For Quick Alerts
ALLOW NOTIFICATIONS  
For Daily Alerts
 

ಟೀಮ್ ಇಂಡಿಯಾದ ಭವಿಷ್ಯದ ಮೂವರು ಕೀಪರ್‌ಗಳ ಹೆಸರಿಸಿದ ಗಂಭೀರ್!

ಧೋನಿ ಈ ಮೂವರಿಗೆ ಜಾಗ ಬಿಟ್ಟುಕೊಡಬೇಕು..? | Oneindia Kannada
Dhoni to make way for youngsters like Pant and Samson: Gautam Gambhir

ನವದೆಹಲಿ, ಜುಲೈ 19: ಐಸಿಸಿ ಕ್ರಿಕೆಟ್ ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತ ತಂಡ ಹೊರ ಬಿದ್ದಾಗ ಕ್ರಿಕೆಟ್ ವಲಯದಲ್ಲಿ ಬೇರೆ ಬೇರೆ ವಿಚಾರಗಳು ಚರ್ಚಿಸಲ್ಪಟ್ಟಿದ್ದವು. ಮುಖ್ಯವಾಗಿ ಟೀಮ್ ಇಂಡಿಯಾದ 4ನೇ ಬ್ಯಾಟಿಂಗ್ ಕ್ರಮಾಂಕದಲ್ಲಿ ಸ್ಥಿರ ಬ್ಯಾಟ್ಸ್ಮನ್ ಇರದಿದ್ದರ ಬಗ್ಗೆ ಟೀಕೆಗಳು ಬಂದಿದ್ದವು. ಅಲ್ಲದೆ ತಂಡದಲ್ಲಿ ಧೋನಿಯ ಸ್ಥಾನವನ್ನೂ ಹಲವಾರು ಮಂದಿ ಪ್ರಶ್ನಿಸಿದ್ದರು.

ಮುಂದಿನ ತಿಂಗಳು ವೆಸ್ಟ್ ಇಂಡೀಸ್‌ಗೆ ಭಾರತ ಪ್ರವಾಸ ಕೈಗೊಳ್ಳಲಿದೆ. ಸರಣಿಗಾಗಿ ತಂಡ ಪ್ರಕಟಗೊಳ್ಳುವುದಕ್ಕೂ ಮುನ್ನ ಧೋನಿ ನಿವೃತ್ತಿ ಘೋಷಿಸುವ ಅಗತ್ಯವಿದೆ ಎಂದು ಕ್ರಿಕೆಟ್ ವಲಯ ಆಡಿಕೊಳ್ಳುತ್ತಿದೆ. ಯಾಕೆಂದರೆ ಧೋನಿ ನಿವೃತ್ತಿಯಿಂದ ಯುವ ಆಟಗಾರರಿಗೆ ಅವಕಾಶ ದೊರೆಯಲಿದೆ ಅನ್ನೋದು ಕೆಲ ಕ್ರಿಕೆಟ್ ಅಭಿಮಾನಿಗಳ ಕಳಕಳಿ.

ವಿಂಡೀಸ್ ಸರಣಿಗಾಗಿ ತಂಡ ಪ್ರಕಟಿಸುವುದಕ್ಕೂ ಮುನ್ನ ಧೋನಿ ನಿವೃತ್ತಿ ಘೋಷಿಸಿದರೆ, ಸರಣಿಯಲ್ಲಿ ಪ್ರತಿಭಾನ್ವಿತ ಯುವ ಬ್ಯಾಟ್ಸ್ಮನ್ ಕಾಣಿಸಿಕೊಳ್ಳಲು ಅವಕಾಶ ಸಿಗಲಿದೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ಭಾರತದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭವಿಷ್ಯದ ದಿನಗಳತ್ತ ಗಮನ ಹರಿಸಬೇಕಿದೆ

ಭವಿಷ್ಯದ ದಿನಗಳತ್ತ ಗಮನ ಹರಿಸಬೇಕಿದೆ

ಧೋನಿ ನಿವೃತ್ತಿಗೆ ಸಂಬಂಧಿಸಿ ಮಾತನಾಡಿರುವ ಗಂಭೀರ್, 2023ರತ್ತ ಮುಂದರಿಯುವ ನಿಟ್ಟಿನಲ್ಲಿ ಧೋನಿಯವರು ಯುವ ಬ್ಯಾಟ್ಸ್ಮನ್‌ಗಳಿಗೆ ದಾರಿಯಾಗಬೇಕು. ವಿಕೆಟ್‌ ಕೀಪಿಂಗ್‌ನಲ್ಲಿ ಗುರುತಿಸಿಕೊಂಡಿರುವ ಮೂವರು ಯುವ ಆಟಗಾರರನ್ನು ಹೆಸರಿಸಿರುವ ಗಂಭೀರ್, ಟೀಮ್ ಇಂಡಿಯಾ ಭವಿಷ್ಯದ ದಿನಗಳತ್ತ ದೃಷ್ಟಿ ಹರಿಸುವ ಅಗತ್ಯವಿದೆ ಎಂದಿದ್ದಾರೆ.

