ಏಷ್ಯಾಕಪ್ 2023ಗಾಗಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದಾಗಿನಿಂದ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಡುವೆ ವಾಕ್ಸಮರ ತಾರಕಕ್ಕೇರಿದೆ.
ಜಯ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ, ಏಷ್ಯಾ ಕಪ್ಗಾಗಿ ಭಾರತೀಯ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಬರದಿದ್ದರೆ, ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ಗೆ ಪಾಕಿಸ್ತಾನ ತಂಡ ಭಾರತಕ್ಕೆ ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಭಾರತದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಕೂಡ ಇದೀಗ ರಮೀಜ್ ರಾಜಾ ಅವರ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದ್ದು, "ಇದು ಬಿಸಿಸಿಐ ಮತ್ತು ಪಿಸಿಬಿಯ ನಿರ್ಧಾರ. ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಒಟ್ಟಿಗೆ ತೆಗೆದುಕೊಳ್ಳುತ್ತಾರೆ," ಎಂದು ಗೌತಮ್ ಗಂಭೀರ್ ಎಎನ್ಐಗೆ ತಿಳಿಸಿದ್ದಾರೆ.
World Cup 2023: ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ ಎಚ್ಚರಿಕೆಗೆ ಖಡಕ್ ತಿರುಗೇಟು ಕೊಟ್ಟ ಕ್ರೀಡಾ ಸಚಿವ
ಇತ್ತೀಚೆಗೆ ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ ಮಾತನಾಡಿ, "ಭಾರತ ಕ್ರಿಕೆಟ್ ತಂಡ ಏಷ್ಯಾಕಪ್ಗಾಗಿ ಪಾಕಿಸ್ತಾನಕ್ಕೆ ಬಂದರೆ, ನಾವು ವಿಶ್ವಕಪ್ಗೆ ಹೋಗುತ್ತೇವೆ. ಭಾರತ ಬರದಿದ್ದರೆ ಏಕದಿನ ವಿಶ್ವಕಪ್ ಅನ್ನು ಪಾಕಿಸ್ತಾನವಿಲ್ಲದೆ ಆಡಲಿ, ಪಾಕಿಸ್ತಾನ ನಿಗದಿತ ವಿಶ್ವಕಪ್ನಲ್ಲಿ ಭಾಗವಹಿಸದಿರುವುದು ನಮ್ಮ ನಿಲುವು ಮೊಂಡಾಗಿದೆ," ಎಂದು ಎಚ್ಚರಿಕೆ ನೀಡಿದ್ದರು.
"ನಾವು ಆಕ್ರಮಣಕಾರಿ ವಿಧಾನವನ್ನು ಅಳವಡಿಸಿಕೊಳ್ಳುತ್ತೇವೆ, ನಮ್ಮ ತಂಡವು ಉತ್ತಮ ಪ್ರದರ್ಶನವನ್ನು ತೋರಿಸುತ್ತಿದೆ. ನಾವು ವಿಶ್ವದ ಶ್ರೀಮಂತ ಕ್ರಿಕೆಟ್ ತಂಡವನ್ನು ಸೋಲಿಸಿದ್ದೇವೆ, 2021ರ ಟಿ20 ವಿಶ್ವಕಪ್ ಮತ್ತು ಏಷ್ಯಾಕಪ್ನಲ್ಲಿ ಭಾರತಕ್ಕೆ ಸೋಲಿನ ರುಚಿ ತೋರಿಸಿದ್ದೇವೆ," ಎಂದು ತಿಳಿಸಿದ್ದರು.
"ನಾವು ಪಾಕಿಸ್ತಾನ ಕ್ರಿಕೆಟ್ನ ಆರ್ಥಿಕತೆಯನ್ನು ಸುಧಾರಿಸಬೇಕು, ನಮ್ಮ ತಂಡವು ಉತ್ತಮ ಪ್ರದರ್ಶನ ನೀಡಿದಾಗ ಮಾತ್ರ ಅದು ಸಂಭವಿಸುತ್ತದೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ಪಾಕಿಸ್ತಾನ ಕ್ರಿಕೆಟ್ ತಂಡವು ಒಂದು ವರ್ಷದಲ್ಲಿ ಭಾರತ ತಂಡವನ್ನು ಎರಡು ಬಾರಿ ಸೋಲಿಸಿದೆ," ಎಂದು ಉರ್ದು ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ರಮೀಜ್ ರಾಜಾ ಹೇಳಿದ್ದಾರೆ.
2005-06ರ ನಂತರ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನದ ಪ್ರವಾಸ ಮಾಡಿಲ್ಲ. ಎರಡು ತಂಡಗಳು ದಶಕಗಳ ಕಾಲ ಪರಸ್ಪರ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಆದರೆ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಪರಸ್ಪರ ಸೆಣಸಾಡಿವೆ.
ಈತ ಭಾರತದಲ್ಲಿನ ನನ್ನ ನೆಚ್ಚಿನ ವೇಗದ ಬೌಲರ್; ಮಾಜಿ ಆಸೀಸ್ ಬೌಲರ್ ಬ್ರೆಟ್ ಲೀ
ಕಳೆದ ಒಂದು ದಶಕದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯುಎಇಯಲ್ಲಿ ಹಲವಾರು ತವರು ಸರಣಿಗಳನ್ನು ಆಯೋಜಿಸುತ್ತಿತ್ತು. ಆದರೆ ಇತ್ತೀಚೆಗೆ ಇತರ ತಂಡಗಳು ಪಾಕಿಸ್ತಾನ ದೇಶಕ್ಕೆ ಪ್ರವಾಸವನ್ನು ಪ್ರಾರಂಭಿಸಿವೆ. ಆದಾಗ್ಯೂ, ಏಷ್ಯಾಕಪ್ಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಮಾಡುವ ಸಾಧ್ಯತೆಗಳು ತುಂಬಾ ಕಡಿಮೆಯಾಗಿವೆ.