Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

"ದ್ರಾವಿಡ್ ಇರುವವರೆಗೆ ಎಲ್ಲವೂ ಚೆನ್ನಾಗಿತ್ತು... ಏಕಾಏಕಿ ಏನಾಯಿತು?"; ಹರ್ಭಜನ್ ಸಿಂಗ್

ಟಿ20 ವಿಶ್ವಕಪ್ 2024ರ ಟ್ರೋಫಿ ಗೆದ್ದ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಕಳಪೆ ಪ್ರದರ್ಶನದ ಬಗ್ಗೆ ಭಾರತದ ಮಾಜಿ ದಿಗ್ಗಜ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಭಾರತ ಟಿ20 ವಿಶ್ವಕಪ್ 2024 ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಟಿ20 ವಿಶ್ವಕಪ್ ಗೆದ್ದ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡುತ್ತಿರುವ ಭಾರತ ತಂಡದ ಪ್ರದರ್ಶನದಲ್ಲಿ ದಿಢೀರ್ ಕುಸಿತ ಕಂಡಿದೆ. ಈ ಬಗ್ಗೆ ಹರ್ಭಜನ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ.

ಟೀಮ್ ಇಂಡಿಯಾ ಕಳಪೆ ಪ್ರದರ್ಶನಕ್ಕೆ ಕಾರಣವನ್ನು ಹರ್ಭಜನ್ ಸಿಂಗ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋ ಮೂಲಕ ವಿವರಿಸಿದ್ದಾರೆ. ಆಯ್ಕೆ ಸಮಯದಲ್ಲಿ ಆಟಗಾರರ ಪ್ರದರ್ಶನಕ್ಕೆ ಹೋಲಿಸಿದರೆ, ಅವರ ಖ್ಯಾತಿಗೆ ಪ್ರಾಮುಖ್ಯತೆ ನೀಡಬೇಡಿ ಎಂದು ಹರ್ಭಜನ್ ಸಿಂಗ್ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ಗೆ ಸಲಹೆ ನೀಡಿದ್ದಾರೆ.

Harbhajan Singh expresses surprise over Team India s poor performance

ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 0-3 ಅಂತರದ ಹೀನಾಯ ಸೋಲು ಮತ್ತು ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 3-1 ಅಂತರದ ಸೋಲನ್ನು ಎದುರಿಸಬೇಕಾಯಿತು. ಒಂದು ದಶಕದಲ್ಲಿ ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ವಶಪಡಿಸಿಕೊಂಡಿರುವುದು ಇದೇ ಮೊದಲು.

ಭಜ್ಜಿ ಹೇಳಿದ್ದೇನು?

ರಾಹುಲ್ ದ್ರಾವಿಡ್ ಕೋಚ್ ಆಗುವವರೆಗೂ ಎಲ್ಲವೂ ಸರಿಯಾಗಿತ್ತು. ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದು ಎಲ್ಲವೂ ಸರಿಯಾಗಿದೆ. ಆದರೆ ಇದ್ದಕ್ಕಿದ್ದಂತೆ ಏನಾಯಿತು? ಗೌತಮ್ ಗಂಭೀರ್ ಅವರ ಅವಧಿಯಲ್ಲಿ ಕೋಚಿಂಗ್ ಬದಲಾವಣೆಯ ನಂತರ ಫಲಿತಾಂಶದಲ್ಲಿ ಭಾರಿ ಕುಸಿತ ಕಂಡಿದೆ. ಟೀಮ್ ಇಂಡಿಯಾ ಟಿ20ಯಲ್ಲಿ ತನ್ನ ಪ್ರಾಬಲ್ಯವನ್ನು ಉಳಿಸಿಕೊಂಡಿದೆ. ಆದರೆ ಟೆಸ್ಟ್ ಮತ್ತು ಏಕದಿನದಲ್ಲಿ ಭಾರತ ತಂಡದ ಪ್ರದರ್ಶನವು ಸ್ಥಿರವಾಗಿಲ್ಲ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಕಳೆದ ಆರು ತಿಂಗಳಲ್ಲಿ ನಾವು ಶ್ರೀಲಂಕಾ ವಿರುದ್ಧ ಸೋತಿದ್ದೇವೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಕಳೆದುಕೊಂಡಿದ್ದೇವೆ. ಈಗ ನಾವು ಆಸ್ಟ್ರೇಲಿಯಾದಲ್ಲಿ 3-1 ರಿಂದ ಸೋತಿದ್ದೇವೆ. ಎಲ್ಲಾ ಫಲಿತಾಂಶ ಕುಸಿತವಾಗಿದೆ ಎಂದು ತೋರುತ್ತದೆ ಎಂದು ಟೀಮ್ ಇಂಡಿಯಾ ಪ್ರದರ್ಶನದ ಮೇಲೆ ಭಜ್ಜಿ ಪ್ರಶ್ನೆ ಎತ್ತಿದ್ದಾರೆ.

