
ಐಪಿಎಲ್ ಕೆಲಸ ಮಾಡಿದ್ದು ಈ ಕಾರಣಕ್ಕೆ
"ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿ ಲೋಕಸಭೆಯ ಸದಸ್ಯನಾದ ನಂತರವೂ ಸಹ ಕೆಲಸ ಮಾಡುವುದಕ್ಕೆ ಕಾರಣವೇನೆಂದರೆ ಪ್ರತಿ ತಿಂಗಳು 5000 ಜನಕ್ಕೆ ನಾನು ಆಹಾರ ವ್ಯವಸ್ಥೆ ಮಾಡಲು 25 ಲಕ್ಷ ಹಣ ಬೇಕು. ಇದು ವರ್ಷಕ್ಕೆ ಸುಮಾರು 2.75 ಕೋಟಿ ರೂಪಾಯಿಗಳಾಗುತ್ತದೆ. ಹಾಗೂ ಗ್ರಂಥಾಲಯ ಕಟ್ಟಿಸಲು ನಾನು 25 ಲಕ್ಷ ಖರ್ಚು ಮಾಡಿದ್ದೇನೆ. ಇದಕ್ಕೆಲ್ಲಾ ನಾನು ನನ್ನ ಸ್ವಂತ ಹಣವನ್ನೇ ಖರ್ಚು ಮಾಡುತ್ತಿದ್ದೇನೆ ಹೊರತು ಸರ್ಕಾರ ನೀಡುವ ಹಣದಿಂದಲ್ಲ. ಇದಕ್ಕೆಲ್ಲಾ ಹಣ ನೀಡಲು ನಾನು ಮನೆಯಲ್ಲಿ ಹಣದ ಮರವನ್ನೂ ಬೆಳೆಸಿಲ್ಲ, ಹೀಗಾಗಿ ಐಪಿಎಲ್ ಟೂರ್ನಿಯಲ್ಲಿ ಕೆಲಸ ಮಾಡಿದೆ" ಎಂದು ಗೌತಮ್ ಗಂಭೀರ್ ಟೀಕಾಕಾರರಿಗೆ ಉತ್ತರವನ್ನು ನೀಡಿದ್ದಾರೆ.

ಈ ವಿಷಯವನ್ನು ಹೇಳಿಕೊಳ್ಳುವುದರಲ್ಲಿ ನನಗೆ ಯಾವುದೇ ನಾಚಿಕೆ ಇಲ್ಲ
ಇನ್ನೂ ಮುಂದುವರಿದು ಮಾತನಾಡಿರುವ ಗೌತಮ್ ಗಂಭೀರ್ ನಾನು ಕೆಲಸ ಮಾಡಿದರೆ ಮಾತ್ರ ಆ 5000 ಜನರಿಗೆ ಆಹಾರ ವ್ಯವಸ್ಥೆ ಮಾಡಲು ಸಾಧ್ಯ, ಅದಕ್ಕಾಗಿ ಐಪಿಎಲ್ ಟೂರ್ನಿಯಲ್ಲಿ ಕೆಲಸ ಮಾಡಿದ್ದೇನೆ ಎಂಬುದನ್ನು ಹೇಳಿಕೊಳ್ಳುವುದರಲ್ಲಿ ನನಗೆ ಯಾವುದೇ ನಾಚಿಕೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಸಮಾಜಮುಖಿ ಕೆಲಸಗಳಲ್ಲಿ ಗಂಭೀರ್ ಎತ್ತಿದ ಕೈ
ಇನ್ನು ಕ್ರಿಕೆಟ್ ಹೊರತುಪಡಿಸಿ ಗಂಭೀರ್ ಜನನಾಯಕನಾಗಿ ಯಾವ ರೀತಿ ಕೆಲಸ ಮಾಡುತ್ತಿದ್ದಾರೆ ಎಂಬುದರ ಕುರಿತು ಕಣ್ಣಾಡಿಸಿದರೆ ಅವರ ಉತ್ತಮ ಕಾರ್ಯಗಳು ಕಾಣಸಿಗಲಿವೆ. ಅವರ ಕ್ಷೇತ್ರದಲ್ಲಿ ಉಚಿತ ಭೋಜನ, 1 ರೂಪಾಯಿಗೆ ಹೊಟ್ಟೆ ತುಂಬಾ ಊಟ, ಉಚಿತ ಲೈಬ್ರರಿ ಹೀಗೆ ಹತ್ತು ಹಲವಾರು ಸಮಾಜಮುಖಿ ಕೆಲಸಗಳು ಕಂಡುಬರುತ್ತವೆ.


Click it and Unblock the Notifications












