ಕೆಟ್ಟ ನಿರ್ಧಾರವೆಂದ ಲಕ್ಷ್ಮಣ್
ಈ ನಿರ್ಧಾರ ಸರಿಯಾಗಿದೆ ಎಂದು ನನಗೆ ಅನಿಸುತ್ತಿಲ್ಲ ಎಂದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ. ಕೊಹ್ಲಿ ತಮ್ಮ ಕ್ರಮಾಂಕದಲ್ಲು ಬದಲಾವಣೆ ಮಾಡದೆ ಕೆಎಲ್ ರಾಹುಲ್ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಇಳಿಸುವ ನಿರ್ಧಾರವನ್ನು ಮಾಡಬಹುದಾಗಿತ್ತು ಎಂದಿದ್ದಾರೆ.
ಹರ್ಭಜನ್ಗೂ ಇಷ್ಟವಾಗದ ನಿರ್ಧಾರ
ಹರ್ಭಜನ್ ಸಿಂಗ್ ಕೂಡ ಇದೇ ರಿತಿಯ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಅತ್ಯುತ್ತಮ ಬ್ಯಾಟ್ಸ್ಮನ್ ಆಗಿರುವ ವಿರಾಟ್ ಕೊಹ್ಲಿ ತಮ್ಮ ಕ್ರಮಾಂಕವನ್ನು ಬದಲಾವಣೆ ಮಾಡದೆ ಅದೇ ಕ್ರಮಾಂಕದಲ್ಲಿ ಮುಂದುವರಿಯಬೇಕು, ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಅದೆಷ್ಟೋ ಪಂದ್ಯಗಳನ್ನು ಗೆಲ್ಲಿಸಿದ್ದಾರೆ ಅದನ್ನು ಬದಲಾಯಿಸುವ ಅಗತ್ಯವಿಲ್ಲ ಎಂದಿದ್ದಾರೆ.
ಮಂಜ್ರೆಕರ್ ಅಪಸ್ವರ
ಟೀಮ್ ಇಂಡಿಯಾದ ಮತ್ತೋರ್ವ ಮಾಜಿ ಆಟಗಾರ ಸಂಜಯ್ ಮಂಜ್ರೆಕರ್ ಅಪಸ್ವರ ಹೇಳಿಕೆ ನೀಡಿದ್ದಾರೆ. ಐದನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಕಣಕ್ಕಿಳಿಸಿದ್ದು ಉತ್ತಮ ನಿರ್ಧಾರವಲ್ಲ. ನಾಲ್ಕನೇ ಕ್ರಮಾಂಕದಲ್ಲಿ ನೆಲೆಯಾಗಲು ಸಮಯವನ್ನು ನೀಡಬೇಕು ಎಂದು ಹೇಳಿಕೆ ನೀಡಿದ್ದಾರೆ.
ಕೊಹ್ಲಿ ವೈಫಲ್ಯ:
ನಾಲ್ಕನೇ ಕ್ರಮಾಂಕದಲ್ಲಿ ಆಡಲು ಕಣಕ್ಕಿಳಿದ ವಿರಾಟ್ ಕೊಹ್ಲಿ ಕಳಪೆ ಆಟವನ್ನು ಪ್ರದರ್ಶಿಸಿದರು.14 ಎಸೆತ ಎದುರಿಸಿದ ವಿರಾಟ್ ಕೊಹ್ಲಿ 16 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಐಯ್ಯರ್ ಕೂಡ ವಿಫಲರಾದರು. 9 ಎಸೆತ ಎದುರಿಸಿದ ಶ್ರೇಯಸ್ ಐಯ್ಯರ್ ಕೇವಲ 4 ರನ್ ಮಾತ್ರವೇ ಗಳಿಸಿ ನಿರಾಸೆ ಉಂಟುಮಾಡಿದರು.