For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ ಅಲ್ಲ, ರೋಹಿತ್ ಅಲ್ಲ; ಈ ಭಾರತೀಯ ಏಕಪಕ್ಷೀಯವಾಗಿ ಪಂದ್ಯ ಗೆಲ್ಲಿಸುತ್ತಾನೆ; ಪಾಕ್ ಮಾಜಿ ಸ್ಟಾರ್ ಶ್ಲಾಘನೆ

ಮಂಗಳವಾರ, ಆಗಸ್ಟ್ 8ರಂದು ಗಯಾನಾದಲ್ಲಿ ನಡೆದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪ್ರವಾಸಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಸರಣಿಯನ್ನು ಜೀವಂತವಾಗಿರಿಸಿಕೊಂಡಿತು.

ಸರಣಿಯಲ್ಲಿ ವೆಸ್ಟ್ ಇಂಡೀಸ್ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದ್ದರೆ, ಭಾರತ ಈ ಸರಣಿಯನ್ನು ಗೆಲ್ಲಲು ಮುಂದಿನ ಎರಡು ಟಿ20 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

Former Pakistan cricketer Kamran Akmal Praised Suryakumar Yadav For Single-handedly Wins The Match

ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತ ಗೆಲ್ಲಲು ಮಾರ್ಗದರ್ಶನ ನೀಡಿದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ಪಾಕಿಸ್ತಾನದ ಮಾಜಿ ವಿಕೆಟ್‌ಕೀಪರ್ ಕಮ್ರಾನ್ ಅಕ್ಮಲ್ ಶ್ಲಾಘಿಸಿದ್ದಾರೆ.

ಕೆರಿಬಿಯನ್ ವಿರುದ್ಧದ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಪ್ರದರ್ಶನ ಕಾರಣವಾಯಿತು. ಕುಲದೀಪ್ ಯಾದವ್ 28 ರನ್‌ಗಳಿಗೆ 3 ವಿಕೆಟ್ ಪಡೆಯುವ ಮೂಲಕ ಮಧ್ಯಮ ಓವರ್‌ಗಳಲ್ಲಿ ವೆಸ್ಟ್ ಇಂಡೀಸ್ ತಂಡದ ರನ್‌ಗಳ ಹರಿವನ್ನು ನಿಯಂತ್ರಿಸಿದರು.

ಆದರೆ, ವೆಸ್ಟ್ ಇಂಡೀಸ್ ನಾಯಕ ರೋವ್ಮನ್ ಪೊವೆಲ್ 19 ಎಸೆತಗಳಲ್ಲಿ 40 ರನ್ ಗಳಿಸಿ ಆತಿಥೇಯ ತಂಡ 5 ವಿಕೆಟ್‌ಗೆ 159 ರನ್ ಗಳಿಸಿತು.

Former Pakistan cricketer Kamran Akmal Praised Suryakumar Yadav For Single-handedly Wins The Match

ಬಳಿಕ ಭಾರತದ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (1 ರನ್) ಮತ್ತು ಶುಭ್ಮನ್ ಗಿಲ್ (6) ರನ್ ಚೇಸಿಂಗ್‌ನಲ್ಲಿ ಕಳಪೆಯಾಗಿ ಔಟಾದರು. ಅನಂತರ ಸೂರ್ಯಕುಮಾರ್ ಯಾದವ್ 44 ಎಸೆತಗಳಲ್ಲಿ ಸ್ಫೋಟಕ 83 ರನ್ ಗಳಿಸುವ ಮೂಲಕ ಭಾರತ 17.5 ಓವರ್‌ಗಳಲ್ಲಿ ಗುರಿಯನ್ನು ತಲುಪಲು ನೆರವಾದರು.