ಒಬ್ಬೊಬ್ಬರಿಗೆ ಅವಕಾಶ ನೀಡಿ

ಒಬ್ಬೊಬ್ಬರಿಗೆ ಅವಕಾಶ ನೀಡಿ

'ಯುವ ತಾರೆಯರಿಗೆ ಅವಕಾಶಗಳನ್ನು ನೀಡಬೇಕಾದ ಸಂದರ್ಭ ಭಾರತದ ಮುಂದಿದೆ. ವಿಕೆಟ್ ಕೀಪಿಂಗ್‌ಗೆ ಸಲ್ಲಬಲ್ಲ ಅನ್ನಿಸುವ ರಿಷಬ್ ಪಂತ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಇಂಥವರಿಗೆ ಹೆಚ್ಚು ಅವಕಾಶಗಳನ್ನು ನೀಡಬೇಕಿದೆ. ಈ ಮೂವರಲ್ಲಿ ಒಬ್ಬನಿಗೆ ಒಂದೂವರೆ ವರ್ಷಗಳ ಕಾಲ ಅವಕಾಶ ನೀಡಲಿ. ಆತ ಸುಧಾರಣೆ ಕಾಣದಿದ್ದರೆ ಉಳಿದಿಬ್ಬರನ್ನು ಪರಿಗಣಿಸಲಿ. ಆಗ ಮುಂದಿನ ವಿಶ್ವಕಪ್ ವೇಳೆ ಒಬ್ಬಾತ ವಿಕೆಟ್ ಕೀಪಿಂಗ್‌ಗೆ ತಯಾರಾಗಿರುತ್ತಾನೆ' ಎಂದು ಗಂಭೀರ್ ಸಲಹೆ ನೀಡಿದ್ದಾರೆ.

ಧೋನಿ ಮಾತು ನೆನಪಿಸಿದ ಗೌತಮ್

ಧೋನಿ ಮಾತು ನೆನಪಿಸಿದ ಗೌತಮ್

ಭವಿಷ್ಯದ ದಿನಗಳತ್ತ ದೃಷ್ಟಿ ಹರಿಸೋದು ತುಂಬಾ ಮಹತ್ವವಾದುದು. ಧೋನಿಯೂ ಈ ಹಿಂದೆ ಇದನ್ನೇ ಹೇಳಿದ್ದರು. 2008ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಕಾಮನ್ವೆಲ್ತ್ ಬ್ಯಾಂಕ್ ಸರಣಿ (ಸಿಬಿ ಸೀರೀಸ್) ವೇಳೆ ನಾಯಕನಾಗಿದ್ದ ಧೋನಿ, ಯುವಕರಿಗೆ ಅವಕಾಶ ನೀಡಬೇಕಾಗಿದ್ದರಿಂದ ಸಚಿನ್ (ತೆಂಡೂಲ್ಕರ್), (ವೀರೇಂದ್ರ) ಸೆಹ್ವಾಗ್‌ ಒಟ್ಟಿಗೆ ಆಡಲಾರರು ಎಂದು ಹೇಳಿದ್ದನ್ನು ಗಂಭೀರ್ ಸ್ಮರಿಸಿಕೊಂಡರು.

ಪ್ರಾಯೋಗಿಕವಾಗಿ ನಿರ್ಧರಿಸಬೇಕು

ಪ್ರಾಯೋಗಿಕವಾಗಿ ನಿರ್ಧರಿಸಬೇಕು

'ಮೈದಾನ ದೊಡ್ಡದಿರುವುದರಿಂದ ಸಿಬಿ ಸೀರೀಸ್‌ನಲ್ಲಿ ಸಚಿನ್, ಸೆಹ್ವಾಗ್ ಒಟ್ಟಿಗೆ ಆಡಲಾರರು ಎಂದು ಆಗ ನಾಯಕನಾಗಿದ್ದ ಧೋನಿ ನನ್ನ ಬಳಿ ಹೇಳಿದ್ದರು. ಮುಂದಿನ ವಿಶ್ವಕಪ್‌ಗೆ ಯುವ ಆಟಗಾರರ ಅಗತ್ಯವಿರುವುದನ್ನು ತಿಳಿಸಲು ಧೋನಿ ಹೀಗೆ ನನ್ನಲ್ಲಿ ಹೇಳಿಕೊಂಡಿದ್ದರು. ಹೀಗಾಗಿ ಭಾವುಕರಾಗುವುದಕ್ಕಿಂತ ಪ್ರಾಯೋಗಿಕವಾಗಿ ನಿರ್ಧಾರ ತೆಗೆದುಕೊಳ್ಳುವುದರ ಅಗತ್ಯವಿದೆ' ಎಂದು ಗಂಭೀರ್ ಹೇಳಿದ್ದಾರೆ.

Story first published: Friday, July 19, 2019, 13:36 [IST]
Other articles published on Jul 19, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+