ಭಾರತ ಕ್ರಿಕೆಟ್ ತಂಡವು ತನ್ನ ಮುಂದಿನ ನಿಯೋಜನೆಗಾಗಿ ಶ್ರೀಲಂಕಾ ಪ್ರವಾಸ ಮಾಡಲಿದೆ. ಅಲ್ಲಿ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಇದಕ್ಕಾಗಿ ಬಿಸಿಸಿಐ ಆಯ್ಕೆ ಸಮಿತಿಯು 2 ಪ್ರತ್ಯೇಕ ತಂಡಗಳನ್ನು ಆಯ್ಕೆ ಮಾಡಿದೆ.
ಇದೇ ವೇಳೆ ಭಾರತ ತಂಡಗಳ ಆಯ್ಕೆ ಕುರಿತು ಮಾಜಿ ಕ್ರಿಕೆಟಿಗರು ಮತ್ತು ಅಭಿಮಾನಿಗಳಿಂದ ಟೀಕೆಗಳು ಕೇಳಿಬರುತ್ತಿವೆ. ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ ಯುಜ್ವೇಂದ್ರ ಚಾಹಲ್, ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಅವರನ್ನು ಆಯಾ ಸ್ವರೂಪಗಳಿಂದ ಕೈಬಿಡುವ ಭಾರತೀಯ ಆಯ್ಕೆ ಸಮಿತಿಯ ನಿರ್ಧಾರದ ಬಗ್ಗೆ ಹರ್ಭಜನ್ ಸಿಂಗ್ ಪ್ರಶ್ನೆ ಎತ್ತಿದ್ದಾರೆ.

ಭಾರತ ಏಕದಿನ ತಂಡದಿಂದ ಸಂಜು ಸ್ಯಾಮ್ಸನ್ರನ್ನು ಹೊರಗಿಡುವುದು ಹೆಚ್ಚು ಟೀಕೆಗೊಳಗಾದ ವಿಷಯಗಳಲ್ಲಿ ಒಂದಾಗಿದೆ. ಕೇರಳದ ವಿಕೆಟ್ಕೀಪರ್-ಬ್ಯಾಟರ್ ಡಿಸೆಂಬರ್ 2023ರಲ್ಲಿ ಪಾರ್ಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ತನ್ನ ಕೊನೆಯ ಏಕದಿನ ಪಂದ್ಯದಲ್ಲಿ ಶತಕ ಗಳಿಸಿದ್ದರು.

ಇದೇ ವೇಳೆ, ಜಿಂಬಾಬ್ವೆ ವಿರುದ್ಧದ ಇತ್ತೀಚಿನ ಟಿ20 ಸರಣಿಯಲ್ಲಿ ತಮ್ಮ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯವನ್ನಾಡಿದ ಅಭಿಷೇಕ್ ಶರ್ಮಾ, ತಮ್ಮ ಎರಡನೇ ಪಂದ್ಯದಲ್ಲಿ ಸ್ಫೋಟಕ ಶತಕ ಬಾರಿಸಿದರು. ಆದಾಗ್ಯೂ, ಅವರನ್ನು ಟಿ20 ತಂಡದಿಂದ ಕೈಬಿಡಲಾಗಿದೆ.
ಮತ್ತೊಂದು ಆಶ್ಚರ್ಯಕರವಾಗಿ ಕೈಬಿಟ್ಟ ಆಟಗಾರರಲ್ಲಿ ಅನುಭವಿ ಯುಜ್ವೇಂದ್ರ ಚಹಾಲ್ ಆಗಿದ್ದಾರೆ. ಲೆಗ್ ಸ್ಪಿನ್ನರ್ ಕಳೆದ ತಿಂಗಳು ಭಾರತ ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಆದರೆ, ಅವರಿಗೆ ಆಡಲು ಅವಕಾಶ ಸಿಗಲಿಲ್ಲ. ಎರಡೂ ಸ್ವರೂಪದ ತಂಡಗಳಲ್ಲಿ ಸ್ಪಿನ್ನರ್ನನ್ನು ಆಯ್ಕೆ ಮಾಡಲಾಗಿಲ್ಲ.
"ಯುಜ್ವೇಂದ್ರ ಚಹಾಲ್, ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಶ್ರೀಲಂಕಾಕ್ಕಾಗಿ ಭಾರತ ತಂಡದ ಭಾಗವಾಗಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ," ಎಂದು ಶ್ರೀಲಂಕಾ ಸರಣಿಗೆ ತಂಡವನ್ನು ಆಯ್ಕೆ ಮಾಡಿದ ನಂತರ ಹರ್ಭಜನ್ ಸಿಂಗ್ ಎಕ್ಸ್ (ಟ್ವಿಟ್ಟರ್)ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಮೊದಲ ನಿಯೋಜನೆ ಶ್ರೀಲಂಕಾದಲ್ಲಿ ನಡೆಯಲಿದೆ. ಕಳೆದ ತಿಂಗಳು ಟಿ20 ವಿಶ್ವಕಪ್ ಪ್ರಶಸ್ತಿಗೆ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ರಾಹುಲ್ ದ್ರಾವಿಡ್ ಅವರಿಂದ ಭಾರತದ ಮಾಜಿ ಕ್ರಿಕೆಟಿಗ ಮುಖ್ಯ ಕೋಚ್ ಹುದ್ದೆ ವಹಿಸಿಕೊಂಡಿದ್ದಾರೆ.
ಜುಲೈ 27ರ ಶನಿವಾರದಂದು ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯವನ್ನು ಆಯೋಜಿಸಲಾಗಿದೆ. ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳು ಜುಲೈ 28 ಮತ್ತು 30ರಂದು ಇದೇ ಸ್ಥಳದಲ್ಲಿ ನಡೆಯಲಿವೆ.
ಟಿ20 ಸರಣಿ ಮುಗಿದ ನಂತರ, ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಏಕದಿನ ಸರಣಿ ನಡೆಯಲಿದೆ. ಮೂರು ಪಂದ್ಯಗಳು ಕ್ರಮವಾಗಿ ಆಗಸ್ಟ್ 2, 4 ಮತ್ತು 7ರಂದು ನಡೆಯಲಿವೆ.

ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.