"ಆರಂಭಿಕ ವಿಕೆಟ್‌ಗಳು ಉರುಳಿದಾಗ, ಭಾರತದ ಹಿರಿಯ ಬ್ಯಾಟ್ಸ್‌ಮನ್‌ಗಳು ಜವಾಬ್ದಾರಿ ವಹಿಸಿಕೊಂಡು ಪಂದ್ಯ ಗೆಲ್ಲಿಸಿದರು. ಸೂರ್ಯಕುಮಾರ್ ಯಾದವ್ ಎಂತಹ ಆಟಗಾರನೆಂದರೆ, ಅವರು ರನ್‌ಗಳನ್ನು ಗಳಿಸಿದಾಗ ಪಂದ್ಯವನ್ನು ಏಕಪಕ್ಷೀಯವಾಗಿ ಗೆಲ್ಲಿಸುತ್ತಾರೆ ಮತ್ತು ಅದನ್ನೇ ಅವರು ಮಾಡಿದರು," ಎಂದು ಪಾಕಿಸ್ತಾನದ ಮಾಜಿ ವಿಕೆಟ್‌ಕೀಪರ್ ಕಮ್ರಾನ್ ಅಕ್ಮಲ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.

ತಿಲಕ್ ವರ್ಮಾ 37 ಎಸೆತಗಳಲ್ಲಿ ಅಜೇಯ 49 ರನ್ ಗಳಿಸುವ ಮೂಲಕ ಸೂರ್ಯಕುಮಾರ್ ಯಾದವ್ ಜೊತೆ 87 ರನ್‌ಗಳ ಜೊತೆಯಾಟ ನೀಡಿದರು. ತಮ್ಮ ಹಿರಿಯ ಮುಂಬೈ ಇಂಡಿಯನ್ಸ್ ಸಹ ಆಟಗಾರ ಸೂರ್ಯಕುಮಾರ್ ಯಾದವ್‌ಗೆ ಮತ್ತೊಂದು ತುದಿಯಲ್ಲಿ ಅತ್ಯುತ್ತಮ ಬೆಂಬಲ ನೀಡಿದರು.

ಬಳಿಕ ನಾಯಕ ಹಾರ್ದಿಕ್ ಪಾಂಡ್ಯ 15 ಎಸೆತಗಳಲ್ಲಿ ಅಜೇಯ 20 ರನ್ ಗಳಿಸಲು ಗೆಲುವಿನ ಸಿಕ್ಸರ್ ಬಾರಿಸಿದ್ದರಿಂದ ತಿಲಕ್ ವರ್ಮಾ ಅವರು ಚೊಚ್ಚಲ ಸರಣಿಯಲ್ಲಿ ತಮ್ಮ ಎರಡನೇ ಸತತ ಅರ್ಧಶತಕವನ್ನು ತಪ್ಪಿಸಿಕೊಂಡರು.

ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳಲ್ಲಿ ಸೋತ ನಂತರ, ಭಾರತಕ್ಕೆ ಇದು ಮೊದಲ ಜಯವಾಗಿತ್ತು. ಭಾರತದ ಬ್ಯಾಟಿಂಗ್ ಬಗ್ಗೆ ಮಾತನಾಡಿದ ಕಮ್ರಾನ್ ಅಕ್ಮಲ್, "ಬ್ಯಾಟಿಂಗ್‌ನಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ನಾವು ಏನಾದರೂ ತಪ್ಪು ಮಾಡುತ್ತಿದ್ದೇವೆ ಮತ್ತು ನಾವು ಪಂದ್ಯಗಳನ್ನು ಗೆಲ್ಲಬೇಕಾದರೆ ಅದನ್ನು ಬದಲಾಯಿಸಬೇಕಾಗಿದೆ ಎಂಬ ಜವಾಬ್ದಾರಿ ಮತ್ತು ಆಟದ ಅರಿವು ಕಂಡುಬಂದಿದೆ," ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಅವರು ಭಾರತ ತಂಡದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Story first published: Thursday, August 10, 2023, 17:48 [IST]
Other articles published on Aug 10, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+