆಹಾಕಿದ ಆಸ್ಟ್ರೇಲಿಯಾ ವನಿತೆಯರು ಭಾರತ ವನಿತೆಯರ ತಂಡಕ್ಕೆ 162 ರನ್ಗಳ ಪೈಪೋಟಿಯುತ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಭಾರತ ವನಿತೆಯರ ತಂಡದ ಪರ ಜೆಮಿಮಾ ರೊಡ್ರಿಗಸ್ ಮತ್ತು ನಾಯಕಿ ಹರ್ಮನ್ ಪ್ರೀತ್ ಕೌರ್ ಜವಾಬ್ದಾರಿಯುತ ಆಟವಾಡಿ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದರೂ ಸಹ ಉಳಿದ ಆಟಗಾರ್ತಿಯರು ಅತಿ ಕಳಪೆ ಆಟವನ್ನಾಡಿದ ಪರಿಣಾಮ ಟೀಮ್ ಇಂಡಿಯಾ ಸೋಲನ್ನುಂಡಿತು. 17.2 ಓವರ್ಗಳವರೆಗೂ ಕೇವಲ 5 ವಿಕೆಟ್ ಕಳೆದುಕೊಂಡಿದ್ದ ಭಾರತ 19.3 ಓವರ್ಗೆ 153 ರನ್ ಕಲೆಹಾಕಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್ ಔಟ್ ಆಯಿತು.

ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಪ್ರಕಟವಾಗಿದ್ದ ಭಾರತ ವನಿತೆಯರ ಕ್ರಿಕೆಟ್ ತಂಡ
ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್ಪ್ರೀತ್ ಕೌರ್ (ನಾಯಕಿ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ತನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ಮೇಘನಾ ಸಿಂಗ್, ರೇಣುಕಾ ಸಿಂಗ್ಬೆಂಚ್: ರಾಜೇಶ್ವರಿ ಗಾಯಕ್ವಾಡ್, ಸಬ್ಬಿನೇನಿ ಮೇಘನಾ, ಹರ್ಲೀನ್ ಡಿಯೋಲ್, ಯಾಸ್ತಿಕಾ ಭಾಟಿಯಾ, ರಾಜೇಶ್ವರಿ ಗಾಯಕ್ವಾಡ್, ಸಭಿನೆನಿ ಮೇಘನಾ ಮತ್ತು ಹರ್ಲಿನ್ ಡಿಯೋಲ್


Click it and Unblock the Notifications
