ಏನೀ ವಿವಾದ?
ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ಲೈವ್ ಸಂವಾದಲ್ಲಿ ಪಾಲ್ಗೊಂಡಿದ್ದ ಯುವರಾಜ್, ಯಜುವೇಂದ್ರ ಚಾಹಲ್ ಹಾಗೂ ಕುಲದೀಪ್ ಯಾದವ್ ಅವರನ್ನು 'ಭಂಗಿ' ಎಂದು ಕರೆದಿದ್ದರು. ಯುವಿ ಬಳಸಿದ ಈ ಪದಕ್ಕೆ ದಲಿತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಹರ್ಯಾಣದ ಕೆಲ ಸಂಘಟನೆಗಳು ಯುವಿ ಹೇಳಿಕೆಯನ್ನು ಖಂಡಿಸಿದ್ದಲ್ಲದೆ, ಹರ್ಯಾಣ ಪೊಲೀಸರಿಗೆ ದೂರು ನೀಡಿತ್ತು.
ಯುವರಾಜ್ ಸ್ಪಷ್ಟನೆ
ಟ್ವೀಟ್ನಲ್ಲಿ ಯುವಿ, 'ಈ ಮೂಲಕ ಸ್ಪಷ್ಟನೆ ನೀಡುವುದೇನಂದರೆ, ನನಗೆ ಜಾತಿ, ಬಣ್ಣ, ಧರ್ಮ ಅಥವಾ ಲಿಂಗ ಇಂಥ ಯಾವುದೇ ರೀತಿಯ ಅಸಮಾನತೆಯ ಬಗ್ಗೆ ನಂಬಿಕೆಯಿಲ್ಲ. ಜನ ಕಲ್ಯಾಣವನ್ನು ನಾನು ಪಾಲಿಸಿಕೊಂಡು ಬಂದಿದ್ದೇನೆ ಇನ್ನೂ ಮುಂದುವರೆಸುತ್ತೇನೆ. ನಾನು ಜೀವನದ ಘನತೆಯನ್ನು ನಂಬುತ್ತೇನೆ ಮತ್ತು ಪ್ರತಿಯೊಬ್ಬ ವ್ಯಕ್ತಿಯನ್ನೂ ಗೌರವಿಸುತ್ತೇನೆ,' ಎಂದು ಬರೆದುಕೊಂಡಿದ್ದಾರೆ.
ನೋವಾಗಿದ್ದರೆ ವಿಷಾದಿಸುತ್ತೇನೆ
ಯುವಿಯ ಮುಂದುವರೆದ ಟ್ವೀಟ್ನಲ್ಲಿ, 'ಸ್ನೇಹಿತರ ಜೊತೆ ಸಂವಾದ ನಡೆಸುವಾಗ ಅನಗತ್ಯವಾಗಿ ಅಪಾರ್ಥವಾಗಿದೆ ಎಂದು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಏನೇ ಇರಲಿ, ಜವಾಬ್ದಾರಿಯುತ ಭಾರತೀಯನಾಗಿ ನಾನು ಹೇಳಬಯಸುವುದೇನಂದರೆ, ನಾನು ಉದ್ದೇಶಪೂರ್ವಕವಲ್ಲದೆ ಮಾತನಾಡುವಾಗ ಯಾರದೇ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇನೆ' ಎಂದು ಬರೆದುಕೊಳ್ಳಲಾಗಿದೆ.
ಜಾತಿ ನಿಂದನೆಯ ದೂರು ದಾಖಲು
ಇನ್ಸ್ಟಾಗ್ರಾಮ್ ಲೈವ್ ಸಂವಾದಲ್ಲಿ ರೋಹಿತ್ ಶರ್ಮ, ಯುವರಾಜ್ ಸಿಂಗ್ ಜೊತೆಗೆ ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್ ಕೂಡಾ ಇದ್ದರು. ಆದರೆ ಯುವರಾಜ್ ಬಳಸಿದ್ದ 'ಭಂಗಿ' ಪದ ಉತ್ತರ ಭಾರತದ ಕಡೆ ಬಳಸುವ ಜಾತಿ ಸೂಚಕ ಪದವೆನ್ನಲಾಗುತ್ತಿದೆ. ಹೀಗಾಗಿ ಯುವಿ ಉದ್ದೇಶಪೂರ್ವಕವಾಗಿ ಜಾತಿ ನಿಂದಿಸಿದ್ದಾರೆ ಎಂದು, ರಜತ್ ಕಾಲ್ಸನ್ ಎಂಬ ವಕೀಲರು ಹಿಸಾರ್ನ ಹಂಸಿ ಪೊಲೀಸ್ ಠಾಣೆಯಲ್ಲಿ ಯುವಿ ವಿರುದ್ಧ ದೂರು ದಾಖಲಿಸಿದ್ದರು.