ಈ ಇಬ್ಬರಲ್ಲಿ ಒಬ್ಬನನ್ನು ತಂಡದಿಂದ ಕೈಬಿಡಬೇಕು ಎಂದ ದಿನೇಶ್ ಕಾರ್ತಿಕ್
ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾದಿಂದ ವೇಗದ ಬೌಲರ್ಗಳಾದ ಭುವನೇಶ್ವರ್ ಕುಮಾರ್ ಅಥವಾ ಜಸ್ಪ್ರೀತ್ ಬುಮ್ರಾ ಈ ಇಬ್ಬರಲ್ಲಿ ಒಬ್ಬರನ್ನು ಕೈಬಿಡಬೇಕು ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯ ಪಟ್ಟಿದ್ದಾರೆ. ಟೀಮ್ ಇಂಡಿಯಾಗೆ ವೇಗದ ಆಕ್ರಮಣ ಮಾಡುವ ಬೌಲರ್ಗಳ ಅಗತ್ಯವಿರುವುದರಿಂದ ಈ ಇಬ್ಬರಲ್ಲಿ ಒಬ್ಬನನ್ನು ತಂಡದಿಂದ ಕೈಬಿಡಬೇಕು ಎಂದಿದ್ದಾರೆ.
ಪ್ರಸಿದ್ಧ್ ಕೃಷ್ಣ ಅಥವಾ ಮೊಹಮ್ಮದ್ ಸಿರಾಜ್ ತಂಡಕ್ಕೆ ಬೇಕು
ಹೀಗೆ ಜಸ್ಪ್ರೀತ್ ಬುಮ್ರಾ ಅಥವಾ ಭುವನೇಶ್ವರ್ ಕುಮಾರ್ ಈ ಇಬ್ಬರಲ್ಲಿ ಒಬ್ಬರನ್ನು ತಂಡದಿಂದ ಹೊರಗಿಡಬೇಕು ಎಂದಿರುವ ದಿನೇಶ್ ಕಾರ್ತಿಕ್ ಆ ಆಟಗಾರನ ಜಾಗಕ್ಕೆ ಮೊಹಮ್ಮದ್ ಸಿರಾಜ್ ಅಥವಾ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದಿದ್ದಾರೆ. ಈ ಇಬ್ಬರು ವೇಗದ ಎಸೆತಗಳ ಆಕ್ರಮಣ ಮಾಡಬಲ್ಲಂಥ ವೇಗಿಗಳಾಗಿರುವುದರಿಂದ ಪಂದ್ಯದ ಮಧ್ಯಮ ಓವರ್ಗಳಲ್ಲಿ ವಿಕೆಟ್ ಪಡೆದು ಎದುರಾಳಿಗಳ ಮೇಲೆ ಒತ್ತಡ ಹೇರಬಲ್ಲರು ಎಂದು ದಿನೇಶ್ ಕಾರ್ತಿಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಥಮ ಏಕದಿನ ಪಂದ್ಯದಲ್ಲಿ ವಿಕೆಟ್ ಪಡೆದದ್ದು ಇಬ್ಬರು ಬೌಲರ್ಗಳು ಮಾತ್ರ
ಮೊದಲನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 4 ವಿಕೆಟ್ಗಳನ್ನು ಕಳೆದುಕೊಂಡಿತು. ಈ ಪೈಕಿ ಏಡನ್ ಮರ್ಕ್ರಮ್ ಅವರನ್ನು ವೆಂಕಟೇಶ್ ಅಯ್ಯರ್ ರನ್ ಔಟ್ ಮಾಡಿದರೆ, ಇನ್ನುಳಿದ 3 ವಿಕೆಟ್ಗಳ ಪೈಕಿ ಜಸ್ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ 1 ವಿಕೆಟ್ ಪಡೆದರು. ಹೀಗೆ ಈ ಇಬ್ಬರು ಬೌಲರ್ಗಳನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಉಳಿದ ಬೌಲರ್ಗಳಾದ ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್ ಹಾಗೂ ಯುಜ್ವೇಂದ್ರ ಚಹಾಲ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಲಿಲ್ಲ.