For Quick Alerts
ALLOW NOTIFICATIONS  
For Daily Alerts
 

BCCI: ಗೌತಮ್ ಗಂಭೀರ್-ಅಜಿತ್ ಅಗರ್ಕರ್ ನಡುವೆ ವಾಗ್ವಾದ; 3 ಆಟಗಾರರ ಬಗ್ಗೆ ಚರ್ಚೆ

ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ದುಬೈ ತಲುಪಿದೆ. ತನ್ನ ಮೊದಲ ಪಂದ್ಯವನ್ನು ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಭಾರತ ತಂಡವು ಬಲಿಷ್ಠವಾಗಿ ಕಾಣುತ್ತದೆ. ಕ್ರಿಕೆಟ್ ತಜ್ಞರು ರೋಹಿತ್ ಶರ್ಮಾ ನಾಯಕನಾಗಿ ಮತ್ತೊಂದು ಐಸಿಸಿ ಟ್ರೋಫಿಯನ್ನು ಎತ್ತಿ ಹಿಡಿಯಬಲ್ಲರು ಎಂದು ಭವಿಷ್ಯ ನುಡಿದಿದ್ದಾರೆ. ಇಂಗ್ಲೆಂಡ್ ವಿರುದ್ಧ ಸತತ ಮೂರು ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ತನ್ನ ಶಕ್ತಿಯನ್ನು ಪ್ರದರ್ಶಿಸಿದೆ. ಮತ್ತೊಂದೆಡೆ ತಂಡದ ಆಯ್ಕೆಗೆ ಸಂಬಂಧಿಸಿದಂತೆ ಹಲವು ಚರ್ಚೆಗಳು ನಡೆದಿದೆ. ಇದು ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

ವರದಿಗಳ ಪ್ರಕಾರ, ತಂಡದ ಆಯ್ಕೆಗೆ ಸಂಬಂಧಿಸಿದ ಹಲವು ನಿರ್ಧಾರಗಳ ಬಗ್ಗೆ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಮತ್ತು ಹೆಡ್‌ಕೋಚ್ ಗೌತಮ್ ಗಂಭೀರ್ ಅವರ ನಡುವೆ ಒಮ್ಮತವಿರಲಿಲ್ಲ. ಆಯ್ಕೆ ಸಭೆಯಲ್ಲಿ ಇಬ್ಬರ ನಡುವೆ ದೀರ್ಘ ಚರ್ಚೆ ನಡೆಯಿತು. ಕೆಲವು ಆಟಗಾರರ ಆಯ್ಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಸಾಕಷ್ಟು ಚರ್ಚೆ ನಡೆಯಿತು.

Gautam Gambhir-Ajit Agarkar had an argument during discussion about 3 players

ಶ್ರೇಯಸ್ ಅಯ್ಯರ್ ಆಗಮನದಿಂದ ಮಧ್ಯಮ ಕ್ರಮಾಂಕ ಬಲಿಷ್ಠವಾಗಿದೆ. ಆದರೆ ಗೌತಮ್ ಗಂಭೀರ್ ಎಡ-ಬಲ ಸಂಯೋಜನೆಗಾಗಿ ಮಧ್ಯಮ ಕ್ರಮಾಂಕವನ್ನು ನಿರಂತರವಾಗಿ ಬದಲಾಯಿಸಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ತಂಡದಲ್ಲಿ ಯಾರ ಬ್ಯಾಟಿಂಗ್ ಕ್ರಮಾಂಕವನ್ನೂ ನಿರ್ಧರಿಸಲಾಗುವುದಿಲ್ಲ ಎಂಬುದು ಬಹಿರಂಗವಾಗಿದೆ.

ಅಯ್ಯರ್ ಬಗ್ಗೆ ಚರ್ಚೆ

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅಯ್ಯರ್ ಮಧ್ಯಮ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು. ಭಾರತ ತಂಡವು ಎಡ-ಬಲ ಟಾಪ್-ಆರ್ಡರ್ ಲೈನ್‌ಅಪ್‌ನೊಂದಿಗೆ ಪ್ರಯೋಗ ಮಾಡಲು ಅವರನ್ನು ಆರಂಭಿಕ ಪಂದ್ಯದಲ್ಲಿ ಕೈಬಿಡಲು ಪರಿಗಣಿಸಿದ್ದರೂ, ಅವರು 60.33 ರ ಸರಾಸರಿಯಲ್ಲಿ 181 ರನ್‌ಗಳನ್ನು ಗಳಿಸಿದರು. ಎರಡು ಅರ್ಧಶತಕಗಳನ್ನು ಬಾರಿಸಿದರು. ಅಯ್ಯರ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವ ಬಗ್ಗೆ ಆಯ್ಕೆ ಸಮಿತಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆದಿದೆ ಎಂದು ವರದಿಗಳಾಗಿವೆ.