Harbhajan Singh expresses surprise over Team India s poor performance

ಯುವ ಆಟಗಾರರ ತಪ್ಪೇನು?

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅಭಿಮನ್ಯು ಈಶ್ವರನ್ ಮತ್ತು ಸರ್ಫರಾಜ್ ಖಾನ್ ಅವರಂತಹ ಭರವಸೆಯ ಆಟಗಾರರಿಗೆ ಅವಕಾಶ ನೀಡಲಿಲ್ಲ. ಆದರೆ ಅವರು ತಂಡದ ಭಾಗವಾಗಿದ್ದರು. ಅಭಿಮನ್ಯು ಈಶ್ವರನ್ ಅವರನ್ನು ಪ್ರವಾಸಕ್ಕೆ ಕರೆದೊಯ್ಯಲಾಯಿತು. ಆದರೆ ಅವರು ಆಡಲಿಲ್ಲ. ಅವರಿಗೆ ಅವಕಾಶ ಸಿಕ್ಕರೆ ಟೀಮ್ ಇಂಡಿಯಾಗೆ ಉತ್ತಮ ಆಟಗಾರನಾಗಬಹುದಾಗಿತ್ತು. ಸರ್ಫರಾಜ್ ಸ್ಥಿತಿಯೂ ಅದೇ. ಉತ್ತಮ ಪ್ರದರ್ಶನ ನೀಡುವ ಆಟಗಾರ ಆಡಬೇಕು. ನೀವು ಸ್ಟಾರ್‌ಡಂ ಆಧಾರದ ಮೇಲೆ ಆಟಗಾರರನ್ನು ಆಯ್ಕೆ ಮಾಡಬಾರದು ಎಂದು ಹರ್ಭಜನ್ ಸಿಂಗ್ ತಿಳಿಸಿದ್ದಾರೆ.

ಕಠಿಣ ನಿರ್ಧಾರಕ್ಕೆ ಒತ್ತಾಯ

ಏಳು ತಿಂಗಳ ನಂತರ ಇಂಗ್ಲೆಂಡ್ ಪ್ರವಾಸದ ಮೊದಲು ಯಾವುದೇ ಟೆಸ್ಟ್ ಪಂದ್ಯಗಳಿಲ್ಲದೆ, ಟೀಮ್ ಇಂಡಿಯಾ ಆತ್ಮಾವಲೋಕನ ಮತ್ತು ಹೊಸ ತಂಡವಾಗಿ ಕಣಕ್ಕಿಳಿಯಲು ಸಮಯವಿದೆ ಎಂದು ಹರ್ಭಜನ್ ಸಿಂಗ್ ವಿಶ್ವಾಸವ್ಯಕ್ತಪಡಿಸಿದ್ದಾರೆ. ಪ್ರದರ್ಶನದ ಆಧಾರದ ಮೇಲೆ ಆಯ್ಕೆಗಳನ್ನು ಮಾಡಲು ಮತ್ತು ತಂಡವನ್ನು ಮರಳಿ ಟ್ರ್ಯಾಕ್‌ಗೆ ತರಲು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹರ್ಭಜನ್ ಸಿಂಗ್ ಬಿಸಿಸಿಐ ಮತ್ತು ಆಯ್ಕೆದಾರರನ್ನು ಒತ್ತಾಯಿಸಿದ್ದಾರೆ.

Story first published: Monday, January 6, 2025, 19:08 [IST]
Other articles published on Jan 6, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+