ಕಾನ್ಪುರ್, ಸೆ. 20 : ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮ ಯೋಧರಿಗೆ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸಂತಾಪ ಸೂಚಿಸಿ, ಗೌರವ ಸಲ್ಲಿಸಿದ್ದಾರೆ.
ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುವ 500ನೇಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಸಿದ್ಧತೆಯಲ್ಲಿದ್ದು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಉರಿ ದಾಳಿಯ ಫೋಟೋ ಪೋಸ್ಟ್ ಮಾಡಿದ್ದಾರೆ. [ವಿರಾಟ್ ಕೊಹ್ಲಿ ಹೊಸ ಹೇರ್ ಸ್ಟೈಲ್ ಹೇಗಿದೆ ನೋಡಿ!]
ಈ ಫೋಟೋ ನನ್ನನ್ನು ಭಾವುಕನನ್ನಾಗಿ ಮಾಡಿದೆ. ಧೈರ್ಯಶಾಲಿ ಯೋಧರ ತ್ಯಾಗವನ್ನು ಹೇಗೆ ಬಣ್ಣಿಸಬೇಕೆಂದು ತಿಳಿಯುತ್ತಿಲ್ಲ. 'ಜೈ ಹಿಂದ್' ಎಂದು ಟ್ವೀಟ್ ಮಾಡಿ ಗೌರವ ಸಲ್ಲಿಸಿದ್ದಾರೆ.
This picture fills me with emotions I can't explain. To all the brave hearts, Jai Hind #UriAttack #Kashmir pic.twitter.com/l0bFhy95tR
— Virat Kohli (@imVkohli) September 19, 2016
ಇನ್ನು ವೀರೇಂದ್ರ ಸೆಹ್ವಾಗ್ ಟ್ವೀಟ್ ನಲ್ಲಿ ಊರಿ ದಾಳಿಯಲ್ಲಿ ಹುತಾತ್ಮ ಯೋಧರಿಗೆ ನಮನ. ಅವರಿಗೂ ಕುಟುಂಬಗಳಿವೆ, ತಾಯ್ನಾಡಿಗೆ ಸೇವೆ ಸಲ್ಲಿಸಿದ ಯೋಧರ ಈ ಫೋಟೋ ನೋಡಲು ನೋವಾಗುತ್ತದೆ. ಎಂದು ಟ್ವಿಟ್ಟರ್ ನಲ್ಲಿ ಕಂಬನಿ ಮಿಡಿದಿದ್ದಾರೆ.
Very very heartbroken to hear about #UriAttack
— Virender Sehwag (@virendersehwag) September 18, 2016
They are not Rebels,they are Terrorists.
Terrorism must be answered appropriately
ಜಮ್ಮು ಕಾಶ್ಮೀರದ ಊರಿ ಪ್ರದೇಶದ ಭಾರತೀಯ ಸೇನಾ ಶಿಬಿರದ ಮೇಲೆ ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ ಒಟ್ಟು 17 ಯೋಧರು ಹುತಾತ್ಮರಾಗಿದ್ದರು.
ಉಗ್ರರ ಈ ಅಮಾನುಷ ಕೃತ್ಯಕ್ಕೆ ಭಾರತೀಯ ಅಥ್ಲೆಟಿಗರು, ಬಾಲಿವುಡ್ ಸ್ಟಾರ್ಸ್ ಸೇರಿದಂತೆ ಹಲವರು ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.