
ಮೊದಲ ಮೂವರು ಆಟಗಾರರು
ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲಿರುವ ಭಾರತ ತಂಡದಲ್ಲಿ ಇರಬೇಕಾದ ಮೊದಲು ಮೂವರು ಆಟಗಾರರೆಂದರೆ ಅದು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಹಾಗೂ ವಿರಾಟ್ ಕೊಹ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಬಹುದು ಎಂದು ಸಹ ಆಕಾಶ್ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಧ್ಯಮ ಕ್ರಮಾಂಕ
ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಕಾಶ್ ಚೋಪ್ರಾ ಪ್ರಕಟಿಸಿರುವ ತಂಡದಲ್ಲಿ ಮಧ್ಯಮ ಕ್ರಮಾಂಕದ ಆಟಗಾರರಾಗಿ ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಹಾಗೂ ಈ ತಂಡದಲ್ಲಿ ರಿಷಭ್ ಪಂತ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಬೇಕು ಎಂದು ಆಕಾಶ್ ಚೋಪ್ರಾ ಆಯ್ಕೆ ಮಾಡಿದ್ದಾರೆ.

ಆಲ್ರೌಂಡರ್ಸ್
ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಆಲ್ರೌಂಡರ್ಸ್ ವಿಭಾಗಕ್ಕೆ ರವೀಂದ್ರ ಜಡೇಜಾ ಮತ್ತು ವೆಂಕಟೇಶ್ ಅಯ್ಯರ್ ಅವರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ. ಹಾಗೂ ವಾಷಿಂಗ್ಟನ್ ಸುಂದರ್ ಪ್ರದರ್ಶನ ತನಗೆ ಅಷ್ಟೇನೂ ಮೆಚ್ಚುಗೆಯಾಗಲಿಲ್ಲ ಎಂದಿರುವ ಆಕಾಶ್ ಚೋಪ್ರಾ ಆತನನ್ನು ತಾವು ಹೆಸರಿಸಿರುವ ತಂಡದಿಂದ ಕೈ ಬಿಟ್ಟಿದ್ದಾರೆ.

ಬೌಲರ್ಗಳು
ಇನ್ನು ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಯುಜುವೇಂದ್ರ ಚಾಹಲ್ ಇರಲೇಬೇಕೆಂದು ಅಭಿಪ್ರಾಯಪಟ್ಟಿರುವ ಆಕಾಶ್ ಚೋಪ್ರಾ ಭುವನೇಶ್ವರ್ ಕುಮಾರ್ ಹಾಗೂ ದೀಪಕ್ ಚಹರ್ ಇಬ್ಬರಲ್ಲಿ ಓರ್ವ ಆಟಗಾರ ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂದಿದ್ದಾರೆ. ಇನ್ನೂ ಮುಂದುವರೆದು ಮಾತನಾಡಿರುವ ಆಕಾಶ್ ಚೋಪ್ರಾ ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ ಹಾಗೂ ಅವೇಶ್ ಖಾನ್ ಈ ಮೂವರಲ್ಲಿ ಓರ್ವ ವೇಗಿ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳುತ್ತಾನೆ ಎಂದಿದ್ದಾರೆ.
ಆಕಾಶ್ ಚೋಪ್ರಾ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಿರುವ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ / ದೀಪಕ್ ಚಾಹರ್, ಪ್ರಸಿದ್ಧ್ ಖಾನ್ ಕೃಷ್ಣ / ಎ. /ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ/ಟಿ ನಟರಾಜನ್/ಖಲೀಲ್ ಅಹಮದ್


Click it and Unblock the Notifications
