ಆರ್ಸಿಬಿ ಆಟಗಾರನ ಮೇಲೆ ಮಂಜ್ರೇಕರ್ ವಿಶ್ವಾಸ
ಈ ಬಾರಿಯ ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿರುವ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಬಗ್ಗೆ ಸಂಜಯ್ ಮಂಜ್ರೇಕರ್ ಈ ಮಾತುಗಳನ್ನು ಆಡಿದ್ದಾರೆ. ಆರ್ಸಿಬಿ ತಂಡದಲ್ಲಿ ನೀಡಿದ ಪ್ರದರ್ಶನದ ಬಳಿಕ ಭಾರತ ತಂಡದಲ್ಲಿಯೂ ಅವಕಾಶ ಪಡೆದುಕೊಂಡ ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾ ಪರವಾಗಿ ಮಿಂಚಿದ್ದಾರೆ. ಈ ಕಾರಣದಿಂದಾಗಿ ದಿನೇಶ್ ಕಾರ್ತಿಕ್ ಮೇಲೆ ಸಂಜಯ್ ಮಂಜ್ರೇಕರ್ ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ವಿಶ್ವಕಪ್ನಲ್ಲಿ ಆಡಲು ಅವಕಾಶ ದೊರೆಯಲಿದೆ
ಎನ್ಡಿ ಡಿವಿ ಜೊತೆಗೆ ಮಾತನಾಡಿದ ಸಂಜಯ್ ಮಂಜ್ರೇಕರ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ವಿಶ್ವಕಪ್ ತಂಡದಲ್ಲಿ ಆಡಲು ಕಾರ್ತಿಕ್ಗೆ ಅದ್ಭುತ ಅವಕಾಶ ದೊರೆಯಲಿದ್ದು ಆತನೋರ್ವ ಅತ್ಯುತ್ತಮ ಆಯ್ಕೆಯಾಗಲಿದ್ದಾರೆ ಎಂದಿದ್ದಾರೆ. "ದಿನೇಶ್ ಕಾರ್ತಿಕ್ ತಾನು ಅಂದುಕೊಂಡಿದ್ದನ್ನು ಸಾಧಿಸಲು ಉತ್ತಮ ಅವಕಾಶವಿದೆ. ಯಾಕೆಂದರೆ ತಾನು ಎಷ್ಟು ಸಮರ್ಥ ಆಟಗಾರ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ. ಅದರಲ್ಲೂ ದಕ್ಷಿಣ ಆಫ್ರಿಕಾ ವಿರುದ್ಧದ ರಾಜ್ಕೋಟ್ನ ಪಂದ್ಯದಲಲ್ಇ ಅವರ ಪ್ರದರ್ಶನ ಅಮೋಘವಾಗಿದ್ದು 200ಕ್ಕೂ ಅಧಿಕ ಸ್ಟ್ರೈಕ್ರೇಟ್ನಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ" ಎಂದಿದ್ದಾರೆ ಸಂಜಯ್ ಮಂಜ್ರೇಕರ್.
ಅತಿ ಅಪರೂಪದ ಆಟಗಾರ ಎಂದ ಮಂಜ್ರೇಕರ್
ಇನ್ನು ಈ ಸಂದರ್ಭದಲ್ಲಿ ದಿನೇಶ್ ಕಾರ್ತಿಕ್ ಅವರನ್ನು ಸಂಜಯ್ ಮಂಜ್ರೇಕರ್ ಅಪರೂಪದ ಕ್ರಿಕೆಟಿಗ ಎಂದು ಬಣ್ಣಿಸಿದ್ದಾರೆ. ಕ್ರಿಕೆಟ್ನಿಂದ ನಿವೃತ್ತಿ ಪಡೆಯುವ ಹಂತದಲ್ಲಿ ಈ ರೀತಿಯ ಪ್ರದರ್ಶನ ನೀಡುವ ಮೂಲಕ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವುದು ನಿಜಕ್ಕೂ ಅದ್ಭುತವಾಗಿದೆ ಎಂದಿದ್ದಾರೆ. ಇನ್ನು ಟಿ20 ಕ್ರಿಕೆಟ್ನಲ್ಲಿ ಕೆಳ ಕ್ರಮಾಂಕದಲ್ಲಿ ಈ ರೀತಿಯ ಬ್ಯಾಟಿಂಗ್ ನಡೆಸುವ ತಜ್ಮ ಬ್ಯಾಟರ್ ಆಗಿ ರೂಪುಗೊಂಡಿದ್ದಾರೆ. ದೊರೆಯುವ 15ರಿಂದ 20 ಎಸೆತಗಳ್ಲಲಿ ಅಮೋಘವಾಗಿ ಬ್ಯಾಟಿಂಗ್ ಮಾಡಿ ತಂಡಕ್ಕೆ ಅದ್ಭುತ ಕೊಡುಗೆ ನೀಡುತ್ತಾರೆ. ಈ ರೀತಿಯ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಅವರು ತಮ್ಮ ಸ್ಥಾನವನ್ನು ಅವರೇ ಗಳಿಸಿಕೊಂಡಿದ್ದಾರೆ" ಎಂದಿದ್ದಾರೆ ಸಂಜಯ್ ಮಂಜ್ರೇಕರ್.
ಐರ್ಲೆಂಡ್ ಪ್ರವಾಸಕ್ಕೂ ಡಿಕೆ ಆಯ್ಕೆ
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧಧ ಸರಣಿಯಲ್ಲಿ ಸುದೀರ್ಘ ಮೂರು ವರ್ಷಗಳ ಬಳಿಕ ಭಾರತೀಯ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ದಿನೇಶ್ ಕಾರ್ತಿಕ್ ಆ ಸರಣಿಯಲ್ಲಿ ಮಿಂಚಿದ್ದಾರೆ. ಇದೀಗ ಐರ್ಲೆಂಡ್ ವಿರುದ್ಧಧ ಸರಣಿಗೂ ಅವರು ಆಯ್ಕೆಯಾಗಿದ್ದು ಮತ್ತೊಮ್ಮೆ ಮಿಂಚುವ ವಿಶ್ವಾಸದಲ್ಲಿದ್ದಾರೆ. ಯುವ ಆಟಗಾರರು ಹೊಂದಿರುವ ಈ ತಂಡದಲ್ಲಿ ಅನುಭವಿ ಆಟಗಾರನಾಗಿ ದಿನೇಶ್ ಕಾರ್ತಿಕ್ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.