ಭಾರತ ಕ್ರಿಕೆಟ್ ತಂಡದ ಅನುಭವಿ ಬ್ಯಾಟರ್ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್ನ ಲೆಜೆಂಡ್ಗಳಾಗಿ ತಮ್ಮನ್ನು ತಾವು ಸಾಬೀತುಪಡಿಸಿದ್ದಾರೆ.
ಹಲವು ವರ್ಷಗಳಿಂದ ಇಬ್ಬರೂ ಬ್ಯಾಟರ್ಗಳು ಭಾರತ ತಂಡದ ಯಶಸ್ಸಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಸಮಯ ಬಂದಾಗ, ಇಬ್ಬರೂ ಬ್ಯಾಟ್ಸ್ಮನ್ಗಳು ತಮ್ಮ ಅದ್ಭುತ ವೃತ್ತಿಜೀವನಕ್ಕೆ ತೆರೆ ಎಳೆಯುತ್ತಾರೆ ಎಂಬುದರಲ್ಲಿ ಸಂದೇಹವಿಲ್ಲ.

ಇತ್ತೀಚೆಗೆ, ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಗೆಲುವಿಗೆ ಭಾರತ ತಂಡಕ್ಕೆ ಸಹಾಯ ಮಾಡಿದ ನಂತರ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಿಂದ ನಿವೃತ್ತರಾದರು.
ಇದೀಗ ಅವರ ವೃತ್ತಿಜೀವನದ ಮುಸ್ಸಂಜೆ ಸಮೀಪಿಸುತ್ತಿರುವಾಗ, ಭಾರತದ ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಅವರು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬದಲಿಗೆ ನಾಲ್ಕು ಸಂಭಾವ್ಯ ಆಟಗಾರರನ್ನು ಹೆಸರಿಸಿದ್ದಾರೆ.

ದಿನೇಶ್ ಕಾರ್ತಿಕ್ ಅವರು ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ರುತುರಾಜ್ ಗಾಯಕ್ವಾಡ್ ಮತ್ತು ತಿಲಕ್ ವರ್ಮಾ ಅವರನ್ನು ಹೆಸರಿಸಿದ್ದಾರೆ. ಈ ಯುವ ಆಟಗಾರರು ಭವಿಷ್ಯದಲ್ಲಿ ಭಾರತ ತಂಡದಲ್ಲಿ ಇಬ್ಬರು ಲೆಜೆಂಡ್ ಬ್ಯಾಟರ್ಗಳ ಸ್ಥಾನವನ್ನು ತುಂಬಲಿದ್ದಾರೆ ಎಂದು ತಿಳಿಸಿದ್ದಾರೆ.
""ಮೊದಲನೆಯದಾಗಿ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಬದಲಾಯಿಸುವುದು ತುಂಬಾ ಕಷ್ಟ. ಆದರೆ ಆಡುವ 11ರ ಬಳಗದಲ್ಲಿ, ಈ ಸಮಯದಲ್ಲಿ ನಾಲ್ಕು ಆಯ್ಕೆಗಳಿವೆ ಎಂದು ನಾನು ಭಾವಿಸುತ್ತೇನೆ''.
""ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಮತ್ತು ಶುಭ್ಮನ್ ಗಿಲ್ ಇದ್ದಾರೆ. ಯಶಸ್ವಿ ಜೈಸ್ವಾಲ್ ಅವರು ಟಿ20 ಕ್ರಿಕೆಟ್ನಲ್ಲಿ ಖಂಡಿತವಾಗಿಯೂ ಇನ್ನಿಂಗ್ಸ್ ಪ್ರಾರಂಭಿಸುತ್ತಾರೆ ಎಂದು ನಾನು ಭಾವಿಸುತ್ತೇನೆ,'' ಎಂದು ದಿನೇಶ್ ಕಾರ್ತಿಕ್ ತಿಳಿಸಿದ್ದಾರೆ.
ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ ಶುಭ್ಮನ್ ಗಿಲ್ ಅವರನ್ನು ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ಭಾರತದ ಉಪನಾಯಕರನ್ನಾಗಿ ನೇಮಿಸಲಾಗಿದೆ. ಭಾರತ ಮತ್ತು ಐಪಿಎಲ್ ಎರಡರಲ್ಲೂ ಅವರ ಅತ್ಯುತ್ತಮ ಪ್ರದರ್ಶನದ ಮೂಲಕ, ಶುಭ್ಮನ್ ಗಿಲ್ ಭಾರತ ತಂಡದಲ್ಲಿ ತನ್ನ ಸ್ಥಾನವನ್ನು ಗಳಿಸಿದ್ದಾರೆ ಮತ್ತು ಕೆಲವು ಕಳಪೆ ಫಾರ್ಮ್ನ ಹೊರತಾಗಿಯೂ, ಬಲಗೈ ಬ್ಯಾಟರ್ ಭಾರತಕ್ಕೆ ಭವಿಷ್ಯದ ದೊಡ್ಡ ನಿರೀಕ್ಷೆಯಾಗಿದೆ.
ಮತ್ತೊಂದೆಡೆ, ಯಶಸ್ವಿ ಜೈಸ್ವಾಲ್ ಭಾರತದ ನಿಜವಾದ ಸ್ಟಾರ್ ಆಟಗಾರ ಎಂದು ದಿನೇಶ್ ಕಾರ್ತಿಕ್ ಖಚಿತಪಡಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಯಶಸ್ವಿ ಜೈಸ್ವಾಲ್ ಅಗ್ರ ಕ್ರಮಾಂಕದಲ್ಲಿ ಭಾರತಕ್ಕೆ ನಿಜವಾದ ಸ್ಟಾರ್ ಪರ್ಫಾರ್ಮರ್ ಆಗಿದ್ದಾರೆ ಮತ್ತು ಬಿಸಿಸಿಐ ಅವರಲ್ಲಿ ಹೂಡಿಕೆ ಮಾಡಲು ಬಯಸುತ್ತದೆ ಎಂಬುದು ಸ್ಪಷ್ಟವಾಗಿದೆ.
ಅಭಿಷೇಕ್ ಶರ್ಮಾ ಇತ್ತೀಚೆಗೆ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಭಾರತಕ್ಕೆ ಪದಾರ್ಪಣೆ ಮಾಡಿದರು ಮತ್ತು ಶತಕದೊಂದಿಗೆ ಪ್ರಭಾವ ಬೀರುವಲ್ಲಿ ಯಶಸ್ವಿಯಾದರು.