ಬಿಸಿಸಿಐನ ಮಾಜಿ ಕಾರ್ಯದರ್ಶಿ ಹಾಗೂ ಜಾರ್ಖಂಡ್ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ನ ಅಧ್ಯಕ್ಷ ಅಮಿತಾಭ್ ಚೌಧರಿ ಅವರು ಇಂದು ( ಆಗಸ್ಟ್ 16 ) ಇಹಲೋಕ ತ್ಯಜಿಸಿದ್ದಾರೆ. ಮಂಗಳವಾರ ಬೆಳಗ್ಗೆ ಹೃದಯಾಘಾತಕ್ಕೆ ಒಳಗಾದ ಅಮಿತಾಭ್ ಚೌಧರಿ ಅವರಿಗೆ 58 ವರ್ಷ ವಯಸ್ಸಾಗಿತ್ತು.
ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ಬೆಳವಣಿಗೆಗೆ ದೊಡ್ಡ ಮಟ್ಟದಲ್ಲಿ ದುಡಿದಿರುವ ಅಮಿತಾಭ್ ಚೌಧರಿ ರಾಂಚಿಯನ್ನು ಕ್ರಿಕೆಟ್ ಚಟುವಟಿಕೆಗಳ ಪ್ರಮುಖ ತಾಣವನ್ನಾಗಿ ಮಾಡುವುದರಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಇನ್ನು ಅಮಿತಾಭ್ ಚೌಧರಿ ಅವರ ಮರಣಕ್ಕೆ ಹಲವಾರು ಕ್ರಿಕೆಟಿಗರು ಹಾಗೂ ಕ್ರಿಕೆಟ್ ಅಭಿಮಾನಿಗಳು ಮರುಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದಾರೆ.
ಕಳೆದ ಬಾರಿ ಏಕದಿನ ಮಾದರಿಯಲ್ಲಿ ನಡೆದಿದ್ದ ಏಷ್ಯಾಕಪ್ ಈ ಬಾರಿ ಟಿ20 ಮಾದರಿಯಲ್ಲಿ ನಡೆಯಲು ಕಾರಣವೇನು?
ಅಮಿತಾಭ್ ಚೌಧರಿ ನಿಧನದ ಕುರಿತು ಪ್ರತಿಕ್ರಿಯಿಸಿರುವ ಬಿಸಿಸಿಐನ ಖಜಾಂಚಿ "ಜಾರ್ಖಂಡ್ನಲ್ಲಿ ಕ್ರಿಕೆಟ್ ಆಟಕ್ಕೆ ಅಮಿತಾಭ್ ಕೊಡುಗೆ ಅಪಾರ. ಅವರನ್ನು ಜಾರ್ಖಂಟ್ ಕ್ರಿಕೆಟ್ ಅಸೋಸಿಯೇಶನ್ ತುಂಬಾ ಮಿಸ್ ಮಾಡಿಕೊಳ್ಳುತ್ತದೆ ಮತ್ತು ಜಾರ್ಖಂಡ್ನಲ್ಲಿ ಅವರು ಬಿಟ್ಟುಹೋದ ಸ್ಥಾನವನ್ನು ತುಂಬಲು ಕಷ್ಟವಾಗುತ್ತದೆ. ಅವರ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ನನ್ನ ಸಂತಾಪ ಸೂಚಿಸುತ್ತೇನೆ" ಎಂದು ಇಂಡಿಯನ್ ಎಕ್ಸ್ಪ್ರೆಸ್ಗೆ ಹೇಳಿದ್ದಾರೆ.
ಮಹಾರಾಜ ಟ್ರೋಫಿ: ಅರ್ಧ ಟೂರ್ನಿ ಮುಕ್ತಾಯದ ನಂತರ ಶಿವಮೊಗ್ಗಕ್ಕೆ ಕೊನೆಯ ಸ್ಥಾನ; ನಂಬರ್ 1 ಯಾರು?
ಜೆಪಿಎಸ್ಸಿ ಮಾಜಿ ಅಧ್ಯಕ್ಷರಾದ ಶ್ರೀ ಅಮಿತಾಭ್ ಚೌಧರಿಜೀ ಅವರ ಹಠಾತ್ ನಿಧನದ ದುಃಖದ ಸುದ್ದಿಯನ್ನು ಕೇಳಿ ನೋವುಂಟಾಗಿದೆ. ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಮಿತಾಭ್ ಜಿ ರಾಜ್ಯದಲ್ಲಿ ಕ್ರಿಕೆಟ್ ಆಟವನ್ನು ಉತ್ತೇಜಿಸುವಲ್ಲಿ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ದೇವರು ಅಗಲಿದ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ" ಎಂದು ಜಾರ್ಖಂಡ್ನ ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್ ಮಾಡಿದ್ದಾರೆ.