ಪಂತ್ vs ರಾಹುಲ್

ಗಂಭೀರ್ ನೇತೃತ್ವದ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಕೆಎಲ್ ರಾಹುಲ್ ಅವರನ್ನು ಬೆಂಬಲಿಸುವ ಮೂಲಕ ಅಜಿತ್ ಅಗರ್ಕರ್ ವಿರುದ್ಧ ಕ್ರಮ ಕೈಗೊಂಡಿದೆ ಎಂದು ವರದಿ ಬಹಿರಂಗಪಡಿಸಿದೆ. ಕಳೆದ ತಿಂಗಳು ಚಾಂಪಿಯನ್ಸ್ ಟ್ರೋಫಿ ಸಂದರ್ಭದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಅಗರ್ಕರ್ ಅವರು ಐಸಿಸಿ ಟೂರ್ನಿ ಮತ್ತು ಇಂಗ್ಲೆಂಡ್ ಏಕದಿನ ಸರಣಿಗೆ ಪಂತ್ ಅವರನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಹೇಳಿದ್ದರು. ಆದರೆ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳಲ್ಲಿ ರಾಹುಲ್ ಆಡಿದ್ದರಿಂದ ರೋಹಿತ್ ಮತ್ತು ಗಂಭೀರ್ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಹೊರ ಬಿದ್ದಿದೆ.

ವರದಿಯಲ್ಲಿ ಏನಿದೆ?

ಚಾಂಪಿಯನ್ಸ್ ಟ್ರೋಫಿ ತಂಡವನ್ನು ಘೋಷಿಸುವಾಗ ಅಜಿತ್ ಅಗರ್ಕರ್, ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಹೇಳಿದ್ದರು. ಆದರೆ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರು ಏಕದಿನ ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನು ಆಡಲು ಅವಕಾಶ ಪಡೆಯದ ತಂಡದ ಏಕೈಕ ಆಟಗಾರ ಪಂತ್. ಶ್ರೇಯಸ್ ಅಯ್ಯರ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಮತ್ತು ಎರಡನೇ ವಿಕೆಟ್ ಕೀಪರ್ ಸ್ಥಾನದ ಬಗ್ಗೆ ಆಯ್ಕೆ ಸಭೆಯಲ್ಲಿ ಬಿಸಿ ಚರ್ಚೆ ನಡೆದಿದೆ ಎಂದು ಬಿಸಿಸಿಐ ಮೂಲಗಳು ಸೂಚಿಸಿವೆ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಹೊರಡುವ ಮುನ್ನ ತಮ್ಮ ಕೊನೆಯ ಪತ್ರಿಕಾಗೋಷ್ಠಿಯಲ್ಲಿ, ಪಂತ್ ಬದಲಿಗೆ ರಾಹುಲ್ ಚಾಂಪಿಯನ್ಸ್ ಟ್ರೋಫಿಗೆ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಗಂಭೀರ್ ದೃಢಪಡಿಸಿದ್ದರು. ವೈಯಕ್ತಿಕವಾಗಿ ಮಾತನಾಡುವುದು ತುಂಬಾ ಕಷ್ಟ. ಆದರೆ ಪಂತ್ ತಂಡದ ಭಾಗವಾಗಿದ್ದರೆ, ಅವರಿಗೆ ಅವಕಾಶ ಸಿಗುತ್ತದೆ ಎಂದು ನಾನು ಹೇಳಬಲ್ಲೆ. ಪ್ರಸ್ತುತ ಕೆಎಲ್ ನಮ್ಮ ನಂಬರ್ ಒನ್ ವಿಕೆಟ್ ಕೀಪರ್. ಅವರು ನಮಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್‌ಗಳು ಇರುವಾಗ, ನಾವು ಹೊಂದಿರುವ ಗುಣಮಟ್ಟದಿಂದ ಇಬ್ಬರನ್ನೂ ಆಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು.

Story first published: Sunday, February 16, 2025, 17:42 [IST]
Other articles published on Feb 16, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+