ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳ ನಡುವಿನ ರೋಚಕ ಪಂದ್ಯವು ಮಾರ್ಚ್ 4 ರ ಮಂಗಳವಾರ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ, ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ 2023 ರ ಏಕದಿನ ವಿಶ್ವಕಪ್ನ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಳ್ಳಲು ಮೈದಾನಕ್ಕಿಳಿಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೆ ಭಾರತದ ತಂಡದ ಸಂಯೋಜನೆ ಹೇಗಿರಲಿದೆ? ಭಾರತ ಮತ್ತೊಮ್ಮೆ ನಾಲ್ವರು ಸ್ಪಿನ್ನರ್ಗಳೊಂದಿಗೆ ಆಡಲಿದೆಯೇ? ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ಇದಕ್ಕೆ ಉತ್ತರ ನೀಡಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ಗೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಶರ್ಮಾ, ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದ ಬಗ್ಗೆ ಮಾತನಾಡಿದ್ದಾರೆ. ನಾವು 4 ಸ್ಪಿನ್ನರ್ಗಳನ್ನು ಆಡಿಸಿದರೆ, ಅವರನ್ನು ಸಮತೋಲನದಿಂದ ಹೇಗೆ ಬಳಸುವುದು ಎಂಬುದರ ಕುರಿತು ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.
ನಮಗೆ ಯಾವುದು ಸರಿಯೋ ಅದನ್ನು ನಾವು ಮಾಡುತ್ತೇವೆ. ನಾವು ಪಿಚ್ ಪರಿಸ್ಥಿತಿಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದೇವೆ. ಯಾವ ರೀತಿಯ ಬೌಲಿಂಗ್ ಪರಿಣಾಮಕಾರಿ ಎಂದು ನಮಗೆ ತಿಳಿದಿದೆ. ನಾವು ಒಂದು ದಿನ ಅದರ ಬಗ್ಗೆ ಯೋಚಿಸಿ ನಂತರ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದರೆ ಖಂಡಿತವಾಗಿಯೂ ನಾಲ್ವರು ಸ್ಪಿನ್ನರ್ಗಳನ್ನು ಆಡಿರುವುದು ಉತ್ತಮ ಆಯ್ಕೆಯಾಗಿದೆ.
ಸೆಮಿಫೈನಲ್ನಲ್ಲಿ ವರುಣ್ ಚಕ್ರವರ್ತಿ ಅವರನ್ನು ಆಡಿಸುವ ಬಗ್ಗೆ ಚಿಂತನೆ ಇದೆಯೇ ಎಂದು ರೋಹಿತ್ ಅವರನ್ನು ಕೇಳಿದಾಗ, 'ಅವರು ಹಿಂದಿನ ಪಂದ್ಯದಲ್ಲಿ ಏನು ಮಾಡಬಹುದು ಎಂಬುದನ್ನು ತೋರಿಸಿದ್ದಾರೆ. ಈಗ ನಾವು ತಂಡದ ಸಂಯೋಜನೆಯನ್ನು ಹೇಗೆ ಸರಿಪಡಿಸುವುದು ಎಂಬುದರ ಕುರಿತು ಯೋಚಿಸಬೇಕು. ಅವರಿಗೆ ಅವಕಾಶ ಸಿಕ್ಕಾಗ ಅದ್ಭುತ ಪ್ರದರ್ಶನ ನೀಡಿದರು. ಪಂದ್ಯದ ನಂತರವೂ ನಾನು ಅವರಲ್ಲಿ ಏನೋ ವಿಭಿನ್ನತೆ ಇದೆ ಎಂದು ಹೇಳಿದೆ. ಅವರು ಲಯದಲ್ಲಿದ್ದಾಗ, ಅದ್ಭುತವಾಗಿ ಬೌಲಿಂಗ್ ಮಾಡುವ ಮೂಲಕ 5 ವಿಕೆಟ್ಗಳನ್ನು ಕಬಳಿಸುತ್ತಾರೆ ಎಂದಿದ್ದಾರೆ.
ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಭಾರತ 4 ಸ್ಪಿನ್ನರ್ಗಳನ್ನು ಕಣಕ್ಕಿಳಿಸಿತು. ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಸ್ಪಿನ್ನರ್ ಒಟ್ಟು 9 ವಿಕೆಟ್ಗಳನ್ನು ಕಬಳಿಸಿದರು. ಈ ಪೈಕಿ ವರುಣ್ ಚಕ್ರವರ್ತಿ ಅತ್ಯಂತ ಪರಿಣಾಮಕಾರಿ ಬೌಲರ್ ಆಗಿದ್ದು, 42 ರನ್ಗಳಿಗೆ 5 ವಿಕೆಟ್ಗಳನ್ನು ಪಡೆದರು. ಇದು ಈ ಟೂರ್ನಿಯಲ್ಲಿ ಇದುವರೆಗಿನ